Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

Bengaluru City

ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

Public TV
Last updated: February 15, 2023 1:01 pm
Public TV
Share
3 Min Read
BASAVARAJ BOMMAI 3
SHARE

ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ (BJP) ರಥಯಾತ್ರೆ ಆರಂಭವಾಗಲಿದೆ. ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ 23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ. ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

bjp flag

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಹಣ ಅನುದಾನ ಕೊಟ್ಟಿದ್ದೇವೆ. ಸ್ಪಂದನಾಶೀಲ, ಜನಪರ ಬಿಜೆಪಿ ಸರ್ಕಾರ ರಾಜ್ಯದಲ್ಲಿದೆ. ಕ್ಷೇತ್ರದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ತಿಳಿಸಿದರು.

ಮಂಡಲ ಪ್ರಭಾರಿಗಳ ಮೇಲೆ ಗುರುತರವಾದ ಜವಾಬ್ದಾರಿ ಇದೆ. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಹತ್ತು ಹಲವು ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದೆ. ಕರ್ನಾಟಕದಲ್ಲಿ 2019ರಲ್ಲಿ ಯಡಿಯೂರಪ್ಪ ಅವರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೊಟ್ಟಿದ್ದಲ್ಲದೆ, ಕೋವಿಡ್‌ನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ನಾನು ಪ್ರವಾಹವನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಅಲ್ಲದೆ ನಮ್ಮ ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಕಾರ್ಯಕ್ರಮ ಜಾರಿಗೊಳಿಸಿದೆ. ಇವೆಲ್ಲವನ್ನೂ ಜನರಿಗೆ ತಿಳಿಸಬೇಕಿದೆ ಎಂದರು. ಇದನ್ನೂ ಓದಿ: Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!

congress flag

ನಕಾರಾತ್ಮಕವಾಗಿ ಮತ ಪಡೆಯಲು ಕಾಂಗ್ರೆಸ್-ಜೆಡಿಎಸ್ ಪ್ರಯತ್ನ ಮಾಡುತ್ತಿವೆ. ನಾವು ಧನಾತ್ಮಕ ರೀತಿಯಲ್ಲಿ ಜನಮತ ಪಡೆಯಲು ಮುಂದಾಗುತ್ತೇವೆ. ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟು ಪಕ್ಷಕ್ಕೆ ಗೆಲುವು ತಂದು ಕೊಡಬೇಕಿದೆ. ಸ್ವಾರ್ಥ, ಸ್ವಜನಪಕ್ಷಪಾತ, ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷವು ಇನ್ನೊಬ್ಬರ ಅವಹೇಳನ ಮಾಡಿ ಮತ ಪಡೆಯಲು ಮುಂದಾಗಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ. ಕೇಂದ್ರದ ಅನುದಾನ ಬಳಸಿ ಪಡಿತರ ಅಕ್ಕಿ ಕೊಟ್ಟರೂ ಅನ್ನ ಭಾಗ್ಯ ತಾವೇ ಕೊಟ್ಟಿದ್ದಾಗಿ ಬಿಂಬಿಸಿದ್ದರು ಎಂದು ಟೀಕಿಸಿದರು.

ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯವನ್ನು ಸದಾ ಕಾಲ ಕಾಂಗ್ರೆಸ್ ಮಾಡಿತ್ತು. ಅವರ ಅವಧಿಯಲ್ಲಿ ರಾಜ್ಯವು ಎಲ್ಲ ರಂಗಗಳಲ್ಲಿ ಹಿಂದುಳಿದಿತ್ತು. ಅವರ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿತ್ತು. ಅಕ್ಕಿ, ಎಸ್‍ಸಿ, ಎಸ್‍ಟಿ ಹಾಸ್ಟೆಲ್‌ಗಳ ಹಾಸಿಗೆ, ದಿಂಬಿನಲ್ಲಿ ಭ್ರಷ್ಟಾಚಾರ ಆಗಿತ್ತು. ನೀರಾವರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಬಿಡಿಎದಲ್ಲಿ ರೀಡೂ ಭ್ರಷ್ಟಾಚಾರ, ಸೋಲಾರ್ ವಿದ್ಯುತ್ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಮದುವೆಯಲ್ಲಿ ಪ್ರತ್ಯಕ್ಷ- ಜನರಲ್ಲಿ ಅಚ್ಚರಿ

ಭ್ರಷ್ಟಾಚಾರ ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನೇ ಮುಗಿಸಿಬಿಟ್ಟರು. ಎಸಿಬಿ ಮುಂದೆ ಸಿದ್ದರಾಮಯ್ಯರದ್ದೂ ಸೇರಿದಂತೆ ಸುಮಾರು 60 ಕೇಸುಗಳಿದ್ದು, ಎಲ್ಲದಕ್ಕೂ ಬಿ ರಿಪೋರ್ಟ್ ಕೊಟ್ಟಿದ್ದರು. ಕಾಂಗ್ರೆಸ್ ತಮ್ಮ ಮೇಲಿನ ಆರೋಪಗಳಿಗೆ ಮೊದಲು ಉತ್ತರಿಸಬೇಕು. ಬಣ್ಣ ಬಯಲಾಗುವ ಭೀತಿ ಕಾಂಗ್ರೆಸ್ಸಿಗರದು. ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯರದ್ದು. ನಮ್ಮ ಮೇಲಿನ ಆರೋಪದ ದಾಖಲೆ ಕೊಟ್ಟರೆ ಅದನ್ನು ತನಿಖೆ ಮಾಡಿಸಲು ಸಿದ್ಧ. ನೀರಾವರಿ ನಿಗಮದಲ್ಲಿ 2 ಸಮಿತಿ ಇತ್ತು. ಇವೆರಡನ್ನೂ ಮುಚ್ಚಿ ಹಾಕಿದವರು ಕಾಂಗ್ರೆಸ್ಸಿಗರು. ಆ ಮೂಲಕ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದರು ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ವೈಫಲ್ಯ, ಬಿಜೆಪಿಯ ಮನೆಮನೆಗೆ ನಲ್ಲಿ ನೀರು ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಬೇಕು. ಮನೆ, ಕರೆಂಟ್, ಶೌಚಾಲಯ, ಉಚಿತ ಪಡಿತರ- ಹೀಗೆ ಕುಟುಂಬಗಳ ಸಶಕ್ತೀಕರಣ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮಕ್ಕಳಿಗೆ ಸೈಕಲ್, ವಿದ್ಯಾನಿಧಿಯಂಥ ಯೋಜನೆಗಳನ್ನು ಜನರಿಗೆ ತಿಳಿಸಿ. ದುಡಿಯುವ ವರ್ಗಕ್ಕೆ ಬಲ ತುಂಬಲು ಕಾಯಕ ಯೋಜನೆ ಜಾರಿಗೊಳಿಸಿದ್ದೇವೆ. ಇಂಥ ಫಲಾನುಭವಿಗಳನ್ನು ಭೇಟಿ ಮಾಡಿ ನಮ್ಮ ಅಭಿಮಾನಿಗಳನ್ನು ಹೆಚ್ಚಿಸಿ. ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳವನ್ನೂ ಜನರಿಗೆ ತಿಳಿಸಬೇಕು. ಲಂಬಾಣಿ ತಾಂಡಾದ ಜನರಿಗೆ ನ್ಯಾಯ ಕೊಟ್ಟದ್ದನ್ನು ತಿಳಿಸಿಕೊಡಿ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommailbengalurubjpRatha Yatraಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುರಥಯಾತ್ರೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
2 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
11 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?