ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ವಾಮಾಚಾರ ಮಾಡಿರೋದ್ರಿಂದ ವಿದ್ಯಾರ್ಥಿಗಳು ಭಯಭೀತರಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಶಾಲೆಯ ಬಳಿ ವಾಮಾಚಾರ ಮಾಡಿ ಗೊಂಬೆ ಬಿಸಾಕಿದ್ದಾರೆ. ಅಷ್ಟೇ ಅಲ್ಲದೆ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಮಾತ್ರೆ ಹಾಕಿದ್ದಾರೆ. ಇದರಿಂದ ಶಿಕ್ಷಕರು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ವಾಮಾಚಾರ ಮಾಡಿರೋ ಕಿಡಿಗೇಡಿಗಳ ವಿರುದ್ಧ ಪೋಷಕರು ಮತ್ತು ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಶಾಲೆಯಲ್ಲಿ 1 ರಿಂದ 7 ತರಗತಿಯವರೆಗೆ 250 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ವಾಮಾಚಾರ ಮಾಡಿದ್ದರಿಂದ ಪಾಲಕರು ಶಾಲೆ ಬಳಿ ಜಮಾಯಿಸಿದ್ದರು. ತಮ್ಮ ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗಿದ್ದಾರೆ .