ದೋಸ್ತಿ ಸರ್ಕಾರ ಬೀಳಿಸಲು ಹೊಸ ಮುಹೂರ್ತ ನೋಡಿದ್ರಾ ಬಿಎಸ್‍ವೈ!

Public TV
1 Min Read
Congress BSY JDS

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿ ಮೇ 23ಕ್ಕೆ ಒಂದು ವರ್ಷವಾಗುತ್ತದೆ. ಸರ್ಕಾರ ರಚನೆಯಾದಗಿನಿಂದಲೂ ರಾಜ್ಯದಲ್ಲಿ ಆಪರೇಷನ್ ಕಮಲದ ಮಾತುಗಳು ಕೇಳಿ ಬರುತ್ತಿವೆ. ಶಾಸಕರನ್ನು ರೆಸಾರ್ಟಿನಲ್ಲಿ ಇರಿಸೋದು, ತೆರೆಮರೆಯಲ್ಲಿ ರಾಜಕೀಯ ತಂತ್ರಗಳನ್ನು ಪ್ರಯೋಗಿಸುತ್ತಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ನಾಯಕರು ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೇ 23ರ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಮಲ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ಸರ್ಕಾರ ಬೀಳಿಸಲು ಹೊಸ ಮುಹೂರ್ತ ನೋಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

BSY HDK

ಲೋಕಸಭಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಧೃವೀಕರಣ ನಡೆಯಲಿದೆ ಎಂಬ ಮಾತುಗಳು ಹರಿದಾಡುತ್ತಿವೆ. ಆದ್ರೆ ಯಡಿಯೂರಪ್ಪ ಮೇ 23ರಂದು ಮೈತ್ರಿ ಸರ್ಕಾರದ ಗೂಡಿಗೆ ಕೈ ಹಾಕೋದು ಬೇಡ. ಫಲಿತಾಂಶ ಬಂದ ಎಂಟು ದಿನಗಳ ಕಾಲ ದೋಸ್ತಿಗಳಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎಂಬುದನ್ನು ಗಮನಿಸೋಣ ಎಂಬ ಸಂದೇಶವನ್ನು ಪಕ್ಷದ ನಾಯಕರಿಗೆ ಯಡಿಯೂರಪ್ಪ ರವಾನಿಸಿದ್ದಾರಂತೆ.

BSY SIDDU

ಫಲಿತಾಂಶ ಬಂದ ಎಂಟನೇ ದಿನ ಅಂದ್ರೆ ಮೇ 31ರಂದು ನಮ್ಮ ಮುಂದಿನ ನಡೆಯನ್ನು ನಿರ್ಧರಿಸೋಣ. ಅಲ್ಲಿಯವರೆಗೂ ಎಲ್ಲ ನಾಯಕರು ಶಾಂತಿಯುತವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕೆಂಬ ಸಂದೇಶವನ್ನು ಯಡಿಯೂರಪ್ಪ ರವಾನಿಸಿದ್ದಾರೆ ಎನ್ನಲಾಗಿದೆ.

ಮೇ 23ರಿಂದ ಮೇ 31ರವರೆಗೆ ಕಾಂಗ್ರೆಸ್ ಅತೃಪ್ತರನ್ನು ಸೆಳೆಯುವುದು. ಈ ತಂತ್ರ ಯಶಸ್ವಿಯಾದ ಬಳಿಕ ಎಲ್ಲ ಕೈ ಬಂಡಾಯ ಶಾಸಕರನ್ನು ಒಂದೆಡೆ ಸೇರಿಸಿ ಮೇ 31ರ ಶುಭ ಶುಕ್ರವಾರ ಸಂಜೆ 5 ಗಂಟೆಗೆ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ ಎಂಬುದನ್ನ ರಾಜ್ಯದ ಜನತೆಯ ಮುಂದೆ ಹೇಳಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *