Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಅಮಿತ್‌ ಶಾ ಸಂಪರ್ಕದಲ್ಲಿದ್ದಾರೆ ಅನ್ನೋದು ಸತ್ಯಕ್ಕೆ ದೂರದ ಮಾತು: ವಿಜಯೇಂದ್ರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಅಮಿತ್‌ ಶಾ ಸಂಪರ್ಕದಲ್ಲಿದ್ದಾರೆ ಅನ್ನೋದು ಸತ್ಯಕ್ಕೆ ದೂರದ ಮಾತು: ವಿಜಯೇಂದ್ರ ಸ್ಪಷ್ಟನೆ

Bengaluru City

ಡಿಕೆಶಿ ಅಮಿತ್‌ ಶಾ ಸಂಪರ್ಕದಲ್ಲಿದ್ದಾರೆ ಅನ್ನೋದು ಸತ್ಯಕ್ಕೆ ದೂರದ ಮಾತು: ವಿಜಯೇಂದ್ರ ಸ್ಪಷ್ಟನೆ

Public TV
Last updated: November 22, 2025 10:33 pm
Public TV
Share
2 Min Read
BY Vijayendra
SHARE

– ಅಬಕಾರಿ ಇಲಾಖೆಗೆ ಸರ್ಕಾರದಿಂದ 40,000 ಕೋಟಿ ಟಾರ್ಗೆಟ್‌ ಕೊಟ್ಟಿದ್ದಾರೆ
– ರೈತರ ಹೋರಾಟಕ್ಕೆ ಸಿಎಂ ಕೂಡ ತಲೆ ಕೆಡಿಸಿಕೊಳ್ಳಲಿಲ್ಲ ಅಂತ ಕಿಡಿ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಅಮಿತ್‌ ಶಾ (Amit Shah) ಅವರ ಸಂಪರ್ಕದಲ್ಲಿದ್ದಾರೆ ಅನ್ನೋದು ಸತ್ಯಕ್ಕೆ ದೂರದ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನ ಇಂದು ದೆಹಲಿಯಲ್ಲಿ ಭೇಟಿಯಾದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಡಿಕೆ ಶಿವಕುಮಾರ್‌ (DK Shivakumar), ಅಮಿತ್‌ ಶಾ ಸಂಪರ್ಕದಲ್ಲಿರುವುದು ಸತ್ಯಕ್ಕೆ ದೂರದ ಮಾತು ಅಂತ ಸ್ಪಷ್ಟನೆ ನೀಡಿದರು. ಅಲ್ಲದೇ ರಾಜ್ಯಾಧ್ಯಕ್ಷರ ಬದಲಾವಣೆ ಸದ್ಯಕ್ಕೇನಿಲ್ಲ, ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆಯಿದ್ದರೂ ಜೀರ್ಣಿಸಿಕೊಂಡು ಕಾರ್ಯಕರ್ತರ ಮಧ್ಯೆ ದುಡಿಯುತ್ತೇನೆ. ಸಣ್ಣಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸ ಮಾಡುತ್ತೇನೆ ಎಂದು ಹೇಳಿದರು.

DK Shivakumar 4

ಯಾವ ವರ್ಗದ ಜನಕ್ಕೂ ನ್ಯಾಯ ಸಿಕ್ಕಿಲ್ಲ
ಮುಂದುವರಿದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಪ್ರಣಾಳಿಕೆಯಲ್ಲಿನ ಎಲ್ಲ ಘೋಷಣೆ ಅನುಷ್ಠಾನಗೊಳಿಸಿದ್ದೇವೆ. ನಮ್ಮದೊಂದು ಮಾದರಿ ಸರ್ಕಾರ ಅಂತ ಹೇಳಿಕೊಳ್ತಿದ್ದಾರೆ. ಆದ್ರೆ ಎರಡೂವರೆ ವರ್ಷ ಪೂರೈಸಿರೋದೇ ದೊಡ್ಡ ಸಾಧನೆ. ಯಾವ ವರ್ಗದ ಜನರಿಗೂ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾಗಿಲ್ಲ ಎಂದು ತಿವಿದರು.

ಜನರು ಬಳಸುವ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಲೇ ಬಂದಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ರೈತರ ಬಗ್ಗೆ ಇಷ್ಟು ನಿರ್ಲಕ್ಷ್ಯ ತೋರಿದ ಮತ್ತೊಂದು ಸರ್ಕಾರ ಇಲ್ಲ. ಇತ್ತೀಚೆಗೆ ಕಬ್ಬು ಬೆಳೆಗಾರರ ಹೋರಾಟ ನೋಡಿದ್ರಿ. ರೈತರು ಹೋರಾಟ ಮಾಡಬೇಕಾದ್ರೆ ಅಲ್ಲೇ ಇರುವ ಉಸ್ತುವಾರಿ ಸಚಿವರು ಸ್ಥಳಕ್ಕೆ ಹೋಗಲಿಲ್ಲ. ಸಿಎಂ ಕೂಡ ತಲೆ ಕೆಡಿಸಿಕೊಳ್ಳಲಿಲ್ಲ. ನಾವು ಹೋರಾಟಕ್ಕೆ ಧುಮುಕಿದ ಬಳಿಕ ಸಕ್ಕರೆ ಕಾರ್ಖಾನೆ ಮಾಲೀಕರು, ಕಬ್ಬು ಬೆಳೆಗಾರರನ್ನ ಸಭೆಗೆ ಕರೆತರಲಾಯಿತು ಎಂದು ಹೇಳಿದರು.

siddaramaiah 1 5

ಅಬಕಾರಿ ಇಲಾಖೆಗೆ 40,000 ಕೋಟಿ ಟಾರ್ಗೆಟ್‌
ಪರಪ್ಪನ ಅಗ್ರಹಾರದಲ್ಲಿ ಉಗ್ರರು ಮೋಜು ಮಾಡುತ್ತಾ, ಅಟ್ಟಹಾಸ ಮೆರೆಯುತ್ತಿದ್ದಾರೆ. ಕೊಲೆ ಸುಲಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಆದಾಗ್ಯೂ ನುಡಿದಂತೆ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕಳೆದ ಎರಡು ವರ್ಷದಲ್ಲಿ ಯಾವ ಹೊಸ ಯೋಜನೆ ಘೋಷಣೆಯಾಗಿದೆ? ಅಧಿಕಾರಿಗಳು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಂಳ ನೀಡಲು ಖಜಾನೆಯಲ್ಲಿ ಹಣ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರಿಗೆ ಹೆಂಡ ಕುಡಿಸಿ ಬೊಕ್ಕಸಕ್ಕೆ ಹಣ ತುಂಬಿಸುವ ಕೆಲಸ ಆಗಿದೆ. ಈಗ 40,000 ಕೋಟಿ ರೂಪಾಯಿ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡಲಾಗಿದೆ. ನಿಮ್ಮ ಭರವಸೆಗಳ ಮೇಲೆ ನಂಬಿಕೆ ಇಟ್ಟು ಜನರು ಅಧಿಕಾರ ನೀಡಿದ್ರೆ, ನೀವು ಅಬಕಾರಿ ಟಾರ್ಗೆಟ್‌ ಹೆಚ್ಚು ಮಾಡುತ್ತಿದ್ದೀರಿ, ಖಜಾನೆಗೆ ಹಣ ತುಂಬಿಸಲು ಜನರಿಗೆ, ಬಡವರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

TAGGED:Amit ShahbjpBY VijayendracongressDK Shivakumarಅಮಿತ್ ಶಾಕಾಂಗ್ರೆಸ್ಡಿಕೆ ಶಿವಕುಮಾರ್ಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
41 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
42 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
2 hours ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?