Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್‌

Chikkaballapur

NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್‌

Public TV
Last updated: December 17, 2024 10:30 pm
Public TV
Share
4 Min Read
K Sudhakar
SHARE

– ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪ್ರಮಾಣದಲ್ಲಿ 239% ಏರಿಕೆ

ನವದೆಹಲಿ: ಕಾಂಗ್ರೆಸ್‌ (Congress) ಹಾಗೂ ಅದರ ಮಿತ್ರಪಕ್ಷಗಳು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿವೆ. ಅಂಕಿ ಅಂಶಗಳನ್ನು ನೋಡಿದರೆ ಎನ್‌ಡಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನವನ್ನು ರಾಜ್ಯಗಳಿಗೆ ನೀಡಿದೆ ಎಂದು ಗೊತ್ತಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಪ್ರತಿಪಾದಿಸಿದ್ದಾರೆ.

ಲೋಕಸಭೆಯಲ್ಲಿ (Lok Sabha) ಪೂರಕ ಅನುದಾನಗಳ ಬೇಡಿಕೆ ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದಲ್ಲೀಗ ತೆರಿಗೆ ಹಂಚಿಕೆಯಲ್ಲಿ (Tax sharing) ಅನ್ಯಾಯ ಎಂಬ ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್‌ ಹಾಗೂ ಅದರ ಮಿತ್ರಪಕ್ಷಗಳು ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿವೆ. ಆದ್ರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಎಲ್ಲ ರಾಜ್ಯಗಳಿಗೆ ಉತ್ತಮ ಸಹಕಾರ ನೀಡಿದೆ. ಯುಪಿಎ ಸರ್ಕಾರ ಇದ್ದಾಗ, ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ 30.5% ನಿಂದ 32% ಗೆ ಏರಿಕೆಯಾಗಿತ್ತು. ಎನ್‌ಡಿಎ ಅವಧಿಯಲ್ಲಿ ಇದು 40% ಗೆ ಏರಿಕೆಯಾಗಿದೆ. 2004-2014 ರ ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ 81,795 ಕೋಟಿ ರೂ. ತೆರಿಗೆ ಹಂಚಿಕೆಯಾಗಿದೆ. 2014-2024 ರ ಎನ್‌ಡಿಎ ಅವಧಿಯಲ್ಲಿ, 2.77 ಲಕ್ಷ ಕೋಟಿ ರೂ. ತೆರಿಗೆ ಹಂಚಿಕೆಯಾಗಿದೆ. ಅಂದರೆ ತೆರಿಗೆ ಹಂಚಿಕೆ ಪ್ರಮಾಣದಲ್ಲಿ 239% ಏರಿಕೆಯಾಗಿದೆ ಎಂದು ತಿಳಿಸಿದರು.

2004-2014 ರ ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ 60,779 ಕೋಟಿ ರೂ. ಅನುದಾನ (Grant in Aid) ದೊರೆತಿದೆ. 2014-2024 ರ ಎನ್‌ಡಿಎ ಅವಧಿಯಲ್ಲಿ, 2.08 ಲಕ್ಷ ಕೋಟಿ ರೂ. ಅನುದಾನ ಸಿಕ್ಕಿದೆ. ಅಂದರೆ ಅನುದಾನ 243% ರಷ್ಟು ಏರಿಕೆ ಕಂಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೂಡಲೇ ಈ ನೀತಿಯನ್ನು ರದ್ದುಪಡಿಸಿದೆ. ಸರ್ಕಾರ ಹೊಸ ರಾಜ್ಯ ಶಿಕ್ಷಣ ನೀತಿ ತರಲಿದೆ ಎಂದು ಸ್ಪಷ್ಟನೆ ನೀಡಿದ್ದರು, ಅಂತಹ ಯಾವುದೇ ನೀತಿ ಬಂದಿಲ್ಲ. ಇದು ಯುವಜನರಿಗೆ ಕಾಂಗ್ರೆಸ್‌ ನೀಡುವ ನ್ಯಾಯವೇ? ಎಂದು ಪ್ರಶ್ನೆ ಮಾಡಿದರು.

ರೈತರಿಗೆ ನೆರವು:
2013-2014ರ ಯುಪಿಎ ಅವಧಿಯಲ್ಲಿ ರೈತರಿಗೆ 7 ಲಕ್ಷ ಕೋಟಿ ರೂ.ವರೆಗೆ ಸಾಲ ನೀಡಲಾಗಿತ್ತು. 2023-24 ರ ಎನ್‌ಡಿಎ ಅವಧಿಯಲ್ಲಿ 19 ಲಕ್ಷ ಕೋಟಿ ರೂ. ಸಾಲ ನೀಡಲಾಗಿದೆ. ಕೋವಿಡ್‌ ಸಮಯದಲ್ಲಿ ರಸಗೊಬ್ಬರ ದರ ದಿಢೀರನೆ ಏರಿಕೆಯಾದರೂ ಪ್ರಧಾನಿ ನರೇಂದ್ರ ಮೋದಿ ಅದರ ಹೊರೆಯನ್ನು ರೈತರ ಮೇಲೆ ಹೇರಲಿಲ್ಲ. ಇಂದಿಗೂ ರಸಗೊಬ್ಬರ ದರ ಏರಿಕೆ ಕಂಡಿಲ್ಲ. ಕನಿಷ್ಠ ಬೆಂಬಲ ಬೆಲೆಯಡಿ ಯುಪಿಎ ಸರ್ಕಾರ ಕ್ವಿಂಟಾಲ್‌ ಭತ್ತಕ್ಕೆ 1,310 ರೂ. ನೀಡುತ್ತಿದ್ದು, ಈಗ 3,600 ರೂ. ನೀಡಲಾಗುತ್ತಿದೆ. ಇದೇ ರೀತಿ ಎಲ್ಲ ಧಾನ್ಯಗಳಿಗೆ ಹೆಚ್ಚು ದರ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಯುಪಿಎ ಅವಧಿಯಲ್ಲಿ ರೈತರಿಗೆ ಬಜೆಟ್‌ನಲ್ಲಿ 22,000 ಕೋಟಿ ರೂ. ನೀಡುತ್ತಿದ್ದರೆ, ಮೋದಿ ಸರ್ಕಾರ ಆ ಮೊತ್ತವನ್ನು 2023-24 ರಲ್ಲಿ 1,22,000 ಕೋಟಿ ರೂ.ಗೆ ಹೆಚ್ಚಳ ಮಾಡಿದೆ. 2013-2014 ರಲ್ಲಿ ರಸಗೊಬ್ಬರ ಸಹಾಯಧನ 73,000 ಕೋಟಿ ರೂ. ಆಗಿತ್ತು. ಅದನ್ನು 2023-24 ರಲ್ಲಿ ಮೋದಿ ಸರ್ಕಾರ 2.55 ಲಕ್ಷ ಕೋಟಿ ರೂ. ಗೆ ಏರಿಸಿದೆ. ಕೃಷಿ ಕ್ಷೇತ್ರದಲ್ಲಿ ಉತ್ತಮ ಯೋಜನೆಗಳ ಜಾರಿ ಮೂಲಕ ಮಾತ್ರ ಸುಧಾರಣೆ ಸಾಧ್ಯವಾಗುತ್ತದೆ. ಎನ್‌ಡಿಎ ಅವಧಿಯಲ್ಲಿ ಕೃಷಿ ಬೆಳವಣಿಗೆ ದರ 3.4% ಗೆ ಏರಿದೆ. 9,000 ಕೃಷಿ ಸಂಘಗಳನ್ನು ಆರಂಭಿಸಲಾಗಿದೆ. ಈ ಕ್ರಮಗಳು ರೈತ ಸಮುದಾಯವನ್ನು ಸಬಲೀಕರಣಗೊಳಿಸಿದೆ ಎಂದು ಹೇಳಿದರು.

ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್‌ ಬಡವರಿಗೆ ಅನ್ಯಾಯ ಮಾಡಿ, ಶ್ರೀಮಂತರಿಗೆ ನೆರವಾಗಿದೆ. ಆದರೆ ಬಿಜೆಪಿ ಅವಧಿಯಲ್ಲಿ ಆಡಳಿತವನ್ನು ಬೃಹತ್‌ ಭ್ರಷ್ಟಾಚಾರದಿಂದ ಬೃಹತ್‌ ಯೋಜನೆಗಳ ಕಡೆಗೆ ತಿರುಗಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿ ಸರ್ಕಾರ ಭದ್ರ ಅಡಿಪಾಯ ಹಾಕಿದೆ ಎಂದರು.

ಇದು ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಕುರಿತು ಹೊಂದಿರುವ ಬದ್ಧತೆ. ಬಜೆಟ್‌ ಅವಧಿಯನ್ನು 2017-18 ರಿಂದ ಫೆಬ್ರವರಿ ಮೊದಲ ದಿನಕ್ಕೆ ಬದಲಾಯಿಸಿರುವುದರಿಂದ ರಾಜ್ಯಗಳು ಇದಕ್ಕೆ ಪೂರಕವಾಗಿ ಬಜೆಟ್‌ ರೂಪಿಸಬಹುದು. ಈ ಸುಧಾರಣೆಯಿಂದಾಗಿ ಯೋಜನೆಗಳಿಗೆ ಅನುದಾನ ನಿಗದಿ, ಕೇಂದ್ರ ಸರ್ಕಾರಿ ಯೋಜನೆಗಳ ಜಾರಿ, ಅಗತ್ಯತೆಗಳ ಗುರುತಿಸುವಿಕೆ, ಮೊದಲಾದ ಸಂಗತಿಗಳಲ್ಲಿ ರಾಜ್ಯ ಸರ್ಕಾರಗಳು ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದರು.

ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಜಾಗತಿಕ ಸವಾಲುಗಳಿದ್ದರೂ ಅವರು ಸಮರ್ಥ ಸಚಿವರು ಎಂದು ತೋರಿಸಿಕೊಟ್ಟಿದ್ದಾರೆ. ಉತ್ತಮ ಆರ್ಥಿಕ ಸಚಿವರಾಗಲು ಹೃದಯ ಮತ್ತು ಬುದ್ಧಿ ಬೇಕಿದ್ದು, ಅಂತಹ ಸಾಮರ್ಥ್ಯವನ್ನು ನಿರ್ಮಲಾ ಹೊಂದಿದ್ದಾರೆ ಎಂದು ಶ್ಲಾಘಿಸಿದರು.

ಸಮಾಧಾನ್‌ ಪೋರ್ಟಲ್‌ ಬಗ್ಗೆ ಪ್ರಶ್ನೆ :
ಕೈಗಾರಿಕಾ ವಿವಾದ ಮತ್ತು ದೂರುಗಳ ವಿಲೇವಾರಿಗಾಗಿ ಸ್ಥಾಪಿಸಲಾಗಿರುವ ಸಮಾಧಾನ್ ಪೋರ್ಟಲ್ ಅನ್ನು ರಾಜ್ಯ/ಪ್ರಾದೇಶಿಕ ಮಟ್ಟದ ವ್ಯವಸ್ಥೆಗಳೊಂದಿಗೆ ಸಮನ್ವಯಗೊಳಿಸಿ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಾಧಾನ್ ಪೋರ್ಟಲ್‌ ಸೇವೆ ಸಿಗುವಂತೆ ಮಾಡುವ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನಸುಖ್ ಮಾಂಡವೀಯ ಅವರಿಗೆ ಸಂಸದ ಡಾ.ಕೆ.ಸುಧಾಕರ್‌ ಪ್ರಶ್ನೆ ಕೇಳಿದರು.

ದೇಶದ ಒಟ್ಟು ಕಾರ್ಮಿಕರಲ್ಲಿ, ಅಸಂಘಟಿತ ವಲಯದ ಕಾರ್ಮಿಕರ ಪ್ರಮಾಣ 80% ರಷ್ಟಿದೆ. ಈ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಮಾಧಾನ್‌ ಪೋರ್ಟಲ್‌ ಬಳಸುವ ಹೊಸ ವ್ಯವಸ್ಥೆ ತರಬಹುದೇ? ಜೊತೆಗೆ ಇ-ಶ್ರಮ ಹಾಗೂ ಸಮಾಧಾನ್‌ ಪೋರ್ಟಲ್‌ ಒಂದಾಗಿ ಕೆಲಸ ಮಾಡುವಂತೆ ನವೀಕರಣ ಮಾಡಬಹುದೇ ಎಂದು ಅವರು ಪ್ರಶ್ನೆ ಮಾಡಿದರು.

ಅಸಂಘಟಿತ ವಲಯದ 30 ಕೋಟಿಗೂ ಅಧಿಕ ಕಾರ್ಮಿಕರು ಇ-ಶ್ರಮ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದು, ಅವರು ಕೂಡ ಸಮಾಧಾನ್‌ ಪೋರ್ಟಲ್‌ನಲ್ಲಿ ಅಹವಾಲು ಸಲ್ಲಿಸಬಹುದು ಎಂದು ಸಚಿವರು ಉತ್ತರಿಸಿದರು.

TAGGED:bjpcongressK SudhakarKarnataka Grantsnarendra modindataxಅನುದಾನಕರ್ನಾಟಕಕಾಂಗ್ರೆಸ್ಕೆ.ಸುಧಾಕರ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
10 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
17 minutes ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
47 minutes ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
50 minutes ago
US Israel Strike on Iran
Latest

ಇರಾನ್‌ನ ಬಾಲಕಿಯರ ಶಾಲೆ ಮೇಲೆ ಇಸ್ರೇಲ್‌-ಅಮೆರಿಕ ಏರ್‌ಸ್ಟ್ರೈಕ್; ಮೃತರ ಸಂಖ್ಯೆ 85ಕ್ಕೆ ಏರಿಕೆ

Public TV
By Public TV
1 hour ago
Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?