Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

Public TV
Last updated: May 28, 2024 7:46 pm
Public TV
Share
3 Min Read
BJP Protest
SHARE

– ಅತ್ಯಂತ ಹದಗೆಟ್ಟ ಕಾನೂನು ಸುವ್ಯವಸ್ಥೆ ಅಂದ್ರು ಡಿವಿಎಸ್

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅವರು ಟೀಕಿಸಿದರು.

ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ‍್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ರಸ್ತೆಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

BJP Protest 2

ಸೋಮವಾರ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲಾ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ವಿರೋಧ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

ತಕ್ಷಣ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ, ಭ್ರಷ್ಟಾಚಾರ ಹೀಗೆ ಮುಂದುವರಿದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದೇ ಇದ್ದರೆ ಅದನ್ನು ಸರಿದಾರಿಗೆ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭಾಷಣದ ನಡುವೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ!- ವೀಡಿಯೋ ವೈರಲ್‌

ಬೆಂಗಳೂರಿನ ಕಡೆಗಣನೆ: ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬ್ರ‍್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂ. ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

BJP Protest 1

ರಾಜ್ಯದ 60%ರಿಂದ 65% ತೆರಿಗೆ ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

ಮಳೆಯ ಟ್ರೈಲರ್ ಇದು. ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಮುಖ್ಯಮಂತ್ರಿಯವರು ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರು. ಸಿಎಂ ಹೇಳಿದ್ದಾರೆಂದು ಒಂದಾದರೂ ಮರ ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು. ಇದನ್ನೂ ಓದಿ: ಪರಿಷತ್ ಆಯ್ಕೆಗೆ ದೆಹಲಿಯಲ್ಲಿ ಮಾನದಂಡ ನಿಗದಿ: ಡಿಕೆಶಿ

ಇದು ಎಚ್ಚರಿಕೆ ಗಂಟೆ ಎಂದ ಅಶ್ವಥ್ ನಾರಾಯಣ್:
ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಈ ಪ್ರತಿಭಟನೆ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಗಂಟೆ. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದ್ದು, ಈ ಸರ್ಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು ಅತ್ಯಂತ ಕೆಟ್ಟ- ಭ್ರಷ್ಟ ಸರ್ಕಾರ. ಗುತ್ತಿಗೆದಾರರ ರಕ್ತ ಹೀರುವ ಸರ್ಕಾರ ಎಂದು ದೂರಿದರು. ಇದನ್ನೂ ಓದಿ: ಚುನಾವಣೆ ಮುಗಿಯುತ್ತಿದ್ದಂತೆ 2 ದಿನ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿದ್ದಾರೆ ಮೋದಿ

TAGGED:bengalurubjpcongressDV Sadananda Gowdafreedom parkprotestr ashok
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
32 minutes ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
55 minutes ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
1 hour ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
1 hour ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?