ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯವರು ಹಣ ಪಡೆದು ಮಾರಾಟ ಮಾಡುತ್ತಾರೆಂದು ಅವರ ಪಕ್ಷದ ಶಾಸಕರೇ ಬಹಿರಂಗ ಪಡಿಸಿದ್ದು, ಈ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಗ್ರಹಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಿಎಸ್ಐ ಹಾಗೂ ಇತರೆ ಸರ್ಕಾರಿ ಹುದ್ದೆಗಳನ್ನು ಹಣ ಪಡೆದು ಬಿಕರಿ ಮಾಡುತ್ತಾರೆ ಎನ್ನುವುದು ಎಲ್ಲರಿಗೂ ತಿಳಿದಿತ್ತು. ಈಗ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ರವರು ಸಿಎಂ ಹುದ್ದೆಯನ್ನೂ ಹಣಕ್ಕೆ ಮಾರಾಟ ಮಾಡುತ್ತಿರುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. 2,500 ಕೋಟಿ ರೂಪಾಯಿ ಕೊಟ್ಟರೆ ಸಿಎಂ ಸ್ಥಾನ ಸಿಗುತ್ತದೆ ಎಂದಿದ್ದಾರೆ. ಅಷ್ಟು ದೊಡ್ಡ ಮೊತ್ತವನ್ನು ಬಿಜೆಪಿಯಿಂದ ಸಿಎಂ ಆದವರು ಹೇಗೆ ಹೊಂದಿಸಿದ್ದಾರೆ ಹಾಗೂ ಹಣ ಪಡೆದ ಹೈಕಮಾಂಡ್ ಅದರಿಂದ ಏನು ಮಾಡಿದೆ ಎಂಬುದು ಬಯಲಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಮಾಡೆಲಿಂಗ್ನ್ನು ವೃತ್ತಿ ಮಾಡಿಕೊಂಡಿದ್ದಕ್ಕೆ ಸಹೋದರಿಯನ್ನೇ ಹತ್ಯೆಗೈದ ಸಹೋದರ
ಪ್ರಜಾಪ್ರಭುತ್ವಕ್ಕೆ ಬಿಜೆಪಿಯು ಅತ್ಯಂತ ಮಾರಕವಾಗಿ ಪರಿಣಮಿಸಿದೆ. ಮುಖ್ಯಮಂತ್ರಿಯಂತಹ ಹುದ್ದೆಯನ್ನು ಹೆಚ್ಚು ಹಣ ಕೊಟ್ಟವರಿಗೆ ನೀಡುವ ಪ್ರವೃತ್ತಿ ಒಳ್ಳೆಯದಲ್ಲ. ಪದೇ, ಪದೇ ಕರ್ನಾಟಕಕ್ಕೆ ಬರುವ ಅಮಿತ್ ಶಾರವರು ಯತ್ನಾಳ್ ಬಹಿರಂಗ ಪಡಿಸಿರುವ ವಿಷಯದ ಕುರಿತು ಪ್ರತಿಕ್ರಿಯಿಸಬೇಕು. ಇದರಲ್ಲಿ ಅವರಿಗೆ ಎಷ್ಟು ಪರ್ಸೆಂಟ್ ತಲುಪಿದೆ ಎನ್ನುವುದು ಬಯಲಾಗಬೇಕು ಎಂದರು. ಇದನ್ನೂ ಓದಿ: ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ