ತಾಕತ್ತಿದ್ರೆ ಮೈಸೂರಿಗೆ ಬಂದು ಪಕ್ಷ ಸಂಘಟನೆ ಮಾಡಿ ಗೆಲ್ಲಿ- ಸಿದ್ದುಗೆ ಶ್ರೀನಿವಾಸ್ ಪ್ರಸಾದ್ ಚಾಲೆಂಜ್

Public TV
1 Min Read
SIDDARAMAIAH SRINIVAS PRASAD

ಚಾಮರಾಜನಗರ: ತಾಕತ್ತಿದ್ರೆ ಮೈಸೂರಿನಲ್ಲಿ ಚುನಾವಣೆಗೆ ಬನ್ನಿ, ಪಕ್ಷ ಸಂಘಟನೆ ಮಾಡಿ ಗೆಲ್ಲಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಸವಾಲು ಹಾಕಿದ್ದಾರೆ.

SRINIVAS PRASAD 1

ಚಾಮರಾಜನಗರದ ನಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದು ಜಮೀರ್ ಕಾಲಿಡಿದುಕೊಂಡು ಚಾಮರಾಜಪೇಟೆಗೆ ಹೋಗುತ್ತಿದ್ದಾರೆ. ನಿಮಗೆ ಧೈರ್ಯ ಇದ್ದರೆ ಮೈಸೂರಿಗೆ ಬಂದು ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಗೆಲ್ಲಿ. ಮೊದಲು ಮುಖ್ಯಮಂತ್ರಿಗಳಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಾಗ್ದಾಳಿ ನಡೆಸಿದ್ದಾರೆ.

FotoJet 4 28

ನೀವು ಮುಖ್ಯಮಂತ್ರಿಯಾಗಿ ಎರಡೆರಡು ಕ್ಷೇತ್ರದಲ್ಲಿ ಚುನಾವಣೆ ನಿಲ್ಲುತ್ತೀರಾ ಎಂದು ಗುಡುಗಿದ ಸಂಸದರು, ಬಿಜೆಪಿಯನ್ನ ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಮೇಥಿ ಕ್ಷೇತ್ರದಲ್ಲಿ ಸೋತು ಸುಣ್ಣವಾಗಿದ್ದಾರೆ. ಕೇವಲ ಸೋನಿಯಾ ಗಾಂಧಿ ಮಾತ್ರ ಉತ್ತರ ಪ್ರದೇಶದಲ್ಲಿ ಗೆದ್ದಿದ್ದಾರೆ ಎಂದರು. ಇದನ್ನೂ ಓದಿ: ಅನುಭವಿ, ಹಿರಿಯ ನಾಯಕ ಶ್ರೀನಿವಾಸಗೌಡ ಕಾಂಗ್ರೆಸ್ಸಿಗೆ ಬಂದ್ರೆ ಒಳ್ಳೆಯದು: ರಮೇಶ್ ಕುಮಾರ್

SRINIVAS PRASAD

ರಾಹುಲ್ ಗಾಂಧಿ ಕೇರಳಕ್ಕೆ ಪಲಾಯನ ಮಾಡಿದ್ದು, ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ನಿಮ್ಮ ಪಾರ್ಟಿಯನ್ನ ಬಲಪಡಿಸಿ, ಕೇರಳದಲ್ಲಿ ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ನಾಯಕರಿಗೆ ಸಂಸದ ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *