Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ದಕ್ಷಿಣ್ ಮೂಲಕ ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ: HDK
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ದಕ್ಷಿಣ್ ಮೂಲಕ ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ: HDK

Bengaluru City

ಆಪರೇಷನ್ ದಕ್ಷಿಣ್ ಮೂಲಕ ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ: HDK

Public TV
Last updated: July 4, 2022 6:15 pm
Public TV
Share
3 Min Read
KUMARASWAMY
SHARE

ಬೆಂಗಳೂರು: ಆಪರೇಷನ್ ದಕ್ಷಿಣ್ ಎಂಬ ಸ್ಲೋಗನ್ ಮೂಲಕ ಬಿಜೆಪಿ ಪಕ್ಷವು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ಮೂಲೋತ್ಪಾಟನೆ ಮಾಡಿ, ಪ್ರತಿಪಕ್ಷ ಮತ್ತು ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹೈದರಾಬಾದ್ ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಆಪರೇಷನ್ ದಕ್ಷಿಣ್ ಹೆಸರಿನಲ್ಲಿ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಬಿಜೆಪಿ ಆಕ್ರಮಣಶೀಲತೆಯನ್ನು ಮಾಜಿ ಸಿಎಂ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜೆಡಿಎಸ್ ಬಗ್ಗೆ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೇಲೆ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

CT RAVI 4

ಜೆಡಿಎಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವೆಂಬ ಸಿ.ಟಿ.ರವಿ ಅವರ ಹೇಳಿಕೆಗೆ ಸಿಡಿಮಿಡಿಗೊಂಡ ಹೆಚ್‌ಡಿಕೆ, ರವಿ ಅವರೇ, ಆಂತರಿಕ ಪ್ರಜಾಪ್ರಭುತ್ವ ಎಂದರೆ ನರೇಂದ್ರ ಮೋದಿ ಮುಂದೆ ಸತ್ತಸೊಂಟದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಜೀ-ಜೀ ಎನ್ನುತ್ತಾ ಜೀ ಹುಜೂರ್ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ‍್ಯ ಕೊಟ್ಟಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎಲ್ಲ ಆರೋಪಿಗಳಿಗೆ ನಮ್ಮ ಮಗನ ರೀತಿಯಲ್ಲಿಯೇ ಶಿಕ್ಷೆ ಕೊಡುತ್ತೇನೆ: ಹರ್ಷನ ತಾಯಿ

ಆಪರೇಷನ್ ದಕ್ಷಿಣ್ ಬಗ್ಗೆ ಕಿಡಿಕಾರಿರುವ ಅವರು, ಇದು ಬಿಜೆಪಿಯ ಹೊಸ ಸ್ಲೋಗನ್. ಹೈದರಾಬಾದ್ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾವನಾನ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು, ಜನರ ಮನಸ್ಸುಗಳನ್ನು ಒಡೆದು ರಾವಣ ರಾಜಕೀಯದ ವಿನಾಶಕಾರಿ ದಾರಿಗೆ ಹಿಡನ್ ಅಜೆಂಡಾ ಸಿದ್ಧ ಮಾಡಲಾಯಿತಾ? ಹೇಳಿ ಮಾನ್ಯ ಸಿ.ಟಿ.ರವಿ ಯವರೇ? ಎಂದು ವ್ಯಂಗ್ಯವಾಡಿದ್ದಾರೆ.

BJP JDS CON

ನೆಮ್ಮದಿಯ ಸಮಾಜಕ್ಕೆ ಕೋಮುವಿಷ ಪ್ರಾಶಣ ಮಾಡುವ ಇಂಜೆಕ್ಷನ್. ಧರ್ಮ, ದೇವರು, ಜಾತಿ, ಭಾಷೆ, ಆಚಾರ, ಆಹಾರ, ವ್ಯಾಪಾರಗಳನ್ನು ಎಳೆತಂದು, ಅಸಹಿಷ್ಣುತೆ ಸೃಷ್ಟಿಸಿ ಭಾರತವನ್ನು ಧರ್ಮದ ಆಧಾರದಲ್ಲಿ ಒಡೆದು ಹಾಕುವುದಾ? ಕರ್ನಾಟಕದ ನಂತರ ನಿಮ್ಮ ಮುಂದಿನ ಗುರಿ ದಕ್ಷಿಣ ಭಾರತ. ಹೌದಲ್ಲವೇ ಸಿ.ಟಿ.ರವಿಯವರೇ? ಎಂದು ಕುಟುಕಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಫೇಕ್ ವೀಡಿಯೋ ವೈರಲ್ – ಬಿಜೆಪಿ ಶಾಸಕರ ವಿರುದ್ಧ ಎಫ್‍ಐಆರ್

ಆಪರೇಷನ್ ದಕ್ಷಿಣ್ ಅಂದರೆ, ಆಪರೇಷನ್ ಕಮಲದ ರಾಷ್ಟ್ರೀಕರಣ ಮತ್ತು ತುಷ್ಠೀಕರಣ. ಶಾಸಕರ ಖರೀದಿ, ಕುದುರೆ ವ್ಯಾಪಾರ, ಕರ್ನಾಟಕದ ನಂತರ ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೂ ವಿಸ್ತರಿಸುವ ಡೋಂಗಿ ರಾಷ್ಟ್ರಪ್ರೇಮಿಗಳ ರಾಜಕಾರಣ. ದಕ್ಷಿಣದ ಮೇಲೆ ಆಪರೇಷನ್ ಕಮಲದ ದುರಾಕ್ರಮಣ ಹೌದಲ್ಲವೇ ಸಿ.ಟಿ.ರವಿಯವರೇ? ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

HDK

ಆಪರೇಷನ್ ಕಮಲಕ್ಕೆ ಬ್ರ‍್ಯಾಂಡ್ ಅಂಬಾಸಿಡರ್ ಒಬ್ಬರು ಬೇಕಲ್ಲವೇ? ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರನ್ನೇ ಬ್ರ‍್ಯಾಂಡ್ ರಾಯಭಾರಿ ಮಾಡುತ್ತೀರಾ? ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಇದೂ ಚರ್ಚೆಗೆ ಬಂತಾ? ಮೋದಿ ಸಾಹೇಬರು ಒಪ್ಪಿದರಾ? ಎಷ್ಟಾದರೂ ನಿಮ್ಮ ಅಮಿತೋತ್ಸಾಹಕ್ಕೆ ಆಪರೇಷನ್ ಕಮಲವೇ ಕಾರಣ ಅಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ: ಸಿಎಂ

ಆಪರೇಷನ್ ದಕ್ಷಿಣ್ ಅಂದರೆ, ಬಿಜೆಪಿ ಪರಿವಾರ ರಾಜಕಾರಣವನ್ನು ಮತ್ತಷ್ಟು ಬಲಪಡಿಸುವುದಾ? ಆಗ ಕಾಂಗ್ರೆಸ್ ಮುಕ್ತ ಭಾರತ ಈಗ ಪರಿವಾರಮುಕ್ತ ಭಾರತ ನಂತರ ಪ್ರತಿಪಕ್ಷ ಮುಕ್ತ ಭಾರತ ಮುಂದೆ ಸಂಪೂರ್ಣ ಪ್ರಜಾಪ್ರಭುತ್ವ ಮುಕ್ತ ಭಾರತ್ ನಿರ್ಮಾಣ ಇದಲ್ಲವೇ ನಿಮ್ಮ ಬಿಜೆಪಿಯ ಭವ್ಯಗುರಿ? ಉತ್ತರಿಸಿ ಎಂದು ಕುಮಾರಸ್ವಾಮಿ ಕಾಲೆಳೆದಿದ್ದಾರೆ.

amith shah hdk

ದಕ್ಷಿಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಶಕ್ತಿ. ಇಲ್ಲಿ ಹೆಜ್ಜೆ ಇಡಲು ಬಿಜೆಪಿಗೆ ಆಗುತ್ತಿಲ್ಲ. ಆಪರೇಷನ್ ಕಮಲದಿಂದ ಕರ್ನಾಟಕದಲ್ಲಿ ಅಧಿಕಾರ ಹಿಡಿದಿರಿ. ಒಡಿಶಾ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳದಲ್ಲಿ ನಿಮ್ಮ ಬೇಳೆ ಬೇಯಲಿಲ್ಲ. ಅದಕ್ಕೀಗ `ಪರಿವಾರ ಮುಕ್ತ ರಾಜಕೀಯ’ ಎಂದು ರಾಗ ತೆಗೆಯುತ್ತಿದ್ದೀರಿ. ಸತ್ಯ ಹೇಳಿ ಸಿ.ಟಿ.ರವಿಯವರೇ ಎಂದು ಕಿಡಿಕಾರಿದ್ದಾರೆ.

ಪ್ರಾದೇಶಿಕ ಪಕ್ಷಗಳನ್ನು ಎದುರಿಸಲಾಗದ ಬಿಜೆಪಿ, ಈಗ ಪರಿವಾರ ಜಪ ಮಾಡುತ್ತಿದೆ. ಅಯ್ಯೋ ಪಾಪ ಮಹಾರಾಷ್ಟçದಲ್ಲಿ ಆಪರೇಷನ್ ಕಮಲ ಮಾಡಿ ನೀವು ಮುಖ್ಯಮಂತ್ರಿ ಮಾಡಿದ ಏಕನಾಥ್ ಶಿಂಧೆ ಅವರ `ಏಕಪರಿವಾರ ಪಾಲಿಟಿಕ್ಸ್’ ಗೊತ್ತಿರಲಿಲ್ಲವೇ? ಬೋಧನೆ ಒಂದು ಬೋಜನ ಇನ್ನೊಂದು ಛೇ, ಹೇಸಿಗೆ. ಯಡಿಯೂರಪ್ಪ ಮತ್ತು ಸನ್ಸ್, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ಸೋಮಣ್ಣ-ಅರುಣ್ ಸೋಮಣ್ಣ, ಲಿಂಬಾಳಿ-ರಘು, ವಿಶ್ವನಾಥ್-ವಾಣಿ ವಿಶ್ವನಾಥ್, ಶೆಟ್ಟರ್-ಪ್ರದೀಪ್ ಶೆಟ್ಟರ್, ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ ಮತ್ತು ಜಾರಕಿಹೊಳಿ, ಕತ್ತಿ, ಅಂಗಡಿ, ಉದಾಸಿ ಕುಟುಂಬಗಳು.. ಇದೆಲ್ಲಾ ಏನು? ಎಂದು ಅವರು ಕೇಳಿದ್ದಾರೆ.

ಪರಿವಾರ ರಾಜಕಾರಣಕ್ಕೆ ಬಿಜೆಪಿ ಅತೀತವಲ್ಲ. ರಾಜ್ಯದ ಲೆಕ್ಕ ಕೊಟ್ಟಿದ್ದೇನೆ. ಭಾರತದ ಪಟ್ಟಿ ಕೊಡಲೇ? ಅಬ್ಬರ ಜಾಸ್ತಿ, ಅಭಿವೃದ್ಧಿ ನಾಸ್ತಿ. ಇದು ಬಿಜೆಪಿ ನೀತಿ. ಬಿಜೆಪಿ ಪಕ್ಷದ್ದು ಆಪರೇಷನ್ ದಕ್ಷಿಣ್ ಅಲ್ಲ, ಆ ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್ ಆಗುವ ಕಾಲ ಹತ್ತಿರದಲ್ಲೇ ಇದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongressCT Ravihd kumaraswamyjdsOpration kamalaಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಬಿಜೆಪಿಸಿ.ಟಿ ರವಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

Ballari 1
Bellary

Video | ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ

Public TV
By Public TV
27 minutes ago
Madikeri
Districts

Kodagu | ಕಾವೇರಿ ನದಿ ತಟದಲ್ಲಿರೋ ನಿವಾಸಿಗಳ ಬದುಕು ಇಂದಿಗೂ ಅತಂತ್ರ

Public TV
By Public TV
45 minutes ago
Park
Bengaluru City

ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
1 hour ago
elon musk and x
Latest

ಅಶ್ಲೀಲ ವಿಚಾರ ಪೋಸ್ಟ್‌ಗಳಿಗೆ ವೇದಿಕೆ – ಎಕ್ಸ್‌ಗೆ ಕೇಂದ್ರದಿಂದ ನೋಟಿಸ್‌

Public TV
By Public TV
1 hour ago
Siddaramaiah 10
Bengaluru City

ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Public TV
By Public TV
2 hours ago
Siddaramaiah
Latest

Ballari Clash | ಘಟನಾ ಸ್ಥಳದಲ್ಲಿ ಇರದಿದ್ದಕ್ಕೆ ಎಸ್ಪಿ ಸಸ್ಪೆಂಡ್‌ ಮಾಡಿದ್ದೇನೆ – ಸಿಎಂ ಸಮರ್ಥನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?