Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ

Bengaluru City

ಜೆಡಿಎಸ್ ಶಾಸಕರಿಗೆ 100 ಕೋಟಿ, ಸಚಿವ ಸ್ಥಾನದ ಆಫರ್ ಬಿಜೆಪಿ ಕೊಟ್ಟಿದೆ: ಕುಮಾರಸ್ವಾಮಿ

Public TV
Last updated: May 16, 2018 2:22 pm
Public TV
Share
3 Min Read
hdk bday 1
SHARE

ಬೆಂಗಳೂರು: ನಮ್ಮ ಪಕ್ಷದ ಶಾಸಕರಿಗೆ ಬಿಜೆಪಿ 100 ಕೋಟಿ ಮತ್ತು ಸಚಿವ ಸ್ಥಾನದ ಆಫರ್ ನೀಡಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‍ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಶಾಸಕರೆಲ್ಲಾ ಒಗ್ಗಟ್ಟಾಗಿದ್ದೇವೆ. ಒಗ್ಗಟ್ಟು ಮುರಿಯಲು ಬಿಜೆಪಿಯಿಂದ ಸಾಧ್ಯವಿಲ್ಲ. ಕಪ್ಪು ಹಣ ಕೊಡುತ್ತಾರೋ ಅಥವಾ ಬಿಳಿ ಹಣ ಕೊಡುತ್ತಾರೋ ಹೇಳಬೇಕು. ಕಪ್ಪು ಹಣವನ್ನು ಬಿಜೆಪಿಯವರು ಇಟ್ಟುಕೊಂಡಿದ್ದಾರೆ. ಸಂವಿಧಾನದ ಸಂಸ್ಥೆಗಳನ್ನು ಬಿಜೆಪಿ ತನ್ನ ಕೈಯಲ್ಲಿ ಇಟ್ಟುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ವ್ಯವಸ್ಥೆ ರಕ್ಷಣೆ ಮಾಡುತ್ತಿಲ್ಲ. ಆಪರೇಷನ್ ಕಮಲ ಮಾಡಿದ್ದವರು ಬಿಜೆಪಿ ಅವರು. ಈಗ ಮತ್ತೆ ಕುದುರೇ ವ್ಯಾಪಾರಕ್ಕೆ ಮುಂದಾಗಿದ್ದಾರೆ. ರಾಜ್ಯದ ಜನತೆ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

10 ದಿನಗಳಿಂದ ಮಾಧ್ಯಮಗಳಿಗೆ ತೊಂದರೆ ಆಗಿರುವುದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ. ನಾಡಿನ ಜನತೆಗೆ, ಪಕ್ಷದ ನಾಯಕರು, ಕಾರ್ಯಕರ್ತರು, ಬಿಎಸ್‍ವೈ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಫಲಿತಾಂಶ ನನಗೆ ಸಂತೋಷ ತಂದಿಲ್ಲ. ನಾಡಿನ ಅಭಿವೃದ್ಧಿಗೆ ಜನ ಉತ್ತಮ ನಿರ್ಧಾರ ಮಾಡಿಲ್ಲ ಅನ್ನೋ ಕೊರಗಿದೆ ಎಂದರು.

ಕೆಲವು ಕೃತಕ ವಿಷಯ ಸೃಷ್ಟಿಸಿದ್ದರಿಂದ ಈ ಫಲಿತಾಂಶ ಬಂದಿದೆ. ಕೆಲವರು ಜೆಡಿಎಸ್ ನ ಮುಗಿಸಲು ಹೋಗಿ ಬಿಜೆಪಿಗೆ 104 ಸ್ಥಾನ ಬಂದಿದೆ. ಸರಿಯಾಗಿ ಇದ್ದಿದ್ದರೆ ಬಿಜೆಪಿಗೆ 80 ಸ್ಥಾನ ಬರುತ್ತಿರಲಿಲ್ಲ. ಮೋದಿ ಅವರು ಬಹುಮತ ಇಲ್ಲದೇ ಇದ್ದರೂ ಸರ್ಕಾರ ಮಾಡಬಾರದು ಅಂತ ಮುಂದಾಗಿದ್ದಾರೆ. ಮೋದಿ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಮೋದಿ ಅವರ ಸ್ಥಾನಕ್ಕೆ ಅದು ಶೋಭೆ ತರಲ್ಲ ಎಂದು ಕಿಡಿಕಾರಿದರು.

hdk

ಕಾಂಗ್ರೆಸ್ ನಮ್ಮನ್ನು ಬೆಂಬಲಿಸಿರುವುದಕ್ಕೆ ವೈಯಕ್ತಿಕ ಕೃತಜ್ಞತೆ ಸಲ್ಲಿಸುತ್ತೇನೆ. ಅಧಿಕಾರ ಹಿಡಿಯುವ ದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ. ಈ ರೀತಿ ಮುಖ್ಯಮಂತ್ರಿ ಆಗುವ ತೀರ್ಪನ್ನು ಜನ ನೀಡಿದ್ದಾರೆ. ಬಿಜೆಪಿಯವರು ಅಧಿಕಾರ ಹಿಡಿಯಲು ಹೋಗುತ್ತಿದ್ದಾರೆ. ಬಿಜೆಪಿಗೆ 9 ಸ್ಥಾನ ಕೊರತೆ ಇದೆ. ನಾವು 116 ಸ್ಥಾನ ಪಡೆದಿದ್ದೇವೆ. ಜೆಡಿಎಸ್-ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ರಾಜ್ಯಪಾಲರಿಗೆ ನಾಗಲ್ಯಾಂಡ್, ಮಣಿಪುರಿಯ ಚಿತ್ರಣ ನೀಡಿದ್ದೇವೆ. ಅಲ್ಲಿ ಬಿಜೆಪಿ ಕಡಿಮೆ ಇದ್ದರೂ ಅಧಿಕಾರ ಹಿಡಿದಿದೆ. ಅಲ್ಲಿ ಅವರು ಅಧಿಕಾರ ಪಡೆಯಬಹುದು. ನಾವು ಪಡೆಯಬಾರದಾ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿಯನ್ನ ಸುಲಭವಾಗಿ ಬಿಟ್ಟು ಬಂದ ಕುಟುಂಬ ನಮ್ಮದು. ನನ್ನ ಪಕ್ಷ ಉಳಿಸಿಕೊಳ್ಳಲು ಬಿಜೆಪಿ ಜೊತೆ ಹೊಂದಾಣಿಕೆ ಹಿಂದೆ ಮಾಡಿಕೊಂಡಿದ್ದೆ. ಆಗ ಯಡಿಯೂರಪ್ಪ ಸೇರಿದಂತೆ 40 ಶಾಸಕರು ಕಾಂಗ್ರೆಸ್, ಜೆಡಿಎಸ್ ಸೇರೋಕೆ ಮುಂದಾಗಿದ್ದರು. ಆದರೆ ನಾನು ಅವತ್ತು ಯಡಿಯೂರಪ್ಪರನ್ನ ದಾರಿ ತಪ್ಪಿಸಿಲ್ಲ. ಆದರೆ ಅವತ್ತು ತಂದೆಯವರ ಮಾತಿಗೆ ವಿರುದ್ಧವಾಗಿ ಹೋದೆ. ನಮ್ಮ ತಂದೆಯವರಿಗೆ ಕಪ್ಪು ಚುಕ್ಕಿ ತಂದಿದ್ದೇನೆ. ಶಾಸಕರ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಜೊತೆ ಹೋಗಲು ತೀರ್ಮಾನ ಮಾಡಿದ್ದೇನೆ. ಎರಡು-ಮೂರು ಶಾಸಕರು ಇನ್ನು ಬರಬೇಕು. ಎರಡು ಪಕ್ಷದ ಕಡೆಯಿಂದ ನನಗೆ ಆಫರ್ ಇದೆ. ಆದರೆ ನನ್ನಿಂದ ಆಗಿರುವ ಕಪ್ಪು ಚುಕ್ಕಿ ತೊಡೆದು ಹಾಕಲು ನಾನು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದೇನೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಾನೇನು ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆಯಿಲ್ಲ. 2006 ರಲ್ಲಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. 20 ತಿಂಗಳು ಅಧಿಕಾರ ಮಾಡಿದ್ದೇನೆ. ಕಾಂಗ್ರೆಸ್ ಬೆಂಬಲದಿಂದ ಮುಖ್ಯಮಂತ್ರಿ ಆಗಿದ್ದೇನೆ. ಜನರಿಂದ ಆದ ಮುಖ್ಯಮಂತ್ರಿ ಅಲ್ಲ ಅನ್ನೋ ನೋವಿದೆ. ನಾವು ಅಧಿಕಾರಕ್ಕಾಗಿ ಹಿಂದೆ ಹೋದವರಲ್ಲ ಎಂದು ಮೋದಿ ಅವರಿಗೆ ಪ್ರಶ್ನಿಸಿದರು.

ಶೃಂಗೇರಿ ತಾಯಿಯ ಆಶೀರ್ವಾದದಿಂದ ಮತ್ತೆ ಅವಕಾಶ ಬಂದಿದೆ. ದೇವೇಗೌಡರ ಜಾತ್ಯಾತೀತ ನಿಲುವಿಗೆ ಕಪ್ಪು ಚುಕ್ಕಿ ಹೊಡೆದು ಹಾಕಲು ಈ ನಿರ್ಧಾರ ಮಾಡಿದ್ದೇನೆ. ತೃತೀಯ ರಂಗದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಹೇಳಿದ್ದಾರೆ. ಮಾನಸಿಕವಾಗಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಜನರ ಜಾತಿ ವ್ಯಾಮೋಹದಿಂದ ಈ ರಿಸಲ್ಟ್ ಬಂದಿದೆ. ಜನರ ಈ ನಿರ್ಧಾರ ನನ್ನ ವಿಷನ್ ಸಂಪೂರ್ಣ ಮಾಡುವುದಕ್ಕೆ ಆಗುತ್ತೊ ಇಲ್ಲವೋ ಗೊತ್ತಿಲ್ಲ ಎಂದರು.

 

TAGGED:Bangalorebjpcongresskarnataka electionsKarnataka Elections 2018KumaraswamyNamma ElectionsPublic TVಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಕಾಂಗ್ರೆಸ್ಕುಮಾರಸ್ವಾಮಿನಮ್ಮ ಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood
Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories

You Might Also Like

Lokayuktha Raid
Bellary

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ

Public TV
By Public TV
49 minutes ago
Siddaramaiah 2 3
Bengaluru City

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Public TV
By Public TV
1 hour ago
Chamundeshwari Temple atop Chamundi Hills 20171007135340 e1597639651188
Bengaluru City

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Public TV
By Public TV
1 hour ago
School Girls
Court

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Public TV
By Public TV
1 hour ago
KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
2 hours ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?