Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ

Public TV
Last updated: March 20, 2023 1:12 pm
Public TV
Share
4 Min Read
DK SHIVAKUMAR 1 2
SHARE

ಬೆಳಗಾವಿ: ಬಿಜೆಪಿಯ (BJP) ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ ಬಗ್ಗೆ ಸುಳ್ಳು ಹೇಳಲು ಹೊರಟಿದೆ. ಕಾಲ್ಪನಿಕ ಕಥೆಗಳ ಮೂಲಕ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ (C.N.Ashwath Narayan) ಹಾಗೂ ಶೋಭಾ ಕರಂದ್ಲಾಜೆ (Shobha karandlaje) ಟಿಪ್ಪು ಬಗ್ಗೆ ತಪ್ಪು ಮಾಹಿತಿ ನೀಡಲು ಹೊರಟಿದ್ದಾರೆ. ಟಿಪ್ಪು ಸಾಧನೆ ಬಗ್ಗೆ ಇತಿಹಾಸವೇ ಇದೆ. ಇದರ ಕುರಿತು ಸಾಕಷ್ಟು ಗ್ರಂಥಗಳಿವೆ. ಈಗ ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ (Nirmalanandanatha Swamiji) ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಇದನ್ನೂ ಓದಿ: ಶೋಭಾ ಡೆವಲಪರ್ಸ್ ಕಚೇರಿಗೆ ಐಟಿ ಶಾಕ್

nirmalananda swamiji

ಹೆಸರುಗಳನ್ನು ಬದಲಾವಣೆ ಮಾಡಲು ಸಾಧ್ಯವೇ? ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ ನಡೆಸಬೇಕು. ಯಾವ ನಿರ್ದೇಶಕ ಬೇಕಾದರೂ ಬರಲಿ, ಅವರನ್ನು ಎದುರಿಸಲು, ಉತ್ತರ ಕೊಡಲು ನಾವು ಸಿದ್ಧರಾಗಿದ್ದೇವೆ. ಒಕ್ಕಲಿಗ ಸಮಾಜಕ್ಕೆ ಅಗೌರವ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದಕ್ಕೆ ನಾವು ಹೋರಾಟ ಮಾಡುತ್ತೇವೆ, ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ನಾಯಕರು ಮಾನವ ಬಾಂಬರ್‌ಗಳನ್ನ ರೂಪಿಸುತ್ತಿದ್ದಾರೆ – ಗುಪ್ತಚರ ಇಲಾಖೆ ಮಾಹಿತಿ

ಬಿಜೆಪಿ ಕಾಲ್ಪನಿಕ ಕಥೆ ಮೂಲಕ ತಪ್ಪು ಸಂದೇಶ ರವಾನಿಸುತ್ತಿದೆ. ಯಾವುದೋ ಒಂದು ಪುಸ್ತಕದಲ್ಲಿ ಈ ಬಗ್ಗೆ ಸಣ್ಣ ಉಲ್ಲೇಖ ಇದೆ. ಸಂಶೋಧನೆ ಮೂಲಕ ಇತಿಹಾಸ ಬರೆದಿರುತ್ತಾರೆ, ಸಂಶೋಧನೆ ಮೂಲಕವೇ ಇತಿಹಾಸ ಇರಬೇಕು. ಉರಿಗೌಡ-ನಂಜೇಗೌಡ ಹೆಸರನ್ನು ಇಷ್ಟು ದಿನ ಎಲ್ಲಿ ಕೇಳಿದ್ದೀರಿ? ಬಿಜೆಪಿ ನಾಯಕರ ಮೇಲೆ ಮೊದಲು ಕೇಸ್ ಹಾಕಬೇಕು. ಯಾರು ಪ್ರಚೋದನೆ ಮಾಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕಬೇಕು. ಪೇ ಸಿಎಂ ಅಭಿಯಾನ ಆದಾಗ ನನ್ನ ಮತ್ತು ಸಿದ್ದರಾಮಯ್ಯ (Siddaramaiah) ಮೇಲೆ ಕೇಸ್ ಹಾಕಿದ್ದರು. ಈಗೇಕೆ ಸೈಲೆಂಟ್ ಆಗಿದ್ದೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಬಂತು ಮೊದಲ ಎಫ್‌ಡಿಐ – ಶಾಪಿಂಗ್‌ ಮಾಲ್‌ ನಿರ್ಮಾಣಕ್ಕೆ ಭೂಮಿ ಪೂಜೆ

BJP Congress

ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಮತ್ತು ಸಿಟಿ ರವಿಯವರು (C.T.Ravi) ಒಕ್ಕಲಿಗ ಹಾಗೂ ಹಿಂದೂ ವಿರೋಧಿಗಳು. ನಿರ್ಮಲಾನಂದ ಸ್ವಾಮೀಜಿ ಯಾವ ಡೈರೆಕ್ಟರನ್ನು ಕರೆದು ಮಾತನಾಡಬೇಡಿ. ಕರೆದರೆ ಒಕ್ಕಲಿಗ ಸಮಾಜ ತಲೆ ತಗ್ಗಿಸಿದಂತೆ ಆಗುತ್ತದೆ. ನಾನೂ ಕೂಡ ಸ್ವಾಮೀಜಿಗೆ ಪತ್ರಬರೆದು ಮನವಿ ಮಾಡುತ್ತೇನೆ. ಈ ಹೋರಾಟದ ನಾಯಕತ್ವ ನಿರ್ಮಲಾನಂದ ಸ್ವಾಮೀಜಿಯವರು ವಹಿಸಿಕೊಳ್ಳಬೇಕು. ಎಲ್ಲಾ ಸಮಾಜದ ಸ್ವಾಮೀಜಿಗಳು ಇದಕ್ಕೆ ಕೈಜೋಡಿಸಬೇಕು. ಒಕ್ಕಲಿಗ ಸ್ವಾಮೀಜಿ ಮೊದಲು ಹೋರಾಟ ಮಾಡಲಿ. ಬಳಿಕ ಪಕ್ಷದ ಕಡೆಯಿಂದ ಹೋರಾಟ ಮಾಡಲು ಯೋಚಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಫೋಟೋ ಸ್ಟೇಟಸ್ ಹಾಕಿದ್ದ ಯವಕನಿಗೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್‌

ನಿರ್ಮಲಾನಂದ ಸ್ವಾಮೀಜಿಯವರನ್ನು ಮುನಿರತ್ನ (Munirathna) ಭೇಟಿ ಮಾಡಿ ಮಾತುಕತೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿ ಹಾಗೂ ಮುನಿರತ್ನ ಸಭೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಚಿತ್ರ ಆಗಬಾರದೆಂದು ಸ್ವಾಮೀಜಿಗೆ ನಾನು ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌ – ಸಿನಿಮಾ ಮಾಡಲ್ಲ ಎಂದ ಮುನಿರತ್ನ

munirathna nirmalanandanatha swamiji

ಬೆಳಗಾವಿಯಲ್ಲಿ (Belagavi) ರಾಹುಲ್ ಗಾಂಧಿ (Rahul Gandhi) ಸಮಾವೇಶದ ಕುರಿತು ಮಾತನಾಡಿದ ಅವರು, ಭಾರತ ಜೋಡೋ ಯಾತ್ರೆ ಬಳಿಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಯುವ ಕ್ರಾಂತಿ ಸಮಾವೇಶ ನಡೆಸುತ್ತಿದ್ದಾರೆ. ಇಂದು ಕಾಂಗ್ರೆಸ್ಸಿಗೆ (Congress) ಐತಿಹಾಸಿಕ ಕ್ಷಣ. ದೇಶ ಹಾಗೂ ರಾಜ್ಯದ ಬದಲಾವಣೆಗೆ ಯುವಕರು ಎಚ್ಚರಿಕೆ ವಹಿಸಬೇಕು. ಮಹಿಳೆಯರು, ಯುವಕರು ಒಗ್ಗಟ್ಟಾದಾಗ ಬದಲಾವಣೆ ಸಾಧ್ಯವಾಗುತ್ತದೆ. ಮಹಿಳೆಯರು, ಯುವಕರಿಗೆ ಜಾಗೃತಿಯ ಅಗತ್ಯವಿದೆ. ಅದಕ್ಕಾಗಿ ರಾಹುಲ್ ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

ಪ್ರಿಯಾಂಕಾ ಗಾಂಧಿ (Priyanka Gandhi Vadra) ಬೆಂಗಳೂರಿಗೆ (Bengaluru) ಬಂದು ಗೃಹಲಕ್ಷ್ಮಿ ಯೋಜನೆ ಘೋಷಿಸಿದರು. ಅದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಸರ್ಕಾರ ಕೂಡ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಯೋಜನೆಗೆ ಮುಂದಾಗಿದೆ. ನಮ್ಮ ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ, ಮಾಡಲಿ. ಚುನಾವಣೆಯಲ್ಲಿ 500ಕ್ಕೂ ಅಧಿಕ ಭರವಸೆಯನ್ನು ಪ್ರಣಾಳಿಕೆಯಲ್ಲಿ ಹಾಕಿದ್ದಾರೆ. ನಾಲ್ಕು ಬಜೆಟ್ ಮಂಡಿಸುವ ಅವಕಾಶ ಇದ್ದರೂ ಬಹುತೇಕ ಯೋಜನೆ ಜಾರಿಯಾಗಲಿಲ್ಲ. ಕಾಂಗ್ರೆಸ್ ಯೋಜನೆ ನೋಡಿ ಬಿಜೆಪಿ ಸರ್ಕಾರ ನಮ್ಮನ್ನು ಫಾಲೋ ಮಾಡುತ್ತಿದೆ. ಗೃಹಲಕ್ಷ್ಮಿಗೆ ಪರ್ಯಾಯವಾಗಿ ಸ್ತ್ರಿಶಕ್ತಿ ಯೋಜನೆ, ಯುವಶಕ್ತಿ ಯೋಜನೆಗೆ ಬಿಜೆಪಿ ಮುಂದಾಗಿದೆ ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

DK Shivakumar 2

ನಾವು ಜನಪರ ಯೋಜನೆ ಬಗ್ಗೆ ವಿಚಾರ ಮಾಡುತ್ತಿದ್ದೇವೆ. ಬಿಜೆಪಿ ಭ್ರಷ್ಟಾಚಾರದ (Corruption) ಬಗ್ಗೆ ಚಿಂತೆ ಮಾಡುತ್ತದೆ. ಬಿಜೆಪಿ ದೇಶದಲ್ಲೇ ಅತಿ ಭ್ರಷ್ಟ ಸರ್ಕಾರವಾಗಿದೆ. ಮಂತ್ರಿಗಳು, ಶಾಸಕರು ನೇರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆಗಿದ್ದು, ಯುವಕರು ರೋಸಿ ಹೋಗಿದ್ದಾರೆ. ಅಧಿಕಾರ ಇದ್ದಾಗ ಮಾಡದ ಬಿಜೆಪಿಯವರು ಈಗ ಪ್ರಣಾಳಿಕೆಯಲ್ಲಿ ಹಾಕುತ್ತಿದ್ದಾರೆ. ಯುವಕರು, ಮಹಿಳೆಯರನ್ನು ಸೆಳೆಯಲು ಭರವಸೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಇದೇ ವೇಳೆ ಕನಕಪುರಕ್ಕೆ (Kanakapura) ಬರುತ್ತೇನೆ ಎಂಬ ರಮೇಶ್ ಜಾರಕಿಹೊಳಿ (Ramesh Jarakiholi) ವಿಚಾರಕ್ಕೆ ಐ ವಿಶ್ ಹಿಮ್ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

TAGGED:belagavibjpC. N. Ashwath Narayancongresscorruptiond k shivakumarMunirathnanirmalanandanatha swamijiRahul Gandhishobha karandlajesiddaramaiahಅಶ್ವಥ್ ನಾರಾಯಣ್ಕಾಂಗ್ರೆಸ್ಚುನಾವಣೆಡಿ.ಕೆ.ಶಿವಕುಮಾರ್ನಿರ್ಮಲಾನಂದ ಸ್ವಾಮೀಜಿಬಿಜೆಪಿಬೆಳಗಾವಿಭ್ರಷ್ಟಾಚಾರಮುನಿರತ್ನರಾಹುಲ್ ಗಾಂಧಿಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema Updates

Madenur Manu 2
ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ
31 minutes ago
rishab shetty 2
‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೊಂಬಾಳೆ ಫಿಲಂಸ್ ಸ್ಪಷ್ಟನೆ
2 hours ago
madenur manu 4
ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ
1 hour ago
Darshan and Vijayalakshmi
ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌
3 hours ago

You Might Also Like

Nikhil Kumaraswamy
Bengaluru City

ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
M B Patil
Bengaluru City

ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

Public TV
By Public TV
46 minutes ago
KRS Dam
Districts

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಳಿಯದ ಮಳೆ – ಕೆಆರ್‌ಎಸ್ ನೀರಿನ ಮಟ್ಟ 89 ಅಡಿಗೆ ಕುಸಿತ

Public TV
By Public TV
1 hour ago
DK Shivakumar and dk Suresh
Latest

ಡಿಕೆ ಬ್ರದರ್ಸ್‌ ಬುಡಕ್ಕೆ ಬಂತು ನ್ಯಾಷನಲ್‌ ಹೆರಾಲ್ಡ್‌ ಕೇಸ್‌

Public TV
By Public TV
1 hour ago
Bride Opposes Marriage In The Last Moment Wedding Cancelled in Hassana
Districts

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

Public TV
By Public TV
2 hours ago
Covid 19
Bengaluru City

ಬೆಂಗಳೂರಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?