Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಿಂದ ಮಹಿಳಾ‌ ಕೇಂದ್ರಿತ ತಂತ್ರಗಾರಿಕೆ ಮುಂದುವರಿಕೆ – ತುಮಕೂರಲ್ಲಿ BJP ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಯಿಂದ ಮಹಿಳಾ‌ ಕೇಂದ್ರಿತ ತಂತ್ರಗಾರಿಕೆ ಮುಂದುವರಿಕೆ – ತುಮಕೂರಲ್ಲಿ BJP ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ‌

Latest

ಬಿಜೆಪಿಯಿಂದ ಮಹಿಳಾ‌ ಕೇಂದ್ರಿತ ತಂತ್ರಗಾರಿಕೆ ಮುಂದುವರಿಕೆ – ತುಮಕೂರಲ್ಲಿ BJP ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ‌

Public TV
Last updated: January 18, 2023 10:48 pm
Public TV
Share
3 Min Read
bjp flag
SHARE

ತುಮಕೂರು: ಜ.20 ಮತ್ತು 21ರಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ನಡೆಯಲಿದೆ ಎಂದು ರಾಜ್ಯ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆಶಯದಂತೆ ಕಾರ್ಯಕ್ರಮ ಏರ್ಪಡಿಸಿದ್ದು, ಆರ್‌ಟಿಪಿ ಕನ್ವೆನ್ಶನ್ ಸೆಂಟರ್, ಶೆಟ್ಟಿ ಹಳ್ಳಿ ರಿಂಗ್ ರೋಡ್ ತುಮಕೂರಿನಲ್ಲಿ ಕಾರ್ಯಕಾರಿಣಿ ನಡೆಯಲಿದೆ ಎಂದರು. ಇದನ್ನೂ ಓದಿ: ಕೆ.ಆರ್‌. ಪೇಟೆಯಲ್ಲಿ ಜೆಡಿಎಸ್‍ ಬಂಡಾಯದ ಬಾವುಟ – ಹೆಚ್‍ಡಿಕೆ ನಡೆಗೆ ವಿರೋಧ

modi rally 14

ಮಹಿಳೆಯರಿಗೆ ವಿಶೇಷ ಗೌರವ, ಘನತೆಯನ್ನು ಕರ್ನಾಟಕ ರಾಜ್ಯ ನೀಡಿದೆ. ಕಳೆದ 8 ವರ್ಷಗಳ ಅವಧಿಯಲ್ಲಿ ನಮ್ಮ ರಾಜ್ಯದ ಅನೇಕ ಸಾಧಕ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪದ್ಮ ಪುರಸ್ಕಾರ ಸೇರಿ ವಿಶೇಷ ಗೌರವ ನೀಡಿದ್ದಾರೆ. ತುಮಕೂರು ಜಿಲ್ಲೆಯ ಸೂಲಗಿತ್ತಿ ನರಸಮ್ಮ, ಸುಕ್ರಿ ಬೊಮ್ಮನಗೌಡ ಅವರಿಗೂ ಗೌರವ ಲಭಿಸಿದೆ. ಪರಿಸರಕ್ಕೆ ಕೊಡುಗೆ ನೀಡಿದ ಸಾಲುಮರದ ತಿಮ್ಮಕ್ಕ ಅವರನ್ನೂ ಗೌರವಿಸಲಾಗಿದೆ ಎಂದು ತಿಳಿಸಿದರು.

ಅನೇಕ ವಿಷಯಗಳ ಚಿಂತನ-ಮಂಥನ ನಡೆಯಲಿದೆ. 37 ರಾಜ್ಯಗಳ ಮಹಿಳಾ ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದ ರಾಷ್ಟ್ರೀಯ ಪ್ರಭಾರಿ ದುಷ್ಯಂತಕುಮಾರ್ ಗೌತಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೂ ಭಾಗವಹಿಸಲಿದ್ದಾರೆ. 20ರಂದು ಸಂಜೆ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ವಾನತಿ ಶ್ರೀನಿವಾಸನ್ ಅಧ್ಯಕ್ಷತೆಯಲ್ಲಿ ಉದ್ಘಾಟನೆಯಾಗಲಿದೆ. ಸ್ಥಳೀಯ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ. 21ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ತಾಖತ್, ಶಕ್ತಿ ಇದ್ರೆ ಯೂ ಟರ್ನ್ ಮಾಡದೆ ಸ್ಪರ್ಧೆ ಮಾಡಲಿ: ವರ್ತೂರು ಪ್ರಕಾಶ್ ಸವಾಲ್

NARENDRA MODI 1

ಮೊದಲ ದಿನ ಬೆಳಗ್ಗೆ ತುಮಕೂರಿನ ಟೌನ್‍ಹಾಲ್ ಸರ್ಕಲ್‍ನಿಂದ ತುಮಕೂರು (Tumakuru) ಸಿದ್ಧಗಂಗಾ ಮಠದ ಆವರಣಕ್ಕೆ ಬೈಕ್ ರ‍್ಯಾಲಿ ನಡೆಯಲಿದೆ. ಪರಿಸರ ಸ್ನೇಹಿ ಮತ್ತು ಸ್ಥಳೀಯ ಉಡುಗೆ ತೊಡುಗೆಗಳಿಗೆ, ಆಹಾರಕ್ಕೆ ಆದ್ಯತೆ ಕೊಡಲಾಗುತ್ತಿದೆ ಎಂದರಲ್ಲದೇ, ‘ನಾ ನಾಯಕಿ’ ಎಂದು ಘೋಷಿಸಿದ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಚುನಾವಣೆ ಬಳಿಕ ನಾ ನಾಪತ್ತೆ ಆಗಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ ಮಾತನಾಡಿ, ಇದಲ್ಲದೆ ರಾಜ್ಯ ಮಹಿಳಾ ಸಮಾವೇಶವು ಇದೇ 28 ಅಥವಾ 29ರಂದು ನಡೆಯಲಿದೆ. ‘ನಾ ನಾಯಕಿ’ ಎನ್ನುವವರು ವರ್ಷಗಳಿಂದ ಬೇರೆಯವರಿಗೆ ಅವಕಾಶವನ್ನೇ ಕೊಟ್ಟಿಲ್ಲ. ಕಾಂಗ್ರೆಸ್‍ನವರು ಸುಳ್ಳು, ಅವೈಜ್ಞಾನಿಕ ಭರವಸೆ ಕೊಡುತ್ತಿದ್ದಾರೆ. ಅಂಥ ಭರವಸೆಗಳನ್ನು ನಾವು ನೀಡುವುದಿಲ್ಲ ಎಂದರು.

NARENDRA MODI BASAVARAJ BOMMAI

ಛತ್ತೀಸಗಡದಲ್ಲಿ 4 ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು. ನಿರುದ್ಯೋಗ ಯುವತಿಯರಿಗೆ 2,500 ರೂಪಾಯಿ ಭತ್ಯೆ, 1,000 ರೂ. ವಿಧವಾ ಪಿಂಚಣಿ ಕೊಡುವ ಭರವಸೆ ಕೊಟ್ಟಿದ್ದರೂ ಅವು ಈಡೇರಿಲ್ಲ. ಹಿಮಾಚಲಪ್ರದೇಶ ಇಂಥದ್ದೇ ಭರವಸೆ ನೀಡಿದ್ದು, ಅದು ಜಾರಿಯಾಗಿಲ್ಲ. ರಾಜಸ್ಥಾನದಲ್ಲಿ ಮಹಿಳೆಯರಿಗೆ ಸಂಬಂಧಿಸಿ ವಿವಿಧ ಭರವಸೆ ಕೊಟ್ಟಿದ್ದರು. ಪ್ರಿಯಾಂಕಾ ಗಾಂಧಿ ಘೋಷಣೆಗಳು ಕೇವಲ ಘೋಷಣೆಯಾಗಿ ಉಳಿದಿವೆ ಎಂದು ಟೀಕಿಸಿದರು.

ಎಲ್ಲ ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕೊಡಲು ಸಾಧ್ಯವೇ ಎಂದು ಕೇಳಿದ ಅವರು ಇದು ಓಲೈಕೆ ರಾಜಕಾರಣ. ಕರ್ನಾಟಕದ ಪ್ರಜ್ಞಾವಂತ ಮಹಿಳೆಯರು ಇವರ ಮಾತಿಗೆ ಮರುಳಾಗುವುದಿಲ್ಲ. ನಾವು ಕೇವಲ ಘೋಷಣೆ ಮಾಡುವುದಿಲ್ಲ. ಅವುಗಳನ್ನು ಜಾರಿಗೆ ತಂದಿವೆ ಎಂದು ತಿಳಿಸಿದರು. ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಎಲ್.ದೀಪಿಕಾ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjptumakuruwomenತುಮಕೂರುಬಿಜೆಪಿಮಹಿಳೆಯರು
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
6 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
13 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
55 minutes ago
Nirmala Sitharaman
Latest

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Public TV
By Public TV
1 hour ago
Price Hike 3
Bengaluru City

ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಹೊಡೆತ – ಅಕ್ಕಿ, ಬೇಳೆಕಾಳುಗಳ ಬೆಲೆ ಹೆಚ್ಚಳ!

Public TV
By Public TV
9 hours ago
Team India 3
Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?