ಬೆಂಗಳೂರು: ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಹಾಸನದ ಅಭ್ಯರ್ಥಿ ಎಂದು ಘೋಷಣೆ ಮಾಡುವ ವೇಳೆ ಕಣ್ಣೀರು ಹಾಕಿದ್ದ ಎಚ್.ಡಿ.ದೇವೇಗೌಡ ಕುಟುಂಬದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ. ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ. ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು. ರಾಜ್ಯದ ಜನ ಈಗಲೂ ಮರುಳಾಗುವರೇ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಪ್ರಶ್ನಿಸಿದೆ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!
ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ!
ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು!
ರಾಜ್ಯದ ಜನ ಈಗಲೂ ಮರುಳಾಗುವರೇ?
— BJP Karnataka (@BJP4Karnataka) March 13, 2019
2019ರ ಲೋಕಸಭಾ ಚುನಾವಣೆಯ ಮೊದಲ ಡ್ರಾಮಾ ಇದು. ಅಳುವುದು ಎಚ್.ಡಿ.ದೇವೇಗೌಡ ಅವರಲ್ಲಿರುವ ಕಲೆ. ದೇವೇಗೌಡ ಅವರ ಕುಟುಂಬವು ಅಳುತ್ತಲೇ ಜನರನ್ನು ಮೋಸ ಮಾಡುತ್ತಾರೆ. ಚುನಾವಣೆಗೂ ಮುನ್ನ ಇವರು ಅಳುತ್ತಾರೆ. ಅಯ್ಕೆಯಾಗಿ ಬಂದ ಬಳಿಕ ದೇವೇಗೌಡ ಅವರ ಕುಟುಂಬಕ್ಕೆ ಮತ ಹಾಕಿದವರು ಕಣ್ಣೀರು ಹಾಕುತ್ತಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಎಚ್.ಡಿ.ದೇವೇಗೌಡ ಅವರು ಕಣ್ಣೀರು ಹಾಕಿದ್ದನ್ನು ಸಮರ್ಥಿಸಿಕೊಂಡ ಜೆಡಿಎಸ್, ಹಾಸನ ಕ್ಷೇತ್ರದೊಂದಿಗೆ ದೇವೇಗೌಡ ಅವರು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಹೀಗಾಗಿ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟಿದ್ದಕ್ಕೆ ಭಾವನಾತ್ಮಕವಾಗಿ ಕಣ್ಣೀರು ಹಾಕಿದ್ದಾರೆ ಎಂದು ತಿಳಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv