ನವದೆಹಲಿ: ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಲೇ ಬಿಜೆಪಿ ಶಾಸಕರು ಸಭೆಯಿಂದ ನೇರವಾಗಿ ಗುರುಗ್ರಾಮದ ಬಳಿ ಇರುವ ರೆಸಾರ್ಟ್ ಗೆ ತೆರಳಲು ಸಿದ್ಧರಾಗಿದ್ದಾರೆ.
ಎಲ್ಲ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡುವಂತೆ ಅಮಿತ್ ಶಾ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಯಡಿಯೂರಪ್ಪ ಸಹಿತ 98 ಶಾಸಕರು ಗುರುಗ್ರಾಮಕ್ಕೆ ಬಸ್ಸಿನ ಮೂಲಕ ತೆರಳಲಿದ್ದಾರೆ. ಎರಡು ಬಸ್ಸುಗಳಲ್ಲಿ ಶಾಸಕರನ್ನು ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಬಿಎಸ್ ಯಡಿಯೂರಪ್ಪ ಶಾಸಕರಿಗೆ ಮಾಹಿತಿ ನೀಡಿದ್ದು, 16 ಕೈ ಶಾಸಕರು ಹಾಗೂ ಇಬ್ಬರು ಪಕ್ಷೇತರರು ಬಿಜೆಪಿಗೆ ಬರಲಿದ್ದಾರೆ. ಎಲ್ಲರೂ ಕೂಡ ಒಟ್ಟಿಗೆ ಇರೋಣ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದು ಬೇಡ ಎಂದಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
ಡಿಕೆ ಶಿವಕುಮಾರ್ ಇಲ್ಲವೇ ಎಚ್ಡಿಕೆ ಯಾರೇ ಕರೆ ಮಾಡಿ ಅಮಿಷಗಳನ್ನ ಒಡ್ಡಿದ್ದರು ಅದನ್ನು ನಮ್ಮ ಗಮನಕ್ಕೆ ತನ್ನಿ. ಅವರು ಕಾಲ್ ಮಾಡಿದರೆ ಅದನ್ನು ರೆಕಾರ್ಡ್ ಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಮಧ್ಯಾಹ್ನ ಯಡಿಯೂರಪ್ಪನವರು ಇಂದು ಸಂಜೆ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದರು. ಆದರೆ ಸಂಜೆಯಾಗುತ್ತಿದ್ದಂತೆ ಪ್ಲಾನ್ ಬದಲಾಗಿದೆ. ಕ್ಷಣ ಕ್ಷಣಕ್ಕೂ ಬಿಜೆಪಿ ನಾಯಕರ ಪ್ಲಾನ್ ಬದಲಾಗುತ್ತಿದ್ದು ಕುತೂಹಲ ಮೂಡಿಸಿದೆ. ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆಪರೇಷನ್ ಕಮಲಕ್ಕೆ ಪ್ರತಿ ತಂತ್ರ ರೂಪಿಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv