ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಬಿ.ಎಲ್ ಸಂತೋಷ್ ಭೇಟಿ ನೀಡಿದ್ದಾರೆ. ಮಾತುಕತೆಯ ಬಳಿಕ ಬಿಎಸ್ ವೈ ಅವರು ಸಂತೋಷ್ ಅವರು ಕಾರಿನಲ್ಲಿ ಕುಳಿತುಕೊಳ್ಳುವವರೆಗೂ ಬಂದು ಬೀಳ್ಕೊಟ್ಟಿದ್ದಾರೆ.
ಸಂತೋಷ್ ಗೆ ಭಾನುವಾರವಷ್ಟೇ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಿಜೆಪಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ನಿವಾಸಕ್ಕೆ ಸಂತೋಷ್ ಭೇಟಿ ನೀಡಿದ್ದಾರೆ. ಸಂತೋಷ್ ಜೊತೆ ಮಾತಾನಾಡಿ ಬಿಎಸ್ವೈ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ ಬಿಎಸ್ವೈ ಅವರು ಮನೆಯ ಗೇಟ್ ವರೆಗೂ ಬಂದು ಸಂತೋಷ್ರನ್ನ ಕಾರು ಹತ್ತಿಸಿದ್ದಾರೆ. ಇದನ್ನೂ ಓದಿ: ರಾಮಲಾಲ್ ಜಾಗಕ್ಕೆ ಬಿಎಲ್ ಸಂತೋಷ್ ನೇಮಕ
ಇತ್ತ ಯಲಹಂಕ ಬಳಿ ಎರಡು ರೆಸಾರ್ಟ್ ನಲ್ಲಿ ವಾಸ್ತವ್ಯ ಇರುವ ಬಿಜೆಪಿ ಶಾಸಕರು ಬೆಳ್ಳಂಬೆಳಗ್ಗೆ ಯೋಗಾಭ್ಯಾಸ ಮಾಡಿದ್ದಾರೆ. ಈ ವೇಳೆ ಕೆಲವರಿಗೆ ಯೋಗ ಮಾಡೋಕೆ ಗೊತ್ತಾಗದೇ ಕಸರತ್ತು ಮಾಡಿದ ಪ್ರಸಂಗವೂ ನಡೆದಿದೆ.