ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಈಗಾಗಲೇ ನಾಲ್ಕು ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ನಾನು ಸೇರಿ ಐದನೆಯವನು. ಎಲ್ಲರೂ ಸೇರಿಕೊಂಡು ಪಾಂಡವರಂತೆ (Pandavas) ಕಾಂಗ್ರೆಸ್ (Congress) ಕೌರವರ (Kauravas) ಸೇನೆಯನ್ನು ಸದೆಬಡಿಯುತ್ತೇವೆ ಎಂದು ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.
ಬಾದಾಮಿಯಲ್ಲಿ (Badami) ನಡೆದ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾಲ್ಕು ಜನ ಬಾದಾಮಿ ಟಿಕೆಟ್ ಆಕಾಂಕ್ಷಿಗಳಿದ್ದರೂ ನಾವೆಲ್ಲ ಪಾಂಡವರಂತೆ ಅಣ್ಣತಮ್ಮಂದಿರ ಹಾಗೆ ಇದ್ದೇವೆ ಎಂದು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಎಲ್ಲೆಲ್ಲಿ ಪಂಚ್ ಕೊಡ್ಬೇಕು ಅನ್ನೋದ್ರಲ್ಲಿ ಮೋದಿ ಮಾಸ್ಟರ್ : ಸುಮಲತಾ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಶ್ರೀರಾಮುಲು, ಮತ್ತೊಮ್ಮೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್