Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ- ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ- ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ

Bengaluru City

ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ- ಹಿಜಬ್ ನಿಷೇಧ ವಾಪಸ್ಸಿಗೆ ವಿಜಯೇಂದ್ರ ಕಿಡಿ

Public TV
Last updated: December 23, 2023 3:50 pm
Public TV
Share
2 Min Read
vijayendra
SHARE

ಬೆಂಗಳೂರು: ಸಮವಸ್ತ್ರ ಇರುವುದು ವಿಷಬೀಜ ಬಿತ್ತುವುದಕ್ಕಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ನಮ್ಮ ಮುಂದೆ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ. ರಾಜ್ಯದ ಕಾನೂನು ಸುವ್ಯವಸ್ಥೆ ಒಳ್ಳೆಯದಾಗಿ ಇರಬಾರದಾ.?, ನಿಮ್ಮ ಉದ್ದೇಶ ಏನು ಹಾಗಾದ್ರೆ..?, ನಿಮ್ಮನ್ನೇನು ಬಂದು ಮಕ್ಕಳು ಕೇಳಿದ್ರಾ..?, ಯಾರೋ ಸಭೆಯಲ್ಲಿ ಕೇಳಿದ್ರಂತೆ ಇವರು ಹೇಳಿಬಿಟ್ರಂತೆ ಎಂದು ಹಿಜಬ್ ನಿಷೇಧ (Hijab Ban) ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.

HIJAB 1

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಹಿಜಬ್ ವಿಚಾರದಲ್ಲಿ ಬೇಜವ್ದಾರಿ ಹೇಳಿಕೆ ನೀಡಿದ್ದಾರೆ. ಶಿಕ್ಷಣ ಕಲುಷಿತಗೊಳಿಸಲು ಕೈಹಾಕಿರುವುದು ನಾಡಿನ ದುರಾದೃಷ್ಟ. ಸಿಎಂ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಶಾಲಾ ಮಕ್ಕಳನ್ನು ಕೊಳಕು ರಾಜಕೀಯದಿಂದ ದೂರ ಇಡಬೇಕಿತ್ತು. ಪರೀಕ್ಷೆಗೆ ಹೋಗುವವರಿಗೆ ತಾಳಿ, ಕಾಲುಂಗುರ ಬಿಚ್ಚಿಸುತ್ತಾರೆ. ಇದು ತಲೆ ತಗ್ಗಿಸುವಂತಹ ವಿಚಾರವಾಗಿದೆ ಎಂದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರೂ ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತರಾಗಿದ್ದಾರೆ. 50%ಕ್ಕಿಂತ ಹೆಚ್ಚು ಅವರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರಣ ಅಲ್ವಾ.?. ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕಿಗೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

TALAQ

ದೇಶದ ಪ್ರಧಾನಿ ಮೋದಿಯವರು ತ್ರಿಬಲ್ ತಲಾಕ್ ಕಿತ್ತು ಹಾಕಿದ್ರು. ನೀವೇನು ಮಾಡಿದ್ರಿ..?, ಉದ್ದುದ್ದ ಭಾಷಣ ಮಾಡ್ತೀರಾ..?. ಅಲ್ಪಸಂಖ್ಯಾತರ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್ ನವರು. ಐದು ವರ್ಷಗಳ ಕಾಲ ಪರಿಪೂರ್ಣ ಆಡಳಿತ ನೀಡಿದ್ದೀರಿ. ಚುನಾವಣೆ ನಡೆಯುವ ಸಂದರ್ಭದಲ್ಲಿ ಲಿಂಗಾಯತ ಧರ್ಮ ಒಡೆದ್ರಿ. ಬೆಂಕಿ ಹಾಕುವ ಕೆಲಸ ಮಾಡಿದ್ರಿ ಎಂದು ವಿಜಯೇಂದ್ರ ಕಿಡಿಕಾರಿದರು.

ಪಂಚ ರಾಜ್ಯಗಳ ಫಲಿತಾಂಶ ಕಾಂಗ್ರೆಸ್ ಪಕ್ಷದ ಬೂಟಾಟಿಕೆ ನಂಬುವುದಿಲ್ಲ ಎನ್ನುವುದು ಸಾಬೀತಾಗಿದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಸೋಲು ಕಾಣಲಿದೆ. ಹೀಗಾಗಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಲು ಮುಂದಾಗಿದೆ. ಇದು ಖಂಡನೀಯ ಹಾಗೂ ದುರಾದೃಷ್ಟ. ಸರ್ಕಾರದ ಒಡೆದಾಳುವ ನೀತಿಯನ್ನು ಖಂಡಿಸುತ್ತೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತ ಹದಗೆಟ್ಟಿದೆ. ಶಾಲೆಗಳಿಗೆ ಹೋಗುವ ಮಕ್ಕಳಲ್ಲಿ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯಾ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಘಟನೆಯು ಕಾನೂನು ಸುವ್ಯವಸ್ಥೆ ಕುಸಿದುದರ ಸಂಕೇತ. ರಾಜ್ಯದಲ್ಲಿ ಸಿಎಂ ಇದ್ದಾರಾ? ಸಚಿವರು ಇದ್ದಾರಾ? ಎಂದು ಪ್ರಶ್ನಿಸುವಂತಾಗಿದೆ. ಬರಗಾಲವಿದ್ದರೂ ಸಚಿವರು ಅಧಿಕಾರಿಗಳ ಸಭೆ ನಡೆಸಿಲ್ಲ.

ನಾಡಿನ ಸಮಸ್ತ ಜನತೆಗೆ ಅವರು ವೈಕುಂಠ ಏಕಾದಶಿ ಶುಭಾಶಯಗಳನ್ನು ಕೋರಿದರು. ಸಂಸದ ಡಾ.ಉಮೇಶ್ ಜಾಧವ್, ಮಾಜಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:bengaluruBY VijayendraHijabsiddaramaiahಬಿ.ವೈ.ವಿಜಯೇಂದ್ರಬೆಂಗಳೂರುಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
17 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
20 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
55 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?