Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ, ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ: ವಿಜಯೇಂದ್ರ

Public TV
Last updated: July 15, 2024 9:48 pm
Public TV
Share
3 Min Read
B.Y Vijayendra
SHARE

-ಕಾಂಗ್ರೆಸ್‍ಗೆ ದಲಿತರ ವೋಟು, ನೋಟು, ಸಾವು ಬೇಕು: ಅಶೋಕ್

ಬೆಂಗಳೂರು: ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y Vijayendra) ಅವರು ಆಗ್ರಹಿಸಿದರು.

ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ನಡೆಸಿದರೆ ಸಾಲದು. ಸಿಎಂಗೆ ನಿಜವಾಗಿಯೂ ತಾಕತ್ತಿದ್ದರೆ ಮುಡಾ ಹಗರಣದ (MUDA scam) ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

R ASHOK

ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಪಾಲುದಾರರಾಗಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆಬಾಳುವ ನಿವೇಶನಗಳಿಗೆ ಮೈಸೂರು ಮುಡಾ ಹಗರಣ ನಡೆದಿದೆ. ಈ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಸದನದ ಹೊರಗೆ ಹೋರಾಟ ನಡೆಸಿದ್ದೇವೆ. ಸದನದ ಒಳಗೆ ಕೂಡ ಹೋರಾಟ ಮುಂದುವರೆಯಲಿದೆ. ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯನವರು (Siddaramaiah) ದಲಿತರ ಹೆಸರು ಹೇಳಿಕೊಂಡು, ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡದವರಿಗೆ ನ್ಯಾಯ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದವರು. ಆದರೆ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಲ್ಲದೆ, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರದ ಬಂಡವಾಳ ಈ ಮೂಲಕ ಬಯಲಾಗಿದೆ ಎಂದಿದ್ದಾರೆ.

ನಿಗಮದ ಅಧ್ಯಕ್ಷ ದದ್ದಲ್ ಕಾಣೆ
ಮುಖ್ಯಮಂತ್ರಿಗಳು ಆ ಸ್ಥಾನದಲ್ಲಿ ಕೂರಲು ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ನಿಮ್ಮ ಮಾಜಿ ಸಚಿವ ನಾಗೇಂದ್ರ ಅವರು ಇ.ಡಿ. ಕಸ್ಟಡಿಯಲ್ಲಿದ್ದಾರೆ. ನಿಗಮದ ಅಧ್ಯಕ್ಷರೂ ಆದ ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಹಾಗಿದ್ದರೆ ಸಿಎಂ ಉತ್ತರ ಕೊಡಬೇಕಲ್ಲವೇ? ಅಧಿಕಾರಿಗಳು ಸೇರಿಕೊಂಡು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ್ದಾಗಿ ಹೇಳುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಅವರ ಶಾಸಕರಿಗೆ ಕ್ಲೀನ್ ಚಿಟ್ ಕೊಡುವ ದುಸ್ಸಾಹಸ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಭ್ರಷ್ಟಾಚಾರ ರಹಿತ ಆಡಳಿತ ಕೊಡುವುದಾಗಿ ಹೇಳಿ ಜನರ ಕಿವಿಗೆ ಹೂವು ಇಟ್ಟಿದ್ದರು. ಆದರೆ, ಅವರ ಬಂಡವಾಳ ಬಯಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳು ನಿಜವಾಗಿ ಪ್ರಾಮಾಣಿಕರೇ ಆಗಿದ್ದರೆ, ನಿಷ್ಪಕ್ಷಪಾತ ತನಿಖೆ ಆಗಬೇಕೆಂದಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ ಕುರಿತು ಇ.ಡಿ ತಿಳಿಸಿದ ಹಿನ್ನೆಲೆಯಲ್ಲಿ ಇವೆರಡೂ ಹಗರಣಗಳ ಬಗ್ಗೆ ಸದನದಲ್ಲಿ ಉತ್ತರ ಕೊಡಬೇಕು. ವಾಲ್ಮೀಕಿ ನಿಗಮದ ಹಗರಣದ ಸಂಬಂಧ ನಾವು ನಿಲುವಳಿ ಸೂಚನೆ ಮಂಡಿಸುತ್ತಿದ್ದೇವೆ. ಇದರ ಕುರಿತು ಚರ್ಚೆ ಆಗಲೇಬೇಕು. ಸಿಎಂ ಉತ್ತರ ಕೊಡಲೇಬೇಕು ಎಂದು ಅವರು ಒತ್ತಾಯಿಸಿದರು.

ಎಲ್ಲಾ ಹಗರಣವನ್ನೂ ಸಿಬಿಐ ತನಿಖೆಗೆ ಕೊಡಿ
ಯಾವ ಸರ್ಕಾರ ಇದ್ದಾಗ ಮುಡಾದಲ್ಲಿ ಹಗರಣ ನಡೆದಿದ್ದರೂ ಎಲ್ಲಾ ಸೇರಿಸಿ ಸಿಬಿಐ ತನಿಖೆಗೆ ಒಪ್ಪಿಸಿ. ಸಿಎಂ ಕುಟುಂಬವೇ ಈ ಹಗರಣದಲ್ಲಿ ಭಾಗಿಯಾಗಿದೆ. ನಿಮಗೆ ಬೇಕಾದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿದರೆ ಸಾಕಾಗುವುದಿಲ್ಲ. ಸಿಬಿಐ ತನಿಖೆಗೆ ಕೊಡಲೇಬೇಕು. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಹೆದರಿಸುವ ಕೆಲಸ ಮಾಡದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ಎರಡೂ ಹಗರಣಗಳನ್ನು ಒಂದು ತಾರ್ಕಿಕ ಅಂತ್ಯಕ್ಕೆ ಒಯ್ಯುವ ಬಗ್ಗೆ ನಿರ್ಧಾರ ಮಾಡಿದ್ದೇವೆ. ಅಲ್ಲಿನವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‍ಗೆ ದಲಿತರ ಸಾವು ಬೇಕು
ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿಯೂ ದಲಿತರೇ ಆಗಿದ್ದಾರೆ. ಕಾಂಗ್ರೆಸ್ಸಿಗರಿಗೆ ದಲಿತರ ಮತ ಬೇಕು. ದಲಿತರ ನೋಟು ಕೂಡ ಬೇಕು. ದಲಿತರ ಸಾವು ಬೇಕು. ಇದು ಕಾಂಗ್ರೆಸ್ ನೀತಿ. ಈ ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಅಧಿಕಾರದಲ್ಲಿ ಉಳಿಯುವ ಯೋಗ್ಯತೆ ಕಳಕೊಂಡಿದೆ. ಮಾನ ಮರ್ಯಾದೆ ಇದ್ದರೆ ಸಿಎಂ ರಾಜೀನಾಮೆ ಕೊಡಬೇಕಿತ್ತು. ಇವತ್ತು ಯಾವ ಮುಖ ಇಟ್ಟುಕೊಂಡು ವಿಧಾನಸೌಧಕ್ಕೆ ಬರುತ್ತಾರೋ ಅರ್ಥ ಆಗುತ್ತಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

TAGGED:B.Y vijayendrabjpcongressMUDA Scamr ashoksiddaramaiahValmiki Corp scam
Share This Article
Facebook Whatsapp Whatsapp Telegram

Cinema Updates

chandan shetty 1
Chinnaswamy Stampede | ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು: ಚಂದನ್ ಶೆಟ್ಟಿ
32 seconds ago
Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
12 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago

You Might Also Like

rcb stampede
Bengaluru City

ಪೊಲೀಸರು ಅನುಮತಿ ನೀಡದೇ ಇದ್ರೂ ಪಟ್ಟು ಹಿಡಿದು ವಿಜಯೋತ್ಸವ ಆಯೋಜನೆ!

Public TV
By Public TV
10 minutes ago
Chinnaswamy Stadium Stampede Bhumik Hassan
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

Public TV
By Public TV
24 minutes ago
daily horoscope dina bhavishya
Astrology

ದಿನ ಭವಿಷ್ಯ 05-06-2025

Public TV
By Public TV
1 hour ago
virat kohli bengaluru stampede
Bengaluru City

ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

Public TV
By Public TV
7 hours ago
bengaluru stambede 1
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Public TV
By Public TV
8 hours ago
HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?