ಇಂದಿನಿಂದ `ಕೈ’ ಗೂಂಡಾಗಿರಿ ಖಂಡಿಸಿ ಬಿಜೆಪಿಯಿಂದ `ಬೆಂಗ್ಳೂರು ರಕ್ಷಿಸಿ’ ಯಾತ್ರೆ

Public TV
1 Min Read
BJP PADYATRE

ಬೆಂಗಳೂರು: ನಲಪಾಡ್ ಗೂಂಡಾಗಿರಿ ಸೇರಿದಂತೆ ಕಾಂಗ್ರೆಸ್ ಮುಖಂಡರ ದಬ್ಬಾಳಿಕೆಯ ಪ್ರಕರಣಗಳನ್ನು ಖಂಡಿಸಿ ಇಂದಿನಿಂದ ಬಿಜೆಪಿ ಬೆಂಗಳೂರು ರಕ್ಷಿಸಿ ಯಾತ್ರೆ ಆರಂಭಿಸಲಿದೆ.

ಇಂದು ಬೆಳಗ್ಗೆ ಸುಮಾರು 9.30ಕ್ಕೆ ಬಸವನಗುಡಿ ಬಳಿ ಇರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಕ್ಷಾಯಾತ್ರೆಗೆ ಚಾಲನೆ ದೊರೆಯಲಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಅನಂತಕುಮಾರ್, ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತು ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಲಿದ್ದಾರೆ.

BJP PADYATRE 2

ಸಂಜೆ 4 ಗಂಟೆಗೆ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತ್ಯೇಕವಾಗಿ ಪಾದಯಾತ್ರೆಗೆ ಚಾಲನೆ ಸಿಗಲಿದೆ. ಯುಬಿ ಸಿಟಿ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ರಸ್ತೆಗಳಲ್ಲಿ ಸಾಗಲಿದೆ. 14 ದಿನಗಳ ಕಾಲ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಯಲಿದ್ದು, ಬಿಜೆಪಿ ನಾಯಕರು ಕಾಲ್ನಡಿಗೆಯಲ್ಲಿ ಈ ಯಾತ್ರೆಗೆ ಪಾಲ್ಗೊಳ್ಳುತ್ತಾರೆ.

ಪ್ರತಿದಿನ ಸುಮಾರು 3 ಕಿಲೋಮೀಟರ್ ನಡಿಗೆ ಇರಲಿದ್ದು, ಪಾದಯಾತ್ರೆಯಲ್ಲಿ ದಿನಂಪ್ರತಿ ಕೇಂದ್ರದ ಓರ್ವ ನಾಯಕ ಭಾಗಿಯಾಗಲಿದ್ದಾರೆ. ಮಾರ್ಚ್ 16ರಂದು ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭಕ್ಕೆ ಅಮಿತ್ ಶಾ ಭಾಗಿಯಾಗಲಿದ್ದಾರೆ.

BJP PADYATRE 3

BJP PADYATRE 5

BJP PADYATRE 1

Share This Article
Leave a Comment

Leave a Reply

Your email address will not be published. Required fields are marked *