Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ

Bengaluru City

ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ

Public TV
Last updated: June 2, 2022 7:34 pm
Public TV
Share
3 Min Read
MOHAMD NALPAD
SHARE

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಳೆಲೆದಿದೆ.

BJP FLAG

ಟ್ವೀಟ್‍ನಲ್ಲಿ ಏನಿದೆ?
ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‍ಎಸ್‍ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?. ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ. ಇವರಿಂದ ಪ್ರೇರಣೆ ಪಡೆದ ಎನ್‍ಎಸ್‍ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ. ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ. ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿ ಹಲ್ಲೆ ಮಾಡಿ ಜೈಲು ವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿದರು. ಸಚಿವರ ಮನೆಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? ಇದನ್ನೂ ಓದಿ: ಶಾಸಕ ಶಿವನಗೌಡ ನಾಯಕ್ ವಿರುದ್ಧ 100% ಕಮಿಷನ್ ಆರೋಪ

ಯುವ ಕಾಂಗ್ರೆಸ್ ಅಧ್ಯಕ್ಷ‌ ನಲಪಾಡ್‌ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ.

ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ‌ ಘಟಕಕ್ಕೆ ನೇಮಿಸಿದೆ.

ಇವರಿಂದ ಪ್ರೇರಣೆ ಪಡೆದ ಎನ್‌ಎಸ್‌ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ.

ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ!#ಗೂಂಡಾಕಾಂಗ್ರೆಸ್‌

— BJP Karnataka (@BJP4Karnataka) June 2, 2022

ಸಿದ್ದರಾಮಯ್ಯ ಅವರ ಸಿದ್ಧಾಂತ ಯಾವುದು, ಮಜಾವಾದವೋ, ಸಮಾಜವಾದವೋ? ಯಾವ ಸೈದ್ಧಾಂತಿಕ ಬದ್ಧತೆಯೂ ಇಲ್ಲದೇ ಎಲ್ಲರ ಮೇಲೂ ಎರಗುವ, ಎಲ್ಲರನ್ನೂ ಕಬಳಿಸುವ ಸಿದ್ದರಾಮಯ್ಯ ಅವರ ರಾಜಕೀಯ ಬೆಳವಣಿಗೆಯನ್ನು ಅನಾವರಣಗೊಳಿಸಲಿದು ಸಕಾಲ. ಜನತಾ ಪರಿವಾರದಲ್ಲಿರುವ ಸಿದ್ದರಾಮಯ್ಯ ಅವರ ಆಪ್ತರನ್ನು ತುಸು ವಿಚಾರಿಸಿದರೆ ಮೈಸೂರು ಜಲದರ್ಶಿನಿಯ ಕಲ್ಯಾಣಲೀಲೆಗಳು ಹೊರಬೀಳುತ್ತವೆ. ಪಕ್ಷದ ಚೌಕಟ್ಟಿನಲ್ಲಿ ಯಾವ ಹೋರಾಟವನ್ನೂ ರೂಪಿಸದ ಸಿದ್ದರಾಮಯ್ಯ ಹುತ್ತದಲ್ಲಿ ಸೇರುವ ಹಾವು, ಅಷ್ಟೇ. ನಂಜುಂಡಸ್ವಾಮಿಯ ಶಿಷ್ಯ ಎಂದು ಬಡಾಯಿ ಕೊಚ್ಚಿಕೊಳ್ಳುವ ಮಜವಾದಿಸಿದ್ದರಾಮಯ್ಯ ಅವರೇ, ನೀವು ಎಂದಾದರೂ ರೈತರಿಗೆ ನ್ಯಾಯ ಕೊಡಿಸಿದ್ದೀರಾ? ಸಿಎಂ ಆಗಿದ್ದಾಗ, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡಿದ ಸತ್ತ ಎಂದು ನಿಂದಿಸಿರಲಿಲ್ಲವೇ? ನಂಜುಂಡಸ್ವಾಮಿ ಆ ಕ್ಷಣದಲ್ಲಿ ಬದುಕಿರುತ್ತಿದ್ದರೆ ಹಸಿರುಶಾಲಿನಲ್ಲೇ ನಿಮಗೆ ಕಪಾಳಮೋಕ್ಷ ಮಾಡಿರುತ್ತಿದ್ದರು. ನಾನು ಕಾರ್ಮಿಕ ನಾಯಕ ಜಾರ್ಜ್ ಫರ್ನಾಂಡೀಸ್ ಶಿಷ್ಯ ಎಂದೂ ಮಜವಾದಿಸಿದ್ದರಾಮಯ್ಯ ಹೇಳುತ್ತಿರುತ್ತಾರೆ. ಕಾರ್ಮಿಕರ ಕಲ್ಯಾಣಕ್ಕೆ ಹೋರಾಟ ಮಾಡಿದ ಒಂದಾದರೂ ಉದಾಹರಣೆ ಇದೆಯೇ? ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

"ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು"

ಈ ಹೇಳಿಕೆಯ ಕುರಿತು ಕಾಂಗ್ರೆಸ್‌ ಅಭಿಪ್ರಾಯವೇನು?#ಶಿಕ್ಷಣವಿರೋಧಿಕಾಂಗ್ರೆಸ್ #ExposingCONgressToolkit pic.twitter.com/XBW0UnEbEx

— BJP Karnataka (@BJP4Karnataka) June 2, 2022

ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಸಿದ್ದರಾಮಯ್ಯ ಅವರದ್ದು ಬಂಡವಾಳ ಇಲ್ಲದ ಶೂನ್ಯಬಡ್ಡಿ ಭಾಷಣ! ದೇವೇಗೌಡ ಅವರು ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಯ ನಿಜವಾದ ಗುರು. ಆದರೆ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಮಾಡಿದ್ದೇನು? ಒಂದಿಷ್ಟು ಜನ “ರಾತ್ರಿ ಗೆಳೆಯರ” ಜೊತೆ ಗುಂಪುಕಟ್ಟಿಕೊಂಡು ಉಂಡ ಮನೆಗೆ ಬೆಂಕಿ ಹಚ್ಚುವ ಯೋಜನೆ ರೂಪಿಸಿದ್ದು ನಿಜವಲ್ವೇ? ಈಗ ಕಾಂಗ್ರೆಸ್ ಪಕ್ಷದಲ್ಲೂ ನಡೆಸುತ್ತಿರುವುದು ಅದನ್ನೇ ಅಲ್ಲವೇ? ಅಧಿಕಾರಕ್ಕಾಗಿ ನಡೆಸಿದ ಬಳ್ಳಾರಿ ಪಾದಯಾತ್ರೆ ಹೊರತುಪಡಿಸಿ, ಸಿದ್ದರಾಮಯ್ಯ ರಾಜಕೀಯ ಬದುಕಿನ ಮೈಲಿಗಲ್ಲುಗಳೇನು? ನಾಡು, ನುಡಿ, ಸಂಸ್ಕೃತಿ, ಜಲ, ಪರಿಸರಕ್ಕಾಗಿ ಸಿದ್ದರಾಮಯ್ಯ ಕೊಡುಗೆ ಏನು? ಜನತಾ ಪರಿವಾರದಲ್ಲಿದ್ದಾಗ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುವಾಗ, ಮಜವಾದಿಸಿದ್ದರಾಮಯ್ಯ ಮಾತ್ರ ಭಾಷಣದಲ್ಲಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ಪ್ರತೀ ನಡೆಯಲ್ಲೂ ದೇಶದ್ರೋಹಿ ಛಾಯೆ ಅಚ್ಚೊತ್ತಿದೆ. ದೇಶದ್ರೋಹಿಗಳನ್ನು ಪ್ರಧಾನಿ ಕಚೇರಿಗೆ ಆಹ್ವಾನಿಸಿದ ಕಾಂಗ್ರೆಸ್ಸಿಗರಿಂದ ಬೇರೇನನ್ನು ಅಪೇಕ್ಷಿಸಲು ಸಾಧ್ಯ? ನಮ್ಮ ಸರ್ಕಾರದಲ್ಲಿ ಅವೆಲ್ಲ ನಡೆಯುವುದಿಲ್ಲ. ನಮ್ಮ ಸರ್ಕಾರ ಮಣೆ ಹಾಕುವುದು ದೇಶಭಕ್ತರಿಗೆ ಮಾತ್ರ. ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು ಈ ಹೇಳಿಕೆಯ ಕುರಿತು ಕಾಂಗ್ರೆಸ್ ಅಭಿಪ್ರಾಯವೇನು?.

TAGGED:bjpcongressMohammed Nalapadsiddaramaiahಕಾಂಗ್ರೆಸ್ಬಿಜೆಪಿಮೊಹಮ್ಮದ್ ನಲಪಾಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Nadine de Klerks
Cricket

WPL 2026: ಬೌಲಿಂಗ್‌ನಲ್ಲಿ 4 ವಿಕೆಟ್‌, ಬ್ಯಾಟಿಂಗ್‌ನಲ್ಲಿ ಫಿಫ್ಟಿ- ಡಿ ಕ್ಲರ್ಕ್‌ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – RCB ಶುಭಾರಂಭ

Public TV
By Public TV
5 hours ago
dandeli advocate ajit naik murder case
Court

ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

Public TV
By Public TV
6 hours ago
Sabarimala chief priest Kandararu Rajeev
Latest

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Public TV
By Public TV
6 hours ago
Koppal Anjanadri Hills
Districts

ಅಂಜನಾದ್ರಿಗೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗ ಇಶಾಂತ್ ಶರ್ಮಾ

Public TV
By Public TV
6 hours ago
Pavithra Gowda 1
Bengaluru City

ಪವಿತ್ರಗೌಡಗೆ ಜೈಲೂಟದಿಂದ ಚರ್ಮರೋಗ ಸಮಸ್ಯೆ – ಜ.12ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Public TV
By Public TV
7 hours ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ ಕೇಸ್; ಪ್ರಕರಣ ಸಿಐಡಿಗೆ ವಹಿಸಿ ಸರ್ಕಾರ ಆದೇಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?