ತಂತಿ ಉರುಳಿಗೆ ಸಿಲುಕಿ ಶಿರಸಿಯಲ್ಲಿ ಅಪರೂಪದ ಕಪ್ಪು ಚಿರತೆ ಸಾವು

Public TV
1 Min Read
Black Panther

– ಮಲೆನಾಡು ಭಾಗದಲ್ಲಿ ಮೊದಲ ಬಾರಿ ಕಪ್ಪು ಚಿರತೆ ಪತ್ತೆ

ಕಾರವಾರ: ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ತಂತಿಯ ಉರುಳಿಗೆ ನಾಲ್ಕು ವರ್ಷದ ಅಪರೂಪದ ಕಪ್ಪು ಚಿರತೆ ಸಿಲುಕಿ ಮೃತಪಟ್ಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆಯಲ್ಲಿ ಇಂದು ನಡೆದಿದೆ.

mys darshan black panther 2 5 copy

ಇಂದು ಬೆಳಗ್ಗೆ ಉರುಳಿಗೆ ಸಿಲುಕಿ ಚಿರತೆ ಒದ್ದಾಡುವುದನ್ನು ನೋಡಿದ ಸ್ಥಳೀಯರು, ಅರಣ್ಯಾಧಿಕಾರಿಗಳಿಗೆ ತಿಳಸಿದ್ದಾರೆ. ತಕ್ಷಣ ಬನವಾಸಿ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಲು ಸ್ಥಳಕ್ಕೆ ಆಗಮಿಸಿದ್ದರು. ಆದರೆ ರಕ್ಷಣೆ ಮಾಡುವಷ್ಟರಲ್ಲಿ ಚಿರತೆ ಸಾವನ್ನಪ್ಪಿದೆ. ಇದನ್ನೂ ಓದಿ:  ಮಹಿಳೆಯರ ವಿರುದ್ಧದ ಅಪರಾಧಗಳತ್ತ ಕಣ್ಣು ಮುಚ್ಚಬೇಡಿ, ಮಾತನಾಡಿ: ರಮ್ಯಾ

ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿ ಕಪ್ಪು ಚಿರತೆ ಇರುವುದು ಪತ್ತೆಯಾಗಿದೆ. ಚಿರತೆ ಕಳೆಬರಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾಡು ಪ್ರಾಣಿ ಭೇಟೆಗೆ ಯಾರು ಉರಳು ಹಾಕಿದ್ದಾರೆ ಎಂಬ ತನಿಖೆಯನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *