Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ

Bengaluru City

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ

Public TV
Last updated: August 31, 2025 3:57 pm
Public TV
Share
4 Min Read
Captain Brijesh Chowta
SHARE

ಬೆಂಗಳೂರು/ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರ ಮಾಡುವುದನ್ನು ಬಿಜೆಪಿ (BJP) ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಇಡೀ ರಾಜ್ಯ ಮತ್ತು ದೇಶಕ್ಕೆ ನಾಳೆ (ಸೆ.1) ನಡೆಯುವ ‘ಧರ್ಮಸ್ಥಳ ಚಲೋ’ (Dharmasthala Chalo) ಸಮಾವೇಶದಲ್ಲಿ ನೀಡಲಿದ್ದೇವೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ಯಾವಾಗಲೂ ಸನಾತನ ಧರ್ಮದ ಸಂಸ್ಕೃತಿ ಮತ್ತು ಜೊತೆಗೆ ಹಿಂದೂ ಶ್ರದ್ಧಾ ಕೇಂದ್ರಗಳ ಜೊತೆಗೆ, ಹಿಂದೂ ಸಮಾಜದ ಜೊತೆಗೆ ಇದ್ದೇವೆ ಎಂದು ತೋರಿಸುವ ಪ್ರಯತ್ನದಲ್ಲಿ ನಾಳೆ ‘ಧರ್ಮಸ್ಥಳ ಚಲೋ’ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಬಿಜೆಪಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಹಾಗೂ ಲಕ್ಷಾಂತರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ನಮ್ಮ ಇಡೀ ಕುಟುಂಬ ಧರ್ಮಸ್ಥಳದಲ್ಲಿ ಹುಟ್ಟಿ ಬಹಳ ಪುಣ್ಯ ಮಾಡಿದೆ: ಡಿ.ವೀರೇಂದ್ರ ಹೆಗ್ಗಡೆ

ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪುಣ್ಯಕ್ಷೇತ್ರದ ವಿರುದ್ಧ ಹಲವಾರು ಅಪಪ್ರಚಾರಗಳು, ಆರೋಪ ಮಾಡಲಾಗುತ್ತಿದೆ. ಸುಳ್ಳು ಆಪಾದನೆಗಳು, ಯಾವುದೇ ಸಾಕ್ಷ್ಯಾಧಾರವಿಲ್ಲದೆ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಯಲಿದೆ. ಕ್ಷೇತ್ರದ ಪಾವಿತ್ರ‍್ಯಕ್ಕೆ ಯಾವುದೇ ಧಕ್ಕೆಯಾಗಬಾರದು. ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನಂಬಿಕೊಂಡಿರುವ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಆಗಬಾರದು. ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಅಪಪ್ರಚಾರ ಆಗಬಾರದು ಎಂಬ ಉದ್ದೇಶದಿಂದ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಈದ್ ಮಿಲಾದ್ ಬಗ್ಗೆ ಮಾತ್ರ ಯಾಕೆ ಮಕ್ಕಳು ಅಧ್ಯಯನ ಮಾಡಬೇಕು – ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಬಿಜೆಪಿಯು ಕಾನೂನು, ಸಂವಿಧಾನ ಮತು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಂಬಿಕೆ ಮತ್ತು ಶ್ರದ್ಧೆಯನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಒಂದು ಪಕ್ಷ. ಧರ್ಮಸ್ಥಳದ ಎಸ್‌ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸಿತ್ತು. ಆದರೆ ತನಿಖೆ ಯಾವ ರೀತಿ ಹೋಗುತ್ತಿದೆ ಎಂಬ ಸಂಶಯವಿದೆ. ಕಮ್ಯುನಿಸ್ಟರು, ಎಸ್‌ಡಿಪಿಐ, ಮತ್ತು ಪಿಎಫ್‌ಐ ಸಂಘಟನೆಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ: ಸಿದ್ದರಾಮಯ್ಯ

ಷಡ್ಯಂತ್ರ ನಡೆಸಿದವರ ವಿರುದ್ಧ ಕ್ರಮಕ್ಕೆ ತಮ್ಮೇಶ್ ಗೌಡ ಆಗ್ರಹ:
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ಅವರು ಆಗ್ರಹಿಸಿದರು. ಎಸ್‌ಐಟಿ ತನಿಖೆಯ ದಿಕ್ಕು ಸರಿಯಿಲ್ಲ ಎಂದು ಆಕ್ಷೇಪಿಸಿದರು. ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳ ರಾಜ್ಯದಲ್ಲಿ, ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ, ಚರ್ಚೆಯಾಗುತ್ತದೆ. ತಮಿಳುನಾಡಿನ ಸಂಸದರು ಕೂಡ ಈ ಪ್ರಕರಣದಲ್ಲಿ ಭಾಗವಹಿಸಿದ್ದಾರೆ ಎಂದು ಮಾಧ್ಯಮಗಳು ತಿಳಿಸುತ್ತಿದೆ. ಎಲ್ಲಾ ಆಯಾಮಗಳ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಎನ್‌ಐಗೆ ವಹಿಸಲು ಆಗ್ರಹಿಸಿದರು. ಇದನ್ನೂ ಓದಿ: ಪೊಲೀಸ್‌ ಅಧಿಕಾರಿಗಳನ್ನೂ ಬಿಡದ ಸೈಬರ್‌ ವಂಚಕರು – ಕೆಜಿಎಫ್‌ ಎಸ್ಪಿ ಫೇಸ್‌ಬುಕ್‌, ಇನ್‌ಸ್ಟಾ ಖಾತೆ ನಕಲು

ರಾಜ್ಯ ಸರ್ಕಾರ ಅನಾಮಿಕ ವ್ಯಕ್ತಿಯ ಪೂರ್ವಪರ ವಿಚಾರಣೆ ನಡೆಸಲಿಲ್ಲ. ಅನಾಮಿಕ ವ್ಯಕ್ತಿ ತಂದು ಕೊಟ್ಟ ಬುರುಡೆಯನ್ನು ತನಿಖೆಗೂ ಮುನ್ನ ಪರಿಶೀಲಿಸಿಲ್ಲ. ನೂರಾರು ಶವ ಹೂತುಹಾಕಿ ಅಪರಾಧ ಮಾಡಿರುವ ವ್ಯಕ್ತಿಯನ್ನು ರಾಜ ಮರ್ಯಾದೆ ನೀಡಿ ನಡೆಸುತ್ತಿರುವ ಎಸ್‌ಐಟಿ ತನಿಖೆಯ ಕುರಿತು ಹಲವಾರು ಸಂಶಯಗಳು ಕಾಣುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ದೇಶಾದ್ಯಾಂತ ಮತ್ತು ರಾಜ್ಯಾದ್ಯಾಂತ ಇದ್ದಾರೆ. ಹಿಂದೂ ಧಾರ್ಮಿಕ ಕ್ಷೇತ್ರದ ಮೇಲೆ ಯಾರೋ ವ್ಯಕ್ತಿಗಳು ಆರೋಪ ಮಾಡಿದಾಗ ಅದನ್ನು ಪರಿಶೀಲಿಸಬೇಕಾಗಿರುವ ಜವಾಬ್ದಾರಿಯನ್ನು ಈ ಸರ್ಕಾರ ಮಾಡಿದೆಯೇ ಎಂದು ಪ್ರಶ್ನಿಸಿದರು. ಧರ್ಮಸ್ಥಳ ಪ್ರಕರಣವು ಎಡಪಂಥೀಯರ, ನಗರ ನಕ್ಸಲರ, ಅಂತರಾಷ್ಟ್ರೀಯ ಮಟ್ಟದ ಏಜೆಂಟ್‌ಗಳ ಮತ್ತು ಸರ್ಕಾರ ಪ್ರಭಾವಿ ವ್ಯಕ್ತಿಗಳ ಪ್ರಭಾವದಿಂದ ಆಗಿದೆಯೋ ಎನ್ನುವುದು ಎನ್‌ಐಎ ತನಿಖೆಯಲ್ಲಿ ತಿಳಿಯಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಚಿನ್ನಯ್ಯ ಈಗ ಡಬಲ್‌ ಗೇಮ್‌ ಆಡುತ್ತಿದ್ದಾನೆ: ಜಯಂತ್‌

ರಾಜ್ಯ ಸರ್ಕಾರ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿಚಾರವಾಗಿ ಯಾರಾದರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದರೆ ಅವರ ಮೇಲೆ ಸಂಜೆಯೊಳಗೆ ಎಫ್‌ಐಆರ್ ದಾಖಲಿಸಿ ಬಂಧಿಸುತ್ತಾರೆ. ಒಬ್ಬ ಅನ್ಯ ಧರ್ಮೀಯ ವ್ಯಕ್ತಿ ಹಿಂದೂ ಧರ್ಮದ ದೇವಸ್ಥಾನದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾನೆ. ಅವನಿಗೆ ನೋಟಿಸ್ ನೀಡುವ ನೆಪದಲ್ಲಿ ಅವನ ಮೇಲೆ ಎಫ್‌ಐಆರ್ ಹಾಕಲಾಗಿದೆ. ಹಾಗಿದ್ದಲ್ಲಿ ಸರ್ಕಾರದ ಜವಾಬ್ದಾರಿ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನೆಲಮಂಗಲ ಹಾಸನ ಟೋಲ್‌ನಲ್ಲಿ ವಾಹನ ಸವಾರರಿಗೆ ಬರೆ – ಸೆ.1 ರಿಂದ ದರ ಏರಿಕೆ

ಹಿಂದೂ ಧರ್ಮೀಯ ಇನ್ನೊಂದು ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಾಗ ಧಾರ್ಮಿಕ ಗಲಭೆ, ಧಾರ್ಮಿಕ ಪ್ರಚೋದನೆ ಉಂಟಾಗುತ್ತದೆ ಎಂದು ಕೇಸ್ ಹಾಕುತ್ತಾರೆ. ಹಾಗಿದ್ದರೆ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿರುವ ಸಮೀರ್ ವ್ಯಕ್ತಿಯ ಮೇಲೆ ಯಾವ ಕಾರಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಕೇಳಿದರು. ಇದನ್ನೂ ಓದಿ: ಮಹಾರಾಷ್ಟ್ರ | ಮತ್ತೊಬ್ಬಳನ್ನು ಮದುವೆಯಾಗುವ ಆಸೆಗೆ ಪ್ರೇಯಸಿಯನ್ನೇ ಕೊಂದ ಪ್ರಿಯಕರ

ಈ ವೇಳೆ ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ, ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಜೆಡಿಎಸ್ ಸತ್ಯ ಯಾತ್ರೆ

TAGGED:bjpCaptain Brijesh ChowtadharmasthalaDharmasthala ChaloDharmasthala Mass BurialsMask Mansitಕ್ಯಾ.ಬ್ರಿಜೇಶ್‌ ಚೌಟಧರ್ಮಸ್ಥಳಧರ್ಮಸ್ಥಳ ಚಲೋಬಿಜೆಪಿಮಂಗಳೂರು
Share This Article
Facebook Whatsapp Whatsapp Telegram

Cinema news

Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories
yash mother compound demolition
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ; ಯಶ್ ತಾಯಿಗೆ ಕೋರ್ಟ್ ಶಾಕ್ – ಕಾಂಪೌಂಡ್ ಧ್ವಂಸ
Cinema Hassan Latest Main Post Sandalwood

You Might Also Like

JJR Nagar Om Shakti Maladharis Stone Pelting
Bengaluru City

Bengaluru | ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆತ

Public TV
By Public TV
2 hours ago
Venezuela Oil Reserve
Latest

Venezuela | ವಿಶ್ವದ ಅತಿದೊಡ್ಡ ತೈಲ ನಿಕ್ಷೇಪದ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? ಭಾರತದ ಮೇಲೆ ಏನು ಪರಿಣಾಮ?

Public TV
By Public TV
3 hours ago
Chinnaswamy Stadium Rain Alert
Bengaluru City

IPL 2026 | ಬೆಂಗಳೂರಿನಿಂದ ಐಪಿಎಲ್‌ ಎತ್ತಂಗಡಿ..? – ಟ್ವಿಸ್ಟ್‌ ಕೊಟ್ಟ ಎಂಸಿಎ ಟ್ವೀಟ್‌!

Public TV
By Public TV
4 hours ago
KOMUL
Chikkaballapur

KOMUL | ಹಾಲು ಖರೀದಿ ದರ 2 ರೂ., ಪ್ರೋತ್ಸಾಹ ಧನ 10 ರೂ. ಹೆಚ್ಚಳಕ್ಕೆ ಒತ್ತಾಯ

Public TV
By Public TV
5 hours ago
Bangladesh Hindu Man
Latest

ಹಿಂದೂ ವ್ಯಕ್ತಿಯ ಹತ್ಯೆ ಕೇಸ್‌ – ಬಾಂಗ್ಲಾ ಪೊಲೀಸರಿಂದ ಮೂವರು ಆರೋಪಿಗಳ ಬಂಧನ

Public TV
By Public TV
5 hours ago
Chitradurga Vani Vilas Sagar Dam Bagina
Chitradurga

ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಭರ್ತಿ – ವಾಣಿವಿಲಾಸ ಸಾಗರ ಡ್ಯಾಂಗೆ ಬಾಗಿನ ಅರ್ಪಣೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?