ತುಮಕೂರು: ಕ್ಷುಲ್ಲಕ ವಿಚಾರಕ್ಕೆ ಬಿಜೆಪಿ(BJP) ಪುರಸಭಾ ಸದಸ್ಯ ಹಾಗೂ ಆತನ ಪತ್ನಿ ಯುವಕನೊಬ್ಬನಿಗೆ ಥಳಿಸಿರುವ ಘಟನೆ ತುಮಕೂರು(Tumakuru) ಜಿಲ್ಲೆಯ ಗುಬ್ಬಿ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ.
ನಗರದಲ್ಲಿ ಯುವಕರು ಗಣಪತಿ ವಿಸರ್ಜನೆ ಮಾಡಿ, ವಾಪಸ್ಸಾಗುತ್ತಿದ್ದ ವೇಳೆ ಕಾರ್ಪೋರೇಟರ್ ಕೃಷ್ಣಮೂರ್ತಿ ಹಾಗೂ ಆತನ ಪತ್ನಿ ಯುವಕನೊಬ್ಬನಿಗೆ ಥಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಬೆಂಗಳೂರಿನ ಎಕೋಸ್ಪೇಸ್ನಲ್ಲಿ ಮುಳುಗಿದ 40 ಐಷಾರಾಮಿ ಕಾರುಗಳು!
ಕಾರ್ಪೋರೇಟರ್ ಹಾಗೂ ಆತನ ಪತ್ನಿ ಯುವಕನಿಗೆ ಥಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ