ಬೆಂಗಳೂರು: ಕೊರೊನಾ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡದಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು ಎಂದು ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ದಾಳಿ ಮಾಡಿದೆ.
ಟ್ವೀಟ್ನಲ್ಲಿ ಏನಿದೆ?: ಆರಂಭದಲ್ಲಿ ಕಾಂಗ್ರೆಸ್ ನಾಯಕರಿಂದ ಲಸಿಕೆಯ ವಿರುದ್ಧ ಅಪಪ್ರಚಾರವಾಗಿತ್ತು. ದೇಶದ ಜನರಲ್ಲಿ ಲಸಿಕೆಯ ಕುರಿತು ಕಾಂಗ್ರೆಸ್ ಸುಳ್ಳಿನ ಸರಮಾಲೆ ಹಬ್ಬಿಸಿತ್ತು. ಲಸಿಕೆಯನ್ನು ಮೋದಿ ವ್ಯಾಕ್ಸಿನ್ ಎಂದು ಕರೆದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದರು. ಇದು ರಾಷ್ಟ್ರ ವಿರೋಧಿ ಸಂಚಲ್ಲವೇ ಎಂದು ಕಿಡಿಕಾರಿದೆ. ಇದನ್ನೂ ಓದಿ: ಪಾರಿವಾಳ ವಿಚಾರ ಕೊಲೆಯಲ್ಲಿ ಅಂತ್ಯ
ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದ ಸಿದ್ದರಾಮಯ್ಯನವರೇ,
ರಾಹುಲ್ ಗಾಂಧಿ ಎರಡು ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂಬ ದೇಶದ ಜನತೆಯ ಪ್ರಶ್ನೆಗೆ ಉತ್ತರಿಸುವಿರಾ?
ಜನತೆಯ ಸಂಶಯ ಬಗೆಹರಿಸಿ, ಗುಟ್ಟು ಕಾಪಾಡಿಕೊಳ್ಳಲು ಇದೇನು ರಾಷ್ಟ್ರೀಯ ಭದ್ರತೆಯ ವಿಚಾರವಲ್ಲ.#CONgressAgainstVaccination
— BJP Karnataka (@BJP4Karnataka) January 19, 2022
ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ, ರಾಹುಲ್ ಗಾಂಧಿ ಅವರ ಹಾದಿಯಲ್ಲೇ ಸಿದ್ದರಾಮಯ್ಯ ಲಸಿಕೆಯ ವಿರುದ್ಧ ಮಾತನಾಡಿದ್ದರು. ಮೋದಿ ಲಸಿಕೆ ಹಾಕಿಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದರು. ಪೌರ ಕಾರ್ಮಿಕರ ಮೇಲೆ ಪ್ರಯೋಗಕ್ಕೆ ಹೊರಟಿದ್ದಾರೆ ಎಂದೆಲ್ಲ ಅಪಪ್ರಚಾರ ನಡೆಸಿದ್ದರು. ಕೊನೆಗೆ ಕಾಂಗ್ರೆಸ್ ನಾಯಕರು ತಾವೇ ಲಸಿಕೆ ಹಾಕಿಸಿಕೊಂಡರು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ನವೋದಯದಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಬೇಡಿ – ಕೊಡಗಿನ ಪೋಷಕರಿಂದ ವಿರೋಧ
ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರದ ಅಭಿಯಾನ ನಡೆಸದೇ ಹೋಗಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು.
ಎಲ್ಲದರಲ್ಲೂ ರಾಜಕೀಯ ಅರಸಲು ಹೊರಟ ಕಾಂಗ್ರೆಸ್ ಪಕ್ಷ ಜನರ ದೃಷ್ಟಿಯಲ್ಲಿ ಅಪ್ರಸ್ತುತವಾಗುತ್ತಿದೆ. ಲಸಿಕೆ ಅಭಿಯಾನದ ಯಶಸ್ಸೇ ಇದಕ್ಕೆ ಸಾಕ್ಷಿ.#CONgressAgainstVaccination
— BJP Karnataka (@BJP4Karnataka) January 19, 2022
ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರದ ಅಭಿಯಾನ ನಡೆಸದೆ ಹೋಗಿದ್ದರೆ, ಲಸಿಕೆ ವಿತರಣೆಯಲ್ಲಿ ಭಾರತ ಮತ್ತಷ್ಟು ಸಾಧನೆ ಮಾಡುತ್ತಿತ್ತು. ಎಲ್ಲದರಲ್ಲೂ ಕಾಂಗ್ರೆಸ್ ರಾಜಕೀಯ ಅರಸಲು ಹೊರಟಿದೆ. ಕಾಂಗ್ರೆಸ್ ಪಕ್ಷ ಜನರ ದೃಷ್ಟಿಯಲ್ಲಿ ಅಪ್ರಸ್ತುತವಾಗುತ್ತಿದೆ. ಲಸಿಕೆ ಅಭಿಯಾನದ ಯಶಸ್ಸೆ ಇದಕ್ಕೆ ಸಾಕ್ಷಿ. ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದ ಸಿದ್ದರಾಮಯ್ಯನವರೇ, ರಾಹುಲ್ ಗಾಂಧಿ ಎರಡು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂಬ ದೇಶದ ಜನತೆಯ ಪ್ರಶ್ನೆಗೆ ಉತ್ತರಿಸುವಿರಾ. ಜನತೆಯ ಸಂಶಯ ಬಗೆಹರಿಸಿ, ಗುಟ್ಟು ಕಾಪಾಡಿಕೊಳ್ಳಲು ಇದೇನು ರಾಷ್ಟ್ರೀಯ ಭದ್ರತೆಯ ವಿಚಾರವಲ್ಲ ಎಂದು ವಾಗ್ದಾಳಿ ನಡಿಸಿದೆ.