Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

Bengaluru City

ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

Public TV
Last updated: May 28, 2024 7:46 pm
Public TV
Share
3 Min Read
BJP Protest
SHARE

– ಅತ್ಯಂತ ಹದಗೆಟ್ಟ ಕಾನೂನು ಸುವ್ಯವಸ್ಥೆ ಅಂದ್ರು ಡಿವಿಎಸ್

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅವರು ಟೀಕಿಸಿದರು.

ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ‍್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ರಸ್ತೆಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

BJP Protest 2

ಸೋಮವಾರ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲಾ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ವಿರೋಧ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

ತಕ್ಷಣ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ, ಭ್ರಷ್ಟಾಚಾರ ಹೀಗೆ ಮುಂದುವರಿದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದೇ ಇದ್ದರೆ ಅದನ್ನು ಸರಿದಾರಿಗೆ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭಾಷಣದ ನಡುವೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ!- ವೀಡಿಯೋ ವೈರಲ್‌

ಬೆಂಗಳೂರಿನ ಕಡೆಗಣನೆ: ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬ್ರ‍್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂ. ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

BJP Protest 1

ರಾಜ್ಯದ 60%ರಿಂದ 65% ತೆರಿಗೆ ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

ಮಳೆಯ ಟ್ರೈಲರ್ ಇದು. ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಮುಖ್ಯಮಂತ್ರಿಯವರು ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರು. ಸಿಎಂ ಹೇಳಿದ್ದಾರೆಂದು ಒಂದಾದರೂ ಮರ ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು. ಇದನ್ನೂ ಓದಿ: ಪರಿಷತ್ ಆಯ್ಕೆಗೆ ದೆಹಲಿಯಲ್ಲಿ ಮಾನದಂಡ ನಿಗದಿ: ಡಿಕೆಶಿ

ಇದು ಎಚ್ಚರಿಕೆ ಗಂಟೆ ಎಂದ ಅಶ್ವಥ್ ನಾರಾಯಣ್:
ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಈ ಪ್ರತಿಭಟನೆ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಗಂಟೆ. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದ್ದು, ಈ ಸರ್ಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು ಅತ್ಯಂತ ಕೆಟ್ಟ- ಭ್ರಷ್ಟ ಸರ್ಕಾರ. ಗುತ್ತಿಗೆದಾರರ ರಕ್ತ ಹೀರುವ ಸರ್ಕಾರ ಎಂದು ದೂರಿದರು. ಇದನ್ನೂ ಓದಿ: ಚುನಾವಣೆ ಮುಗಿಯುತ್ತಿದ್ದಂತೆ 2 ದಿನ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿದ್ದಾರೆ ಮೋದಿ

TAGGED:bengalurubjpcongressDV Sadananda Gowdafreedom parkprotestr ashok
Share This Article
Facebook Whatsapp Whatsapp Telegram

Cinema news

Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post

You Might Also Like

CT Ravi 1
Bengaluru City

ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ

Public TV
By Public TV
33 seconds ago
Trainer aircraft of IAF crashes in Prayagraj
Latest

ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ – ಇಬ್ಬರು ಪೈಲಟ್ ಸೇಫ್

Public TV
By Public TV
20 minutes ago
Vijayapura raid
Districts

ವಿಜಯಪುರ ಪೊಲೀಸರ ಭರ್ಜರಿ ಬೇಟೆ – ಬರೋಬ್ಬರಿ 1.32 ಕೋಟಿ ನಗದು ಜಪ್ತಿ

Public TV
By Public TV
1 hour ago
Loka Raid
Bengaluru City

4 ಮನೆ ಸೇರಿ 14 ಕೋಟಿ ಆಸ್ತಿ – ಜಮೀರ್ ಆಪ್ತನ ಮನೆಯಲ್ಲಿ ಲೋಕಾ ದಾಳಿ ವೇಳೆ ಸಿಕ್ಕ ಆಸ್ತಿ ಮೌಲ್ಯ ಬಹಿರಂಗ!

Public TV
By Public TV
1 hour ago
Tanker 1
Belgaum

ತೈಲ ಸ್ಮಗ್ಲಿಂಗ್ ದಂಧೆ – ಶಿಪ್‌ ಮಾಲೀಕರು ಶಾಮೀಲಾಗಿರೋ ಶಂಕೆ; 2 ಆಯಾಮಗಳಲ್ಲಿ ಪೊಲೀಸ್‌ ತನಿಖೆಗೆ ಸಿದ್ಧತೆ

Public TV
By Public TV
2 hours ago
Dharmasthala Banglegudde SIT
Dakshina Kannada

ಧರ್ಮಸ್ಥಳ ಬುರುಡೆ ಕೇಸ್‌ | ಬಂಗ್ಲೆಗುಡ್ಡೆಯಲ್ಲಿ ಸಿಕ್ಕ 7 ಅಸ್ಥಿಪಂಜರ FSL ಗೆ ರವಾನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?