ಬೆಂಗಳೂರು: ಕೈ ನಾಯಕರ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಬಳಸಿಕೊಳ್ಳದ ರಾಜ್ಯದ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೇಸರವಾಗಿದ್ದಾರೆ.
ರಾಜ್ಯ ಸಂಘಟನೆಯಲ್ಲಿ ಹಿಂದೆ ಉಳಿದಿದ್ದು, ಅದನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನವ ಕರ್ನಾಟಕ ಪರಿವರ್ತನಾ ಯಾತ್ರೆ ನಡೆಸಲು ತಿರ್ಮಾನಿಸಿದೆ. ಶನಿವಾರ ರಾತ್ರಿ ನವದೆಹಲಿಯ ಅಮಿತ್ ಷಾ ನಿವಾಸದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತಿರ್ಮಾನಕ್ಕೆ ಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಸಭೆಯಲ್ಲಿ ತಿರ್ಮಾನಿಸಲಾಗಿದೆ.
ಇದನ್ನೂ ಓದಿ: ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಎಷ್ಟು ಕೋಟಿ ಹಣ ಸಿಕ್ಕಿದೆ ಗೊತ್ತಾ?
ಕೋರ್ ಕಮೀಟಿ ಸಭೆಯಲ್ಲಿ ಅಮಿತ್ ಷಾ, ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಷಾ ಸೂಚನೆ ಮೇರೆಗೆ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ನಡೆಸಿದ ಪ್ರತಿಭಟನೆ ಪ್ಲಾಪ್ ಆಗಿದೆ ಅಂತಾ ತಮ್ಮ ಅಸಮಧಾನ ಹೊರಹಾಕಿದ್ದಾರೆ. ಪ್ರತಿಭಟನೆ ಯಾವುದೆ ಪರಿಣಾಮ ಬೀರಿಲ್ಲ ಸಿ ಫೋರ್ ಸಮಿಕ್ಷೆಯಿಂದ ಮತ್ತಷ್ಟು ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದು, ಸಂಘಟನೆ ಬಲ ಪಡಿಸಬೇಕು. ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ಒಂದೇ ಸಾರಿ ಜನರ ಮೂಡ್ ಪರಿವರ್ತಿಸುವುದು ಕಷ್ಟ. ಹೀಗಾಗಿ ರಾಜ್ಯದ ಎಲ್ಲ ನಾಯಕರು ಕೂಡಲೇ ಕಾರ್ಯಪವೃತ್ತರಾಗಿ ಅಂತ ಷಾ ಸೂಚನೆ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ, ಶೀಘ್ರದಲ್ಲಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ಆರಂಭಿಸಲಾಗಿವುದು. ಈ ಬಗ್ಗೆ ಶೀಘ್ರದಲ್ಲಿ ಎಲ್ಲ ಮಾಹಿತಿ ನೀಡಲಾಗುವುದು. ಜೊತೆಗೆ ಯಾತ್ರೆಯ ಮೂಲಕ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಅಂತ ಹೇಳಿದ್ರು.
ಇನ್ನು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರಿಗೆ ಜಿಲ್ಲೆಗಳ ಚುನಾವಣೆ ಉಸ್ತುವಾರಿ ಹಂಚಿಕೆ ಫೈನಲ್ ಆಗಿದ್ದು, ಇಂದು ಬಿಎಸ್ ವೈ ಯಾವ ಜಿಲ್ಲೆ ಯಾರಿಗೆ ಅಂತಾ ಘೋಷಣೆ ಮಾಡಲಿದ್ದಾರೆ ಎಂಬುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಒಟ್ಟು 12 ಮಂದಿ ಕೋರ್ ಕಮಿಟಿ ಸದ್ಯರಿಗೆ ತಲಾ 3 ಜಿಲ್ಲೆಗಳ ಉಸ್ತುವಾರಿ ನೇಮಕ ಮಾಡಲಾಗುವುದು. ಕೆಲವು ಜಿಲ್ಲೆಯಲ್ಲಿ ನಗರ, ಗ್ರಾಮಾಂತರ ವಿಭಾಗಗಳಿವೆ. ಎಲ್ಲ ವಿಭಾಗಗಳಿಗೂ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೆ ಉಸ್ತುವಾರಿ ನೇಮಕ ಮಾಡಲಾಗುವುದು. ಇಂದಿನಿಂದ ದಿನಕ್ಕೆ 6 ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಸರಣಿ ಸಭೆಯನ್ನು ಬಿಎಸ್ ವೈ ನಡೆಸಲಿದ್ದಾರೆ. ಒಟ್ಟು 6 ದಿನಗಳ ಕಾಲ ನಿರಂತರ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೇ ಬೂತ್ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನೆ ಕೂಡ ಮಾಡಲಿದ್ದಾರೆ. ಈ ಬಗ್ಗೆ ಬಿಎಸ್ ವೈ ಈಗಾಗಲೇ ಅಮಿತ್ ಷಾಗೆ ವರದಿ ಸಲ್ಲಿಸಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.
https://www.youtube.com/watch?v=1hWVXuy2xRs