ಚನ್ನಪಟ್ಟಣದಲ್ಲಿಂದು ಪರಿವರ್ತನಾ ಯಾತ್ರೆ- ಡಿಕೆಶಿಗೆ ಸೆಡ್ಡು ಹೊಡೆಯಲು ಸಿ.ಪಿ.ಯೋಗೇಶ್ವರ್ ಸಜ್ಜು

Public TV
1 Min Read
dks yogeshwar

ರಾಮನಗರ: ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿ.ಪಿ.ಯೋಗೇಶ್ವರ್ ತೊಡೆ ತಟ್ಟಿ ನಿಂತಿದ್ದಾರೆ. ಚನ್ನಪಟ್ಟಣದಲ್ಲಿ ಡಿಕೆಶಿ ಶಕ್ತಿ ಪ್ರದರ್ಶನ ನಡೆಸಿದ ಬೆನ್ನಲ್ಲೇ ಯೋಗೇಶ್ವರ್ ಕೂಡ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.

rmg bjp 4

ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಹಾಗೂ ಡಿಕೆ ಬ್ರದರ್ಸ್‍ ಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯನ್ನ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪರಿವರ್ತನಾ ಯಾತ್ರೆಗೆ ಈಗಾಗಲೇ ಸಿದ್ಧತೆಗಳು ನಡೆಯುತ್ತಾ ಇವೆ.

rmg bjp 3

ಇಂದು ಮಧ್ಯಾಹ್ನ ಚನ್ನಪಟ್ಟಣದ ಹೊರವಲಯದಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶ ನಡೆಯಲಿದ್ದು, ಬಿಎಸ್‍ವೈ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಗೆ ಬಿಎಸ್‍ವೈ ತಿರುಗೇಟು ನೀಡಲು ಸಜ್ಜಾಗಿದ್ರೆ, ಡಿಕೆಶಿಗೆ ಯೋಗೇಶ್ವರ್ ಮುಯ್ಯಿಗೆ ಮುಯ್ಯಿ ತೀರಿಸಲು ರೆಡಿಯಾಗಿದ್ದಾರೆ.

yogeshwar 1

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಶಾಸಕ ಸಿ.ಪಿ ಯೋಗೇಶ್ವರ್‍ ಗೆ ಕಳೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಬ್ರದರ್ಸ್ ಟಾಂಗ್ ನೀಡಿದ್ರು. ಇದೀಗ ಸಾಧನಾ ಸಮಾವೇಶಕ್ಕೆ ಪರ್ಯಾಯವಾಗಿಯೇ ಪರಿವರ್ತನಾ ಯಾತ್ರೆಯನ್ನ ಚನ್ನಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

dks 3

ಚನ್ನಪಟ್ಟಣ ಹೊರವಲಯದ ಮಳೂರು ಪಟ್ಟಣದ ಬಳಿಯ ಗದ್ದೆಬಯಲಿನಲ್ಲಿ ವೇದಿಕೆ ನಿರ್ಮಾಣವಾಗಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಮಲದ ಬಾವುಟಗಳು ರಾರಾಜಿಸುತ್ತಿವೆ.

rmg bjp 1

ಸಾಧನಾ ಸಮಾವೇಶದಲ್ಲಿ ಡಿಕೆ ಬ್ರದರ್ಸ್ ಆಡಿದ ಮಾತುಗಳಿಗೆ ಏಟಿಗೆ ಎದಿರೇಟು ಎನ್ನುವಂತೆ ಟಾಂಗ್ ಕೊಡಲು ಯೋಗೇಶ್ವರ್ ವೇದಿಕೆ ಸಿದ್ಧಮಾಡಿಕೊಂಡಿದ್ದು, ಇವತ್ತಿನ ಸಮಾವೇಶ ಕುತೂಹಲ ಕೆರಳಿಸಿದೆ.

rmg bjp 2

channapatna 2

RMG CP YOGESWAR 1

Share This Article
Leave a Comment

Leave a Reply

Your email address will not be published. Required fields are marked *