ಬೆಂಗಳೂರು: ಈ ಬಾರಿಯೂ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಟಿಪ್ಪು ಜಯಂತಿ ವಿರೋಧಿ ಸಮಿತಿ ವೇದಿಕೆಯಲ್ಲಿ ಆಕ್ಟೋಬರ್ 23ರಂದು ಬಿಜೆಪಿ ಮತ್ತು ಸಂಘಪರಿವಾರದ ಸಭೆ ನಡೆಯಲಿದೆ. ಸಂಘ ಪರಿವಾರದ ಮುಖಂಡರು, ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ಶ್ರೀರಾಮುಲು ಸೇರಿದಂತೆ ಹಲವರು ಬೆಂಗಳೂರಿನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಟಿಪ್ಪು ಜಯಂತಿ ಆಚರಣೆ ವಿರುದ್ಧ ಹೋರಾಟ ನಡೆಸಲು ತೀರ್ಮಾನ ಮಾಡಿದ್ದು, 23ರ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲು ಬಿಜೆಪಿ ಪ್ಲ್ಯಾನ್ ಮಾಡಿದೆ.
ಕಳೆದ ಬಾರಿ ಮಡಿಕೇರಿಯಲ್ಲಿ ಗಲಾಟೆಯಾಗಿ ಸಂಘ ಪರವಾರದ ಕಾರ್ಯಕರ್ತ ಕುಟ್ಟಪ್ಪ ಸಾವನ್ನಪ್ಪಿದ್ರು. ಆಗ ಟಿಪ್ಪು ಜಯಂತಿಗೆ ಬಿಜೆಪಿ, ಸಂಘ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತು. ಅಷ್ಟೇ ಅಲ್ಲ ವಿಧಾನಸೌಧದಲ್ಲಿ ನಡೆದ ಟಿಪ್ಪು ಜಯಂತಿಯಲ್ಲೂ ಗಲಾಟೆಯಾಗಿತ್ತು. ಇನ್ನು ಈ ವರ್ಷವೂ ಸಹ ಟಿಪ್ಪು ಜಯಂತಿ ವಿರೋಧಕ್ಕೆ ಬಿಜೆಪಿ ನಿರ್ಧಾರ ಮಾಡಿದ್ದು, ದೊಡ್ಡ ಮಟ್ಟದ ಹೋರಾಟಕ್ಕೆ ಪ್ಯ್ಲಾನ್ ಮಾಡಿದೆ.