Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ – ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ – ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು

Public TV
Last updated: April 4, 2025 4:04 pm
Public TV
Share
6 Min Read
BJP worker Vinay Somaiah commits suicide in Bengaluru Virajpet Congress MLA Ponnannas name is being mentioned
SHARE

– ಡೆತ್‌ನೋಟ್ ಬರೆದಿಟ್ಟು ವಿನಯ್ ಸೋಮಯ್ಯ ಆತ್ಮಹತ್ಯೆ
– ಗ್ರೂಪಿನ ಅಡ್ಮಿನ್‌ ಆಗಿದ್ದಕ್ಕೆ ನನ್ನ ಮೇಲೆ ಎಫ್‌ಐಆರ್‌
– ಒಬ್ಬರು 1 ರೂ. ನೀಡಿದ್ರೆ ಪತ್ನಿ, ಮಗಳಿಗೆ ಸಹಾಯವಾಗುತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಮಡಿಕೇರಿಯ (Madikeri) ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ವಿನಯ್‌ ಸೋಮಯ್ಯ (Vinay Somaiah) ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದು ಡೆತ್‌ನೋಟ್‌ನಲ್ಲಿ ವಿರಾಜಪೇಟೆಯ ಕಾಂಗ್ರೆಸ್‌ ಶಾಸಕ ಪೊನ್ನಣ್ಣ (A.S. Ponnanna) ಹೆಸರನ್ನು ಉಲ್ಲೇಖಿಸಿದ್ದಾರೆ.

ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನಾನು ವಾಟ್ಸಪ್‌ ಗ್ರೂಪಿನ ಅಡ್ಮಿನ್‌ ಆಗಿದ್ದಕ್ಕೆ ನನ್ನ ಮೇಲೆ ಸುಳ್ಳು ಎಫ್‌ಐಆರ್‌ (FIR) ದಾಖಲು ಮಾಡಲಾಗಿದೆ. ಶಾಸಕ ಪೊನ್ನಣ್ಣ ಆದೇಶದಂತೆ ಪೊಲೀಸರು ನಡೆದುಕೊಂಡಿದ್ದಾರೆ. ಮಡಿಕೇರಿಯ ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಅವರು ನನಗೆ ಕಾಲ್‌ ಮಾಡಿ ಬೆದರಿಸಿದ್ದಾರೆ. ನನ್ನ ಆತ್ಮಹತ್ಯೆಗೆ ತೆನ್ನೀರ ಮಹೀನಾ ಕಾರಣ ಎಂದು ಡೆತ್‌ನೋಟ್‌ನಲ್ಲಿ ವಿನಯ್‌ ಬರೆದಿದ್ದಾರೆ.

ಸಾವಿಗೂ ಮುನ್ನ ವಿನಯ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ನೇಣಿಗೆ ಶರಣು

Madikeri party member vinay somaiah commits suicide at BJP office in Nagawara Bengaluru

ಎಲ್ಲರಿಗೂ ನನ್ನ ಕೊನೆಯ ನಮಸ್ತೇ,
ನಾನು ವಿನಯ್ ಕೆಎಸ್‌ 2 ತಿಂಗಳಿನಿಂದ ನನ್ನ ಮನಸ್ಸೇ ಹತೋಟಿಗೆ ಬರುತಿಲ್ಲ, ಯಾರೋ ಒಬ್ಬರು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ವಾಟ್ಸಪ್‌ ಗ್ರೂಪಿನಲ್ಲಿ ಹಾಕಿದ ವಾಟ್ಸಪ್‌ ಮೆಸೇಜ್‌ಗೆ ಅಡ್ಮಿನ್‌ ಆದ ನಮ್ಮನ್ನು (ನನ್ನ ಅಡ್ಮಿನ್ ಮಾಡಿದ್ದು 5 ದಿನಗಳ ಹಿಂದೆ) ಹೊಣೆ ಮಾಡಿ ರಾಜಕೀಯ ಪ್ರೇರಿತ ಎಫ್‌ಐಆರ್‌ ಹಾಕಿ ಸಮಾಜಕ್ಕೆ ನಮ್ಮನ್ನು ಕಿಡಿಗೇಡಿಗಳು ಅಂತ ಪರಿಚಯಿಸಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನಾ ಅವರು ನನ್ನ ಸಾವಿಗೆ ನೇರ ಹೊಣೆ.

ನಮ್ಮ ಮೇಲೆ ಎಫ್‌ಐಆರ್‌ ಹಾಕಿ ಕಿಡಿಗೇಡಿಗಳು ಅಂತ ಇಡೀ ಕೊಡಗಿಗೆ ವೈರಲ್ ಮಾಡಿದ್ದು ಕೂಡಾ ಇವನೇ, ಅದು ಕೂಡಾ ನಮ್ಮ ಫೋಟೋ ಹಾಕಿ, ನಮ್ಮ ಫೋಟೋವನ್ನು ನಮ್ಮ ಅನುಮತಿ ಇಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಹೇಗೆ ಉಪಯೋಗಿಸುತ್ತಾರೆ? ಅದು ಕೂಡಾ ಆರೋಪ ಸಾಬೀತು ಆಗದೇ, ಅದನ್ನು ನೋಡಿದ ನಮ್ಮ ಮನೆಯವರು ಹಾಗೂ ಸಂಬಧಿಕರಿಗೆ ಹೇಗೆ ಅನ್ನಿಸಿರಬಹುದು ಅಂತ ನೀವೇ ಊಹಿಸಿಕೊಳ್ಳಿ.

ಎಫ್‌ಐಆರ್‌ ಆದ ದಿನದಿಂದ ಜಾಮೀನು ಸಿಗುವ ತನಕ ನಾನು ನನ್ನ ಅಮ್ಮನ ಜೊತೆ ಮಾತನಾಡಿಲ್ಲ. ಈ ತೆನ್ನೀರ ಮಹೀನಾ ಕಾರಣಕ್ಕಾಗಿ ಜೀವ ಕಳೆದುಕೊಳ್ಳುತಿರುವ ವ್ಯಕ್ತಿ ನಾನು ಮೊದಲಿಗನಲ್ಲ. ಅವರನ್ನೇ ಕೇಳಿ, ಅವರ ಮಡದಿ ಆಸ್ಪತ್ರೆಗೆ ಸೇರಿದ ದಿನವೇ ಇನ್ನೊಂದು ಆತ್ಮಹತ್ಯೆ ನಡೆಯಿತು. ಆ ಆತ್ಮಹತ್ಯೆಗೂ ತನ್ನೀರ ಮಹೀನಾ ಹಾಗೂ ಅವನ ಮಡದಿಗೆ ಏನು ಸಂಬಂಧ ಅಂತ. ಆ ಆತ್ಮಹತ್ಯೆಯ ತನಿಖೆ ಆಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಆ ಆತ್ಮಹತ್ಯೆ ಯ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕು.

BJP worker Vinay Somaiah commits suicide in Bengaluru

ಆ ಗ್ರೂಪಿನಲ್ಲಿ ಇರುವ ಯಾರನ್ನು ಬೇಕಾದರೂ ಕೇಳಿ. ನನ್ನ ಒಂದು ಮೆಸೇಜ್ ಕೂಡಾ ಯಾರ ತೇಜೋವಧೆ ಮಾಡುವ ಹಾಗೆ ಇರಲಿಲ್ಲ. ನಾವು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದಕ್ಕಾಗಿ ಕೆಲವು ರಾಜಕೀಯ ವಿರೋಧಿಗಳು ಷಡ್ಯಂತ್ರ ಮಾಡಿ ನನ್ನ ಮೇಲೆ ಎಫ್‌ಐಆರ್‌ ಹಾಕಿದರು. ನಂತರ ಜಾಮೀನು ಸಿಕ್ಕಿದ ನಂತರ ಕೂಡಾ ನನ್ನ ಕಸಿನ್‌ ಹಾಗೂ ಸ್ನೇಹಿತರಿಗೆ ಕರೆ ಮಾಡಿ ಅವರ ಮನೆಗೆ ಹೋಗಿ ನನ್ನ ಅರೆಸ್ಟ್ ಮಾಡಲು ಮಡಿಕೇರಿಯ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಶುಕ್ರವಾರ ಜಾಮೀನು ಸಿಕ್ಕಿದರೂ ಕೂಡಾ ಶನಿವಾರ ನನ್ನ ಸ್ನೇಹಿತನ ಮನೆಗೆ ಹೋಗಿ ನನ್ನ ಬಗ್ಗೆ ವಿಚಾರಿಸುವ ಅವಶ್ಯಕತೆ ಏನಿತ್ತು? ಇದೆಲ್ಲಾ ವಿರಾಜಪೇಟೆಯ ಶಾಸಕ ಪೊನ್ನಣ್ಣನ ಆದೇಶ ಅಂತ ಸ್ವಂತ ಮಡಿಕೇರಿಯ ಒಬ್ಬ ಪೊಲೀಸ್ ಪೇದೆ ಹೇಳಿದರು.

ನಂತರ ನನ್ನ ಸ್ನೇಹಿತನಿಗೆ ಪೊನ್ನಣ್ಣ ವಿನಯ್ ಅನ್ನೋ ಒಬ್ಬ ಕಾಲ್‌ ಮಾಡಿದ್ದ ನನಗೆ ಹಾಗೂ ಕೊಡವ ಹಾಗೂ ಗೌಡ ನಡುವೆ ಗಲಾಟೆ ಬಗ್ಗೆ ನನ್ನ ಜೊತೆ ಮಾತಾಡಿದ್ದು ಅಂತ ಸುಳ್ಳು ಆರೋಪ ಮಾಡಿದ್ದಾರೆ. ನಾನು ಕಾಲ್‌ ಮಾಡಿದ್ದೇ ಆದಲ್ಲಿ ಕಾಲ್‌ ರೆಕಾರ್ಡ್ ತೋರಿಸಲಿ. ಇದನ್ನೂ ಓದಿ: ತಿಂಗಳಲ್ಲಿ 70 ಸಲ ನನ್ನ ಲೊಕೇಶನ್‌ ತೆಗೆಸುತ್ತಾರೆ: ಎಸ್‌ಪಿ ಮುಂದೆ ರಾಯಚೂರು ಬಿಜೆಪಿ ಶಾಸಕ ಅಳಲು

ನಾನು ಮೆಸೇಜ್ ಮಾಡಿದ್ದು ನಿಜ, ಅದು ಕೂಡಾ ಯಾರೋ ಕಳಿಸಿದ ಆಕ್ಷೇಪಾರ್ಹ ವಾಯ್ಸ್‌ ಮೆಸೇಜ್ ಅವರಿಗೆ ಕಳಿಸಿ, ಅವರಿಗೆ ವಿಷಯ ತಿಳಿಸಿದ್ದು, ಅದರ ಸ್ಕ್ರೀನ್‌ ಶಾಟ್‌ ಕೂಡಾ ಕಳುಹಿಸಿದ್ದೇನೆ. ಆದರೆ ಅದರ ಬಗ್ಗೆ ಎಫ್‌ಐಆರ್‌ ಮಾಡದೇ ಯಾರೋ ಹಾಕಿದ ಫೋಟೋಗೆ ನಮ್ಮ ಮೇಲೆ ಎಫ್‌ಐಆರ್‌ ಹಾಕಿದ್ದು ಯಾವ ನ್ಯಾಯ?

ನಾನು ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಬಗ್ಗೆ ಗ್ರೂಪಿನಲ್ಲಿ ಕೇಳಿದ್ದಕ್ಕೆ ಮಡಿಕೇರಿಯ ಶಾಸಕ ಮಂಥರ್ ಗೌಡ ನನಗೆ ಕಾಲ್‌ ಮಾಡಿ ಹಾಗೆಲ್ಲ ಗ್ರೂಪಿನಲ್ಲಿ ಯಾಕೆ ಮೆಸೇಜ್ ಹಾಕ್ತಿಯ ಅಂತ ಅವರೇ ನಂಗೆ ಗದರಿದ್ದಾರೆ. ಏನಿದ್ರೂ ನನಗೆ ಹೇಳು, ಗ್ರೂಪ್‌ನಲ್ಲಿ ಹಾಕಿದ್ರೆ ಸರಿ ಇರಲ್ಲಾ ಅಂತ ನನಗೆ ಹೇಳಿದ್ದಾರೆ. ಪೂರಕ ಸಾಕ್ಷಿ ವಾಟ್ಸಪ್‌ ಕಾಲ್‌, ರಿಜಿಸ್ಟರ್‌ ಸ್ಕ್ರೀನ್‌ಶಾಟ್‌ ಕಳುಹಿಸಿದ್ದೇನೆ. ಅದರಲ್ಲಿ ನೀವೇ ನೋಡಿ ನಾನು ಅವರಿಗೆ ಕಾಲ್‌ ಮಾಡಿದ್ದಾ ಅಥವಾ ಅವರು ನನಗೆ ಕಾಲ್‌ ಮಾಡಿದ್ದಾ ಅಂತ. ಬೇಕಾದರೆ ಅವರ ವಾಟ್ಸಪ್‌ ಕಾಲ್‌ ಚೆಕ್ ಮಾಡಿ.

ಅದಲ್ಲದೇ ಹರೀಶ್ ಪೂವಯ್ಯ ಇವನು ಮಾರ್ಚ್ 11 ಕ್ಕೆ ಪೆರ್ಮೆರ ಕೊಡವ ಹಾಗೂ ನಂಗ ಕೊಡಗ್ ರ ಕೊಡವ ಮಕ್ಕ ಗ್ರೂಪಿನಲ್ಲಿ ಪುನಃ ಪುನಃ ನಮ್ಮ ಫೋಟೋ ಹಾಕಿ ಕಿಡಿಗೇಡಿಗಳು ಅಂತ ನಮ್ಮ ತೇಜೋವಧೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ತೆನ್ನೀರ ಮಹೀನಾ. ಅವನು ಬರೆದ ಆರ್ಟಿಕಲ್‌ ಅನ್ನು ಕೆಲವು ರಾಜಕೀಯ ಪ್ರೇರಿತ ಜನರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ನಮ್ಮ ತೇಜೋವಧೆ ಮಾಡುತ್ತಿದ್ದಾರೆ. ಅದು ಕೂಡಾ ಜಾಮೀನು ಆಗಿ ಎಫ್‌ಐಆರ್‌ ಮೇಲೆಯೇ ಮಾನ್ಯ ಹೈಕೋರ್ಟ್‌ನಿಂದ ತಡೆ ಬಂದ ಮೇಲೆ ಕೂಡಾ ಇವರು ನಮ್ಮನ್ನು ಕಿಡಿಗೇಡಿಗಳು ಅಂತ ಕರೆಯೋದು ಎಷ್ಟು ಸರಿ? ಕೆಲವು ಮೂಲಗಳಿಂದ ತಿಳಿದ ವಿಷಯ ಏನೆಂದರೆ, ನಮ್ಮ ಮೇಲೆ ರೌಡಿ ಶೀಟರ್ ಓಪನ್‌ ಮಾಡುವ ಹುನ್ನಾರ ಕೂಡಾ ನಡೆದಿದೆ. ಇವರಿಗೆಲ್ಲಾ ಸರಿಯಾದ ಶಿಕ್ಷೆ ಆಗಬೇಕು. ಆಗಲೇ ನನ್ನ ಸಾವಿಗೆ ನ್ಯಾಯ ದೊರಕುವುದು.

Madikeri party member vinay somaiah commits suicide at BJP office in Nagawara Bengaluru 1

ಕರ್ನಾಟಕ ಬಿಜೆಪಿ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಲ್ಲಿ ನನ್ನ ಒಂದು ಬೇಡಿಕೆ. ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ನನ್ನ ಕುಟುಂಬಕ್ಕೆ ನಿಮ್ಮ ಕೈಲಾದಷ್ಟು ಸಾಮಾಜಿಕವಾಗಿ, ಹಾಗೂ ಆರ್ಥಿಕವಾಗಿ (ಪ್ರತೀ ಒಬ್ಬರು ಒಂದು ರೂಪಾಯಿ ಕೊಟ್ಟರೂ ಅದು ನನ್ನ ಮಡದಿಯ ಹಾಗೂ ಮಗಳ ಭವಿಷ್ಯಕ್ಕೆ ಸಹಾಯವಾಗುತ್ತೆ) ಸಹಾಯ ಮಾಡಿ ನನ್ನ ತಾಯಿ, ಮಡದಿ, ಮಗಳು ಹಾಗೂ ನಮ್ಮ ಕುಟುಂಬಕ್ಕೆ ನನ್ನ ಸಾವಿನ ಸಮಯದಲ್ಲಿ ಟರ್ಚರ್‌ ಕೊಡದೇ ಎಲ್ಲಾ ಕಾರ್ಯ ಸುಸೂತ್ರವಾಗಿ ನಡೆಯಲು ಸಹಾಯ ಮಾಡಿ.

ಇದು ನನ್ನ ಕಳಕಳಿಯ ವಿನಂತಿ. ಯಾರೂ ಕೂಡಾ ನನ್ನ ಸಾವಿಗೆ ರಜೆ ಹಾಕಿ ದೂರದೂರಿಂದ ಬರುವ ಅವಶ್ಯಕತೆ ಇಲ್ಲ. ನೀವೆಲ್ಲಿದ್ದೀರೋ ಅಲ್ಲಿಂದಲೇ ನಮ್ಮ ಕುಟುಂಬಕ್ಕೆ ಆಶೀರ್ವದಿಸಿ. ಚಲನ್ ಅಣ್ಣ, ವಿಷ್ಣು ಅಣ್ಣ, ಹಾಗೂ ಸಚಿನ್ ಅಣ್ಣ ನನ್ನ ಮನೆಯವರೊಂದಿಗೆ ನಿಂತು ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಿಕೊಡಿ. ನನ್ನ ಮೇಲೆ ಎಫ್‌ಐಆರ್‌ ಹಾಕಿದಾಗ ನನ್ನ ಬೆಂಬಲಕ್ಕೆ ನಿಂತ ಪ್ರತಾಪ್ ಸಿಂಹ, ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್, ಚಲನ್, ಸಚಿನ್, ರಾಕೇಶ್ ದೇವಯ್ಯ, ಅಡ್ವೋಕೇಟ್ ನಿಶಾಂತ್, ಅಡ್ವೋಕೇಟ್ ಮೋಹನ್, ಎಲ್ಲರಿಗೂ ಅನಂತ ಅನಂತ ಧನ್ಯವಾದಗಳು.

ನನ್ನ ಸಾವು ಮುಂದೆ ಆಗುವ ರಾಜಕೀಯ ಪ್ರೇರಿತ ಎಫ್‌ಐಆರ್‌ ಒಂದು ಪಾಠವಾಗಬೇಕು ಹಾಗೂ ಪೊಲೀಸ್ ನವರು ಸ್ವಲ್ಪ ವಿಚಾರ ಮಾಡಿ ಎಫ್‌ಐಆರ್‌ ಹಾಕಬೇಕು. ಯಾರೋ ಒಬ್ಬರು ದೂರು ದಾಖಲಿಸಿದರು ಅಂತ ಸುಖಾ ಸುಮ್ಮನೆ ಎಫ್‌ಐಆರ್‌ ಹಾಕುವುದು ಎಷ್ಟು ಸರಿ?

ಈ ಮೆಸೇಜ್ ಅನ್ನು ಎಲ್ಲಾ ಸಾಮಾಜಿಕ ಜಾಲತಣದಲ್ಲಿ ಹಾಕಿ. ಇದರಿಂದಾಗಿ ಅಮಾಯಕರ ಮೇಲೆ ರಾಜಕೀಯ ಪ್ರೇರಿತ ಎಫ್‌ಐಆರ್‌ ಹಾಕುವುದು ಕೊನೆಗೊಳ್ಳಲಿ. ನಾನು ನಮ್ಮ ಮನೆಯವರಿಗೆ ಏನೂ ಬರೆಯುತಿಲ್ಲ, ಯಾಕೆಂದರೆ ನನಗೆ ಅವರಿಗೆ ಏನು ಹೇಳುವುದೆಂದು ತಿಳಿಯುತಿಲ್ಲ.

ಎಲ್ಲರೂ ಯೋಚಿಸಬಹುದು ಘಟನೆ ಆಗಿ ಇಷ್ಟು ದಿನ ಆದ ಮೇಲೆ ಇವನಿಗೆ ಏನಾಯಿತು ಅಂತ, ನಾನು ಒಮ್ಮೆ ನನ್ನ ಮನೆಗೆ ಹೋಗಿ ಬರೋದನ್ನ ಕಾಯುತಿದ್ದೆ. ನನ್ನ ಮನೆಗೆ ಹೋಗಿ ಎಲ್ಲಾ ಕುಟುಂಬದವರ ಜೊತೆ ಕಳೆದ ಒಳ್ಳೆಯ ಸಮಯದ ನೆನಪಿನಲ್ಲಿ ನಾನು ವಿದಾಯ ಹೇಳುತಿದ್ದೇನೆ. ಸಾಧ್ಯವಾದರೆ ಎಲ್ಲರೂ ನನ್ನನ್ನು ಕ್ಷಮಿಸಿಬಿಡಿ.

ನಿಮ್ಮೆಲ್ಲರ ಆಶೀರ್ವಾದದೊಂದಿಗೆ ಹೋಗುತಿದ್ದೇನೆ. ಇಂತಿ ನಿಮ್ಮ ವಿನಯ್‌ ಕೆಎಸ್‌

Share This Article
Facebook Whatsapp Whatsapp Telegram
Previous Article Chikkamagaluru Boycott 1 ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!
Next Article London To Mumbai flight ಲಂಡನ್‌ನಿಂದ ಮುಂಬೈಗೆ ಹೊರಟಿದ್ದ 250 ಪ್ರಯಾಣಿಕರಿದ್ದ ವಿಮಾನ ಟರ್ಕಿಯಲ್ಲಿ ಲಾಕ್‌

Latest Cinema News

S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories
vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood

You Might Also Like

ISIS Terrorists
Crime

ಬಲಪಂಥೀಯ ನಾಯಕರೇ ಟಾರ್ಗೆಟ್‌ – ಆತ್ಮಹತ್ಯಾ ಬಾಂಬರ್‌ಗಳನ್ನ ಸಿದ್ಧಪಡಿಸಿದ್ದ ಐಸಿಸ್‌ ಉಗ್ರರ ಗ್ಯಾಂಗ್‌

22 minutes ago
Dr Rajkumar Road
Bengaluru City

ಬೆಂಗಳೂರು | ವೈಟ್ ಟಾಪಿಂಗ್ ಕಾಮಗಾರಿ – 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್

34 minutes ago
GST
Bengaluru City

ಕಾಗದ ಉತ್ಪನ್ನಗಳ GST ದರ ಗೊಂದಲ – ವಿದ್ಯಾರ್ಥಿಗಳ ನೋಟ್‌ಬುಕ್ ಬೆಲೆ ಏರಿಕೆ ಆತಂಕ!

57 minutes ago
CP Radhakrishan 1
Latest

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

2 hours ago
Mysuru Murder
Crime

ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ – ತಿಪ್ಪೆ ಗುಂಡಿಯಲ್ಲಿ ಗಂಡನ ಶವ ಪತ್ತೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?