Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
Last updated: February 19, 2026 7:27 pm
Public TV
Share
3 Min Read
BY Vijayendra
SHARE

ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮಪಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ (ಫೆ.19) ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ, ದಲಿತರ ಹತ್ಯೆ ಆಗುತ್ತಿದೆ ಎಂದು ಸುರತ್ಕಲ್, ಯಲ್ಲಾಪುರದಲ್ಲಿ ಆದ ಹತ್ಯೆಯನ್ನು ಉಲ್ಲೇಖಿಸಿದರು. ಯಲ್ಲಾಪುರದ ದಲಿತ ಮಹಿಳೆ ಹತ್ಯೆ, ಕೊಪ್ಪಳದಲ್ಲಿ ದಲಿತ ವ್ಯಕ್ತಿಯ ಹತ್ಯೆ ಆದರೂ ಪರಿಹಾರ ನೀಡಿಲ್ಲ. ಈ ಸರ್ಕಾರ ಬಂದ ಬಳಿಕ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಸೂರು ಮಾದಕವಸ್ತುಗಳಿಗೆ ಉಗಮ ಸ್ಥಾನವಾಗಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುವ ವ್ಯಕ್ತಿಯ ಕುಟುಂಬದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

ರಾಜ್ಯ ಸರ್ಕಾರದ ಚಳಿ ಬಿಡಿಸುವ ಕೆಲಸ:
ರಾಜ್ಯ ಸರ್ಕಾರದ ಚಳಿ ಬಿಡಿಸುವ ಕೆಲಸವನ್ನು ವಿಪಕ್ಷವಾದ ಬಿಜೆಪಿ ರಾಜ್ಯ ಘಟಕ ಮಾಡುತ್ತಲೇ ಬಂದಿದೆ. ಕಾರ್ಯಕರ್ತರ ಚುನಾವಣೆ ಮುಂದೆ ಬರಲಿದೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಜಿಬಿಎ ಚುನಾವಣೆಯೂ ಬರಲಿದೆ. ಈ ನಡುವೆ ವಿಧಾನಸಭೆಯ ಎರಡು ಉಪಚುನಾವಣೆಗಳು ಬರಲಿದೆ. ಬಾಗೇಪಲ್ಲಿ ಉಪಚುನಾವಣೆಯೂ ಇದ್ದು, ಸರಣಿ ಚುನಾವಣೆಗಳು ಮುಂದಿನ ಆರೇಳು ತಿಂಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹಿರಿಯ ನಾಯಕರು, ಕೇಂದ್ರ ಸಚಿವರಾದ ಶ್ರೀ @gssjodhpur , ಜನನಾಯಕರು, ರೈತ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಸನ್ಮಾನ್ಯ ಶ್ರೀ @BSYBJP ಅವರು, ಕೇಂದ್ರ ಸಚಿವರಾದ ಶ್ರೀ @JoshiPralhad , ರಾಜ್ಯ ಉಸ್ತುವಾರಿ ಶ್ರೀ… pic.twitter.com/LrFDBDfhxI

— Vijayendra Yediyurappa (@BYVijayendra) February 19, 2026

ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ಬರಲಿ:
2028ರ ಚುನಾವಣೆಗೆ ಬಹಳ ದೂರ ಇಲ್ಲ. ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ನಾವು ಹಗಲು-ರಾತ್ರಿ ಶ್ರಮ ಹಾಕಬೇಕೆಂದು ವಿನಂತಿಸಿದರು. ಕರ್ನಾಟಕವು ದಕ್ಷಿಣ ಭಾರತದ ಹೆಬ್ಬಾಗಿಲು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ತರಬೇಕು. ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯರ ಸರ್ಕಾರವು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಎಲ್ಲ ಹಿಂದುಳಿದ ಸಮುದಾಯಗಳನ್ನು, ಪರಿಶಿಷ್ಟ ಜಾತಿ, ಪಂಗಡಗಳ ಏಳಿಗೆಯನ್ನು ಸಂಪೂರ್ಣವಾಗಿ ಮರೆತಿದೆ ಎಂದು ಟೀಕಿಸಿದ್ದಾರೆ.ಇದನ್ನೂ ಓದಿ: ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

ನರೇಂದ್ರ ಮೋದಿಜೀ ಅವರ ಸಮರ್ಥ ನಾಯಕತ್ವ:
ಬಿಜೆಪಿ ಜಗತ್ತಿನಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ನಾಯಕತ್ವ ಹೊಂದಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ವಿಶ್ವಗುರುವಾಗುವ ಸಂಕಲ್ಪದೊಂದಿಗೆ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ. ಸ್ವರಾಜ್ಯದ ಕನಸು ಬಿತ್ತಿದ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನೂ ಇವತ್ತು ಆಚರಿಸಲಾಗುತ್ತಿದೆ. ಇಂಥ ದೊಡ್ಡ ಪಕ್ಷದ ನೇತೃತ್ವವನ್ನು ಯುವಕ ನಿತಿನ್ ನಬೀನ್ ಜೀ ಅವರಿಗೆ ನೀಡಿದ್ದು, ಯುವಶಕ್ತಿಗೆ ಹೆಮ್ಮೆಯ ವಿಚಾರ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2047ನೇ ಇಸವಿಗೆ ವಿಕಸಿತ ಭಾರತ ಸಂಕಲ್ಪಕ್ಕೆ ಪೂರಕ ಎಂದಿದ್ದಾರೆ.

ಭಾರತವನ್ನು ಯುಪಿಎ ಸರ್ಕಾರ ಇದ್ದಾಗ ಆರ್ಥಿಕವಾಗಿ ಗುರುತಿಸುತ್ತಿರಲಿಲ್ಲ. ಅಂಥ ಭಾರತವು ಇದೀಗ ಜಗತ್ತಿನ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮೋದಿಜೀ ಅವರ ದಿಟ್ಟ ನಾಯಕತ್ವ ಕಾರಣ. ವಿದೇಶಾಂಗ ನೀತಿ, ರಾಜತಾಂತ್ರಿಕ ನಡೆಯ ಪರಿಣಾಮವಾಗಿ ಯುರೋಪ್ ಒಕ್ಕೂಟವು ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ ಕೂಡ ಭಾರತದ ಜೊತೆಗಿನ ಸಂಬಂಧ ಉತ್ತಮಪಡಿಸಲು ತೆರಿಗೆ ಪ್ರಮಾಣವನ್ನು ಇಳಿಸಿದೆ. ಮೋದಿಜೀ ಅವರಿಗೆ 25ಕ್ಕೂ ಹೆಚ್ಚು ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ. ಇದು ಮೋದಿಜೀ ಅವರ ನಾಯಕತ್ವಕ್ಕೆ ಸಿಕ್ಕಿದ ಗೌರವ ಎಂದು ತಿಳಿಸಿದ್ದಾರೆ.

ದೇಶದ ಚುನಾವಣಾ ಆಯೋಗವು ಎಸ್‌ಐಆರ್ (ವಿಶೇಷ ಮತಪಟ್ಟಿ ಪರಿಷ್ಕರಣೆ) ಮಾಡುತ್ತಿದೆ. ರಾಜ್ಯದಲ್ಲೂ ಬರಲಿರುವ ಎಸ್‌ಐಆರ್ ಸಂಬಂಧ ಜಾಗ್ರತೆವಹಿಸಲು ಸಲಹೆ ನೀಡಿದರು. ವಿಬಿ ಜಿ ರಾಮ್ ಜಿ ಮೂಲಕ ಭ್ರಷ್ಟಾಚಾರ ತೊಡೆದುಹಾಕಲು ಬಡವರಿಗೆ ಅನುಕೂಲ ತರಲು ಸರ್ಕಾರ ಮುಂದಾಗಿದೆ. ಆದರೆ, ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡುತ್ತಿದೆ ಹಾಗೂ ಹಳೆಯ ಚಾಳಿಯನ್ನು ಮುಂದುವರೆಸಿದೆ. ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು, ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜಯಭೇರಿಯು ಇಡೀ ದೇಶದ ಕಾರ್ಯಕರ್ತರು ಸಂಭ್ರಮಿಸಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ: ಗದಗದಲ್ಲಿ ಮತ್ತೆ ಕಿಡಿಗೇಡಿಗಳಿಂದ ಶಿವಲಿಂಗ, ಪಾಣಿಪೀಠ ಭಗ್ನ

TAGGED:bjpBY Vijayendracongresskarnatakaಕರ್ನಾಟಕಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

Ranji Trophy 2025 26 draw against Uttarakhand Karnataka to face Jammu and Kashmir final in Hubballi
Cricket

11 ವರ್ಷದ ಬಳಿಕ ರಣಜಿ ಫೈನಲ್‌ಗೆ ಕರ್ನಾಟಕ – ಹುಬ್ಬಳ್ಳಿಯಲ್ಲಿ ಪಂದ್ಯ

Public TV
By Public TV
16 minutes ago
Al Mirath Real Estates Dubai 2
Latest

Al Mirath Real Estates Dubai – ವಾರ್ಷಿಕೋತ್ಸವ ಆಚರಣೆ

Public TV
By Public TV
42 minutes ago
CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
1 hour ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
1 hour ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
1 hour ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?