ಜೈಪುರ: ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ದಲಿತ ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಭದ್ರತಾ ಲೋಪವಾಗಿರುವುದಾಗಿ ಆರೋಪಿಸಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಪಂಜಾಬ್ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಮತ್ತು ಅವರನ್ನು ಇಡೀ ರಾಷ್ಟ್ರವು ಸ್ವಾಗತಿಸಿದೆ. ಆದರೆ ಪಂಜಾಬ್ನಿಂದ ನಾನು ಜೀವಂತವಾಗಿ ಬಂದಿದ್ದೇನೆ ಎಂಬ ಹೇಳಿಕೆಯನ್ನು ಮೋದಿ ಅವರು ನೀಡಬಾರದಿತ್ತು. ಕೆಲವರು ರಾಜಕೀಯ ಲಾಭ ಪಡೆಯಲು ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಭದ್ರತಾ ಲೋಪವಾಗಿದೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ನೆ ಮಾನಹಾನಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
ಕಾಂಗ್ರೆಸ್ ನಾಯಕರು ಮತ್ತು ಪ್ರಧಾನಿಗಳು ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಹಿಂಸೆಯನ್ನು ತನ್ನ ಸಿದ್ಧಾಂತವಾಗಿ ಅನುಸರಿಸುತ್ತದೆ. ಆದರೆ ಬಿಜೆಪಿ ಮತ್ತು ಆರ್ಎಸ್ಎಸ್ ಅವರ ಮನಸ್ಸಿನಲ್ಲಿ ಹಿಂಸಾಚಾರವಿದೆ. ಅವರು ಹೇಗೆ ನಮಗೆ ಅಹಿಂಸೆಯನ್ನು ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಬುಧವಾರ ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಫ್ಲೈ ಓವರ್ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫ್ಲೈ ಓವರ್ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದಾರೆ.