Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಮೀರ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ: ವಿಜಯೇಂದ್ರ ಕಿಡಿ

Public TV
Last updated: October 29, 2024 1:05 pm
Public TV
Share
3 Min Read
BY Vijayendra 1
SHARE

– ರಾತ್ರೋರಾತ್ರಿ ರೈತರ ಜಮೀನು ವಕ್ಫ್ ಆಸ್ತಿಯಾಗಿ ಘೋಷಣೆ
– ರೈತರು ಬೀದಿಗೆ ಬಂದರೆ ಏನು ಮಾಡಬೇಕು?

ಬೆಂಗಳೂರು: ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು (Farmers) ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.

ಈ ರೀತಿ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬರುತ್ತಿದೆ. ಅದೇ ನಿಟ್ಟಿನಲ್ಲಿ ಜಮೀರ್ ಅಹ್ಮದ್ (Zameer Ahmed) ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ಈಗ ವಕ್ಫ್‌ ಆಸ್ತಿ!

 

ನಿನ್ನೆ ಸಚಿವರು 120 ಜನ ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ ಬಿಜೆಪಿ ಹೊಣೆಗಾರನೇ? ಅದಕ್ಕೆ ಬಿಜೆಪಿ ಕಾರಣವೇ ಎಂದು ಕೇಳಿದರು. ಇದನ್ನು ಬಿಜೆಪಿ ಗಟ್ಟಿಯಾಗಿ ತೆಗೆದುಕೊಳ್ಳದೆ ಇದ್ದರೆ ರಾಜ್ಯ ಸರ್ಕಾರದ ಕ್ರಮದಿಂದ ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ರೈತರು ಬೀದಿಗೆ ಬರಬೇಕಾಗುತ್ತಿತ್ತು ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಮತ್ತು ಹಿರಿಯರಾದ ಗೋವಿಂದ ಕಾರಜೋಳ (Govind Karjol) ಅವರ ನೇತೃತ್ವದಲ್ಲಿ ಬಿಜೆಪಿ ತಂಡ ಈಗಾಗಲೇ ವಿಜಯಪುರ ತಲುಪಿದೆ. ವಿಜಯಪುರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ಕೊಟ್ಟು ರೈತರನ್ನು ಸಂಪರ್ಕಿಸಿ ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ವಿಜಯಪುರ ಆಯ್ತು ಈಗ ಯಾದಗಿರಿಯ 1440 ರೈತರಿಗೆ ವಕ್ಫ್‌ ಬಿಗ್ ಶಾಕ್!

 

ಈ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ರಾಜ್ಯ ಸರಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದು, ಬಿಜೆಪಿ ರೈತರ ಪರ ಇದೆ. ನಾವು ಅವರ ಜೊತೆಯಲ್ಲಿದ್ದೇವೆ. ರೈತರ ಈ ಸಮಸ್ಯೆ ಪರಿಹಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಕಾನೂನಿನ ಸಹಾಯ ಸೇರಿ ಯಾವುದೇ ರೀತಿಯ ಸಹಕಾರವನ್ನು ಬಿಜೆಪಿ ಕೊಡಲಿದ್ದು, ಅವರ ಜೊತೆ ಗಟ್ಟಿಯಾಗಿ ನಿಲ್ಲಲಿದೆ ಎಂದು ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಖಿಲ್ ಕುಮಾರಸ್ವಾಮಿಯವರು ಹಿರಿಯರಾದ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಮೊಮ್ಮಗ ಇರಬಹುದು. ಆದರೆ ಅವರು ಇವತ್ತು ಎನ್‍ಡಿಎ ಅಭ್ಯರ್ಥಿ. ನಿಖಿಲ್ ಕುಮಾರಸ್ವಾಮಿಯವರನ್ನು ಗೆಲ್ಲಿಸುವ ಕರ್ತವ್ಯ ನಮ್ಮೆಲ್ಲರದೂ ಇದೆ. ಯಾವ ರೀತಿ ರಾಜಕಾರಣದಲ್ಲಿ ಹುಚ್ಚುಚ್ಚಾಗಿ ಆಡಿ ಪಕ್ಷ ಬಿಟ್ಟು ಹೋಗಿದ್ದಾರೆ. ಇವೆಲ್ಲವನ್ನೂ ಆ ಕ್ಷೇತ್ರದ ಜನರೂ ಗಮನಿಸುತ್ತಿದ್ದಾರೆ. ಈ ವಯಸ್ಸಿನಲ್ಲೂ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಉತ್ಸಾಹವನ್ನು ಮೆಚ್ಚಿಕೊಳ್ಳಬೇಕು. ಯುವಕರಿಗೂ ದೇವೇಗೌಡರು ಪ್ರೇರಣೆ. ಅವರು ಬಂದು ಪ್ರಚಾರ ಮಾಡುತ್ತಾರೆಂದರೆ ಕಾಂಗ್ರೆಸ್ ಪಕ್ಷದವರಿಗೆ ಆತಂಕ ಶುರುವಾಗಿದೆ. ದೇವೇಗೌಡರು ಬಂದರೆ ಆ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಅನ್ನುವ ಸತ್ಯ ಅವರಿಗೆ ಅರ್ಥವಾಗಿದೆ. ಹಾಗಾಗಿ ಈ ರೀತಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಂಬಂಧ ಏಕಸದಸ್ಯ ಆಯೋಗ ರಚಿಸಿದ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಳ ಮೀಸಲಾತಿ ವಿಚಾರದಲ್ಲಿ ಪ್ರಾಮಾಣಿಕತೆ ಇದ್ದರೆ ಅವರಿಗೆ ಕಾಂತರಾಜ್ ವರದಿ ಕುರಿತು ಗಂಭೀರತೆ ಇರುತ್ತಿದ್ದರೆ ಬಹಳಷ್ಟು ಹಿಂದೆಯೇ ಅವರು ಇದರ ಕುರಿತು ಕ್ರಮ ಕೈಗೊಳ್ಳುತ್ತಿದ್ದರು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭ ಪಡೆಯುವ ಕುರಿತು ಯೋಚಿಸುತ್ತದೆ. ಈ ವಿಚಾರದಲ್ಲಿ ಹೆಚ್ಚು ಗೊಂದಲ ಮೂಡಿಸುವ ಬಗ್ಗೆ ಅವರು ಪ್ರಯತ್ನಿಸುತ್ತಾರೆ. ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಪ್ರಾಮಾಣಿಕತೆಯನ್ನು ಹೊಂದಿಲ್ಲ ಎಂಬುದು ನನ್ನ ಭಾವನೆ. ಉಪ ಚುನಾವಣೆ ಕಾರಣಕ್ಕೆ ಈ ವಿಚಾರವನ್ನು ತರುತ್ತಿದ್ದಾರೆ; ಈ ವಿಷಯದಲ್ಲಿ ಅವರಿಗೆ ಬದ್ಧತೆ ಇಲ್ಲ ಎಂದು ವಿಜಯೇಂದ್ರ ಆರೋಪಿಸಿದರು.

 

TAGGED:bjpBY VijayendrafarmersGovind karjolpoliticsಜಮೀರ್ ಅಹ್ಮದ್ಬಿಜೆಪಿಬಿವೈ ವಿಜಯೇಂದ್ರರೈತರು
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 hour ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
18 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
23 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

Madhavi Latha Chenab Railway Bridge Project
Latest

ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

Public TV
By Public TV
40 minutes ago
HD Kumaraswamy
Districts

ಪಹಲ್ಗಾಮ್‌ ದಾಳಿಗೂ ಕಾಲ್ತುಳಿತಕ್ಕೂ ಏನ್‌ ಸಂಬಂಧ? ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿದ್ವು – ಹೆಚ್‌ಡಿಕೆ ಪ್ರಶ್ನೆ

Public TV
By Public TV
58 minutes ago
BJP MP Govind Karjol slams Waqf Board for claiming rights over 15000 acres of ancestral land of farmers
Bengaluru City

Stampede Case | ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ

Public TV
By Public TV
2 hours ago
Arvind Bellad
Bengaluru City

ಚಿನ್ನಸ್ವಾಮಿ ಘಟನೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮಾತಾಡಲಿ: ಅರವಿಂದ್ ಬೆಲ್ಲದ್

Public TV
By Public TV
2 hours ago
ICU
Crime

ರಾಜಸ್ಥಾನದ ಆಸ್ಪತ್ರೆ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ರೇಪ್ – ಮತ್ತು ಬರುವ ಇಂಜೆಕ್ಷನ್ ಕೊಟ್ಟು ಅತ್ಯಾಚಾರ

Public TV
By Public TV
2 hours ago
bhaskar rao
Latest

ದಯಾನಂದ್ ಮೇಲೆ ಕೋಪ ಬಂದಿದ್ದರೆ ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು: ಭಾಸ್ಕರ್ ರಾವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?