ಬಿಜೆಪಿಯ ಆಟ ಮುಗಿತು: ಎನ್‍ಸಿಪಿ

Public TV
1 Min Read
Devendra Fadnvis Ajit Pawar

ಮುಂಬೈ: ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಭಾರತದ ಪ್ರಜಾಪ್ರಭುತ್ವದಲ್ಲಿ ಮೈಲಿಗಲ್ಲಾಗಲಿದೆ. ಸರ್ಕಾರ ರಚಿಸಿರುವ ಬಿಜೆಪಿ ಬುಧವಾರ ಸಂಜೆ 5ಗಂಟೆಯೊಳಗೆ ಬಹುಮತ ಸಾಬೀತು ಮಾಡಬೇಕು. ಬಿಜೆಪಿಯ ಆಟ ಇಲ್ಲಿಗೆ ಮುಗಿತು ಅನ್ನೋದು ಸ್ಪಷ್ಟವಾಗುತ್ತದೆ. ಕೆಲವೇ ದಿನಗಳಲ್ಲಿ ಶಿವಸೇನ-ಎನ್‍ಸಿಪಿ-ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಎನ್‍ಸಿಪಿ ನಾಯಕ ನವಾಬ್ ಮಲಿಕ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮಧ್ಯಂತರ ಆದೇಶಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕ ಸಂಜಯ್ ರಾವತ್, ಕೆಲವೊಮ್ಮೆ ಸತ್ಯ ತೊಂದರೆಗೆ ಒಳಗಾಗಬಹುದು. ಆದ್ರೆ ಕೊನೆಗೆ ಸತ್ಯಕ್ಕೆ ಜಯ ಸಿಗುತ್ತದೆ. ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ

ಸುಪ್ರಿಂಕೋರ್ಟ್ ಆದೇಶವೇನು?
ಚುನಾವಣೆ ನಡೆಸದೇ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಬೇಕು. ಬುಧವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕು. ಬಹುಮತ ಸಾಬೀತು ಸಂಪೂರ್ಣ ಪ್ರಕ್ರಿಯೆ ನೇರ ಪ್ರಸಾರವಾಗಬೇಕು. ವಿಶ್ವಾಸಮತ ಯಾಚನೆಗೂ ಮುನ್ನ ಎಲ್ಲ ಶಾಸಕರ ಪ್ರಮಾಣವಚನ ತೆಗೆದುಕೊಳ್ಳಬೇಕು. ಗುಪ್ತ ಮತದಾನ ಮಾಡುವಂತಿಲ್ಲ, ಎಲ್ಲ ಪ್ರಕ್ರಿಯೆಗಳು ಪಾರದರ್ಶಕವಾಗಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ನಾವು 162: ಸೋಮವಾರ ರಾತ್ರಿ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಖಾಸಗಿ ಹೋಟೆಲಿನಲ್ಲಿ ತಮ್ಮ ಶಾಸಕರೊಂದಿಗೆ ಶಕ್ತಿ ಪ್ರದರ್ಶನ ಮಾಡಿದ್ದವು. ಮೂರು ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಶಾಸಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಪಕ್ಷಕ್ಕೆ ನಿಷ್ಠರಾಗಿರಬೇಕು. ಸಭೆಯ ಅಂತ್ಯಕ್ಕೆ ಎಲ್ಲ ಶಾಸಕರಿಗೆ ಶಪಥವನ್ನು ಬೋಧಿಸಲಾಗಿತ್ತು. ಇದನ್ನೂ ಓದಿ: ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ

Share This Article
Leave a Comment

Leave a Reply

Your email address will not be published. Required fields are marked *