– ಪ್ರತಿ ಕ್ಷಣವೂ ದೇಶಕ್ಕಾಗಿ.. 24*7 For 2047: ಚುನಾವಣಾ ಘೋಷವಾಕ್ಯ
– ಫಲಾನುಭವಿಗಳಿಗೆ ಸಂಕಲ್ಪ ಪತ್ರ ವಿತರಿಸಿದ ಮೋದಿ
ನವದೆಹಲಿ: ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ (Sankalp Patra) ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು (BJP Manifesto) ಭಾನುವಾರ ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು. ಇದಕ್ಕೂ ಮುನ್ನ ಅಂಬೇಡ್ಕರ್ ಅವರ ಪುತ್ಥಳಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುಷ್ಪನಮನ ಸಲ್ಲಿಸಿದರು. ಇದನ್ನೂ ಓದಿ: ಅಂಬೇಡ್ಕರ್ ಜನ್ಮದಿನದಂದೇ ಸಂಕಲ್ಪ ಪತ್ರ – ಭಾನುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಪ್ರತಿ ಕ್ಷಣವೂ ದೇಶಕ್ಕಾಗಿ.. 24*7 For 2047 ಚುನಾವಣಾ ಘೋಷವಾಕ್ಯದೊಂದಿಗೆ ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತು. ಇದೇ ವೇಳೆ ಪ್ರಧಾನಿ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.