ವಿನಯ್ ಕುಲಕರ್ಣಿ ಬೆನ್ನು ಬಿಡದ ಕೊಲೆ ಕೇಸ್- ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ

Public TV
1 Min Read
VINAYA KULAKARNI

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿಗೆ ಕಂಟಕವಾಗಿ ಪರಿಣಮಿಸಿದೆ.

vlcsnap 2017 09 05 07h46m10s507

ಮಂತ್ರಿ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇವತ್ತು ರಾಜ್ಯಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಇಂದು ಅಥಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಜೊತೆಗೆ ಡಿವೈಎಸ್‍ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ರಾಜೀನಾಮೆಗೂ ಆಗ್ರಹಿಸಲಿದೆ.

DWD 4 1

ಸಿಬಿಐ ಎಫ್‍ಐಆರ್‍ನಲ್ಲಿ ಜಾರ್ಜ್ ಮೊದಲ ಆರೋಪಿಯಾಗಿದ್ದಾರೆ. ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಇದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಪಕ್ಷದ ಕೆಲ ನಾಯಕರೊಂದಿಗೆ ಮಾಡಿರುವ ಷಡ್ಯಂತ್ರ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಕಂಗೆಟ್ಟಿರುವ ಅವರೆಲ್ಲಾ ತಮ್ಮ ವಿರುದ್ಧ ಸಂಚು ರೂಪಿಸಿದ್ದಾರೆ ಅಂತಾ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿನಯ್ ಕುಲಕರ್ಣಿ ತಿರುಗೇಟು ನೀಡಿದ್ದಾರೆ.

GEORGE

ganapathi case session 4

DWD 7 1

DWD 8 1

DWD 2 1

DWD 3 1

DWD 5 1

DWD 6 1

Share This Article
Leave a Comment

Leave a Reply

Your email address will not be published. Required fields are marked *