ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಲನೂರು ಲೇಪಾಕ್ಷಿ ಅವರಿಗೆ ಕೊನೆ ಘಳಿಗೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ಗಳಗಳನೆ ಕಣ್ಣೀರಿಟ್ಟಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಿಂದ ಪರಭಾವಗೊಂಡ ವೈಎ ನಾರಾಯಣಸ್ವಾಮಿಗೆ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಕೊನೆ ಘಳಿಗೆಯಲ್ಲಿ ಬಿಜೆಪಿ ಘೋಷಿಸಿದೆ. ಜೂನ್ 8 ರಂದು ನಡೆಯಬೇಕಿದ್ದ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಟಿಕೆಟ್ ಆಕ್ಷಾಂಕಿ ಹಾಲನೂರು ಲೇಪಾಕ್ಷಿ ಈಗಗಾಲೇ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು.
ಇಂದು ನಾಮಪತ್ರ ಸಲ್ಲಿಕೆಗೆ ಇತರ ಜಿಲ್ಲೆಗಳಿಂದ ಶಿಕ್ಷಕರು ಲೇಪಾಕ್ಷಿ ಅವರ ಮನೆಗೆ ಆಗಮಸಿದ್ದರು. ಆದ್ರೆ ಕೊನೆ ಘಳಿಗೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಣ್ಣೀರು ಸುರಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಐದು ತಿಂಗಳ ಹಿಂದೆಯೇ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಆದ್ರೆ ಇಂದು ರಾಜಕೀಯ ತಂತ್ರಗಾರಿಕೆ ನಡೆಸಿ ಟಿಕೆಟ್ ತಪ್ಪಿಸಲಾಗಿದೆ. ಬಿಎಸ್ವೈ ಅವರ ಮಾತಿಗೆ ಬೆಲೆ ನೀಡಿ ಇಂದು ಚುನಾವಣೆಯ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.
ಜೂನ್ 21ಕ್ಕೆ ತೆರವಾಗಲಿರುವ ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೇ 22 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಜೂನ್ 8 ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ.