Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

Bengaluru City

ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

Public TV
Last updated: May 28, 2024 7:46 pm
Public TV
Share
3 Min Read
BJP Protest
SHARE

– ಅತ್ಯಂತ ಹದಗೆಟ್ಟ ಕಾನೂನು ಸುವ್ಯವಸ್ಥೆ ಅಂದ್ರು ಡಿವಿಎಸ್

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅವರು ಟೀಕಿಸಿದರು.

ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ‍್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ರಸ್ತೆಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

BJP Protest 2

ಸೋಮವಾರ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲಾ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ವಿರೋಧ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

ತಕ್ಷಣ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ, ಭ್ರಷ್ಟಾಚಾರ ಹೀಗೆ ಮುಂದುವರಿದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದೇ ಇದ್ದರೆ ಅದನ್ನು ಸರಿದಾರಿಗೆ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭಾಷಣದ ನಡುವೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ!- ವೀಡಿಯೋ ವೈರಲ್‌

ಬೆಂಗಳೂರಿನ ಕಡೆಗಣನೆ: ಆರ್.ಅಶೋಕ್
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬ್ರ‍್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂ. ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

BJP Protest 1

ರಾಜ್ಯದ 60%ರಿಂದ 65% ತೆರಿಗೆ ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

ಮಳೆಯ ಟ್ರೈಲರ್ ಇದು. ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಮುಖ್ಯಮಂತ್ರಿಯವರು ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರು. ಸಿಎಂ ಹೇಳಿದ್ದಾರೆಂದು ಒಂದಾದರೂ ಮರ ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು. ಇದನ್ನೂ ಓದಿ: ಪರಿಷತ್ ಆಯ್ಕೆಗೆ ದೆಹಲಿಯಲ್ಲಿ ಮಾನದಂಡ ನಿಗದಿ: ಡಿಕೆಶಿ

ಇದು ಎಚ್ಚರಿಕೆ ಗಂಟೆ ಎಂದ ಅಶ್ವಥ್ ನಾರಾಯಣ್:
ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಈ ಪ್ರತಿಭಟನೆ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಗಂಟೆ. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದ್ದು, ಈ ಸರ್ಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು ಅತ್ಯಂತ ಕೆಟ್ಟ- ಭ್ರಷ್ಟ ಸರ್ಕಾರ. ಗುತ್ತಿಗೆದಾರರ ರಕ್ತ ಹೀರುವ ಸರ್ಕಾರ ಎಂದು ದೂರಿದರು. ಇದನ್ನೂ ಓದಿ: ಚುನಾವಣೆ ಮುಗಿಯುತ್ತಿದ್ದಂತೆ 2 ದಿನ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿದ್ದಾರೆ ಮೋದಿ

TAGGED:bengalurubjpcongressDV Sadananda Gowdafreedom parkprotestr ashok
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
7 minutes ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
55 minutes ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
3 hours ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?