ಚಾಮರಾಜನಗರ: ಜಿಲ್ಲೆಯ ದಸರಾ (Dasara) ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ವೇಳೆ ಕಾಂಗ್ರೆಸ್ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ (R.P. Nanjundaswamy)ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಸಚಿವ ವಿ. ಸೋಮಣ್ಣನವರು (V. Somanna) ಕೆಂಡಾಮಂಡಲವಾಗಿದ್ದಾರೆ.
ಚಾಮರಾಜೇಶ್ವರ ದೇವಾಲಯದ (Chamarajeshwara Temple) ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲು ವಿ. ಸೋಮಣ್ಣನವರು ವೇದಿಕೆ ಏರಿ ಕುಳಿತಂತೆ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ನೀಡಿದ ವೈದ್ಯ – ಆಸ್ಪತ್ರೆಯಲ್ಲಿ ಮಗು ಸಾವು
ಬಳಿಕ ಅಲ್ಲಿಯೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಈ ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸೋಮಣ್ಣ ಅವರು, ಪೊಲೀಸರು ಏನು ಮಾಡುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕಿಲ್ಲ ಅನ್ನೋ ನೋವಿದೆ, ಆದ್ರೆ ನಾನು ಹಿಂದೆ ಸರಿಯಲ್ಲ: ಶ್ರೀರಾಮುಲು