Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ರಕ್ತ: ಇಂಚಿಂಚು ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ರಕ್ತ: ಇಂಚಿಂಚು ಮಾಹಿತಿ

Karnataka

ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ರಕ್ತ: ಇಂಚಿಂಚು ಮಾಹಿತಿ

Public TV
Last updated: May 30, 2024 2:46 pm
Public TV
Share
3 Min Read
Ganesh 1
SHARE

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಕಾರ್ಯಕಾರಣಿ ಸಭೆ ಮಾಡಲು ಸರ್ವ ಸದಸ್ಯರು ಗೋವಾ (Goa) ಟ್ರಿಪ್ ಮಾಡಿದ್ದರು. ರಾತ್ರಿ ಹೋಟೆಲ್‍ ನಲ್ಲಿ ಮೋಜು ಮಸ್ತಿ ಮಾಡುವಾಗ ನಿರ್ಮಾಪಕರ ಮಧ್ಯ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ನಿರ್ಮಾಪಕರು ತೀವ್ರ ಗಾಯಗೊಂಡಿದ್ದಾರೆ. ಇವರು ಗೋವಾಗೆ ಹೋಗಿದ್ದು ಕನ್ನಡ ಚಿತ್ರೋದ್ಯಮದ ಉದ್ದಾರಕ್ಕೆ. ಸಿನಿ ರಂಗವನ್ನು ಮತ್ತಷ್ಟು ಬಲಿಷ್ಠವಾಗಿ ಬೆಳೆಸೋಕೆ. ಹೋದವರ‍್ಯಾರು ಕಾಂಜಿಪಿಂಜಿಗಳಲ್ಲ. ಪುಡಿರೌಡಿಗಳೂ ಅಲ್ಲವೇ ಅಲ್ಲ. ಕನ್ನಡ ಸಿನಿರಂಗಕ್ಕೆ ಅಪರೂಪದ ಸಿನಿಮಾ ಕೊಟ್ಟವರು. ಸ್ಯಾಂಡಲ್‌ವುಡ್ಡನ್ನು ಹುಲುಸಾಗಿ ಬೆಳೆಸಿದವರು. ಗಟ್ಟಿಯಾಗಿ ನಿಲ್ಲಿಸಿದವರು. ಆದ್ರೆ, ಈ ಗುಂಪಿನಲ್ಲಿದ್ದ ಕೆಲವರು ಮಾಡಿದ್ದೇನು? ಎಣ್ಣೆ ಏಟಲ್ಲಿ ಬಡಿದಾಡ್ಕೊಂಡಿದ್ದಾರೆ. ಕನ್ನಡ ಚಿತ್ರೋದ್ಯಮದ ಮಾನ ಮರ‍್ಯಾದೇನ ಮೂರುಕಾಸಿಗೆ ಹರಾಜಾಕಿದ್ದಾರೆ. ಬಡಿದಾಡ್ಕೊಂಡವ್ರ ಮುಖದಿಂದ ರಕ್ತ ಸೋರಿದೆ, ತಲೆಬುರುಡೆ ಒಡೆದಿದೆ. ಮಾರಣಾಂತಿಕ ಹಲ್ಲೆ ನಡೆದಿದೆ.

karnataka film chamber 3

ಕನ್ನಡ ಸಿನಿಮಾ ರಂಗಕ್ಕೀಗ ಬರೋಬ್ಬರಿ 90 ವರ್ಷ. ಈ ಹಾದಿ ಸುಗಮವಾದುದಲ್ಲ. ಮದ್ರಾಸ್‌ನಿಂದ ಬಿಡಿಸಿಕೊಂಡು ಕರ್ನಾಟಕದಲ್ಲೇ ಚಿತ್ರರಂಗ ಕಟ್ಟಿದ ಇತಿಹಾಸವಿದೆಯಲ್ಲ ಅದು ರೋಚಕ. `ಮದ್ರಾಸ್’ ಎಂಬ ನಮ್ಮದಲ್ಲದ ನೆಲದಲ್ಲಿ ನೆಲೆನಿಂತು, ಕಷ್ಟಪಟ್ಟು, ಅವರು ಕೊಟ್ಟ ಸಮಯಕ್ಕೆ ಚಿತ್ರೀಕರಣ ಮಾಡಿ, ಹಗಲು ರಾತ್ರಿ ಲೆಕ್ಕಿಸದೇ ಕಟ್ಟಿದ ಚಿತ್ರರಂಗ ನಮ್ಮದು. ನಾವೀಗ 90ರ ಸಂಭ್ರಮದಲ್ಲಿದ್ದೇವೆ. ಇಡೀ ರಾಷ್ಟ್ರವೇ ಕನ್ನಡ ಸಿನಿಮಾ ರಂಗದತ್ತ ನೋಡುವಂತಾಗಿದೆ. ಮೂಕಿ ಯುಗದಿಂದ ಇಲ್ಲೀತನಕ ಮಾಡಿದ ಪ್ರಯೋಗಗಳು ಇತರ ಚಿತ್ರರಂಗಕ್ಕೆ ಮಾದರಿ ಆಗಿವೆ. ಈ ಮಾದರಿ ಇವರಿಂದಾಗಿ ಮಣ್ಣುಪಾಲಾಗಿದೆ. 90ರ ಸಂಭ್ರಮವನ್ನು ಸೆಲೆಬ್ರೇಟ್ ಮಾಡೋದು ಹೇಗೆ? ಅಂತ ಪ್ಲ್ಯಾನ್ ಮಾಡೋಕೆ ಹೋದವರು ಮಾನ ಕಳೆದು ಬಂದಿದ್ದಾರೆ.

FotoJet 2 8

ಚಿತ್ರರಂಗದ ಮಾತೃಸಂಸ್ಥೆ ಈ ಫಿಲ್ಮ್ ಚೇಂಬರ್. ಚಿತ್ರೋದ್ಯಮದ ಪುಣ್ಯಾತ್ಮರು ನಡೆದಾಡಿದ ಕರ್ಮಭೂಮಿ ಅದು. ಅದಕ್ಕೆ ಅದರದ್ದೇ ಆದ ಗೌರವವಿದೆ. ಈಗದು ತನ್ನ ಖದರ್ ಕಳೆದುಕೊಳ್ಳುತ್ತಿದ್ದರೂ, ಈಗಲೂ ಈ ಸಂಸ್ಥೆಯ ಮೇಲೆ ಅಪಾರ ವಿಶ್ವಾಸ, ನಂಬಿಕೆ ಚಿತ್ರಕರ್ಮಿಗಳದ್ದು. ಇಂಥದ್ದೊಂದು ಜವಾಬ್ದಾರಿಯ ಅರಿವು ಈಗಿರುವವರಿಗೆ ಇರಬೇಕಿತ್ತು ಅಲ್ಲವಾ?.. ಗೋವಾಗೆ ಹೋಗಿದ್ದು ಯಾಕೆ? ಅಲ್ಲಿಗೇ ಯಾಕೆ ಹೋಗಬೇಕಿತ್ತು? ಅಷ್ಟೂ ಜನರನ್ನು ಕರೆದುಕೊಂಡು ಹೋಗಿದ್ದು ಯಾರು? ಹಣ ಎಲ್ಲಿಂದ ಬಂತು? ಈ ಯಾವ ಪ್ರಶ್ನೆಯನ್ನೂ ಜನರು ಕೇಳ್ತಿಲ್ಲ.. ಗೋವಾಗೆ ಹೋಗಿದ್ದು ತಪ್ಪು ಅಂತಾನೂ ಹೇಳ್ತಿಲ್ಲ. ಮಾತೃಸಂಸ್ಥೆಯ ಹೆಸರಿನಲ್ಲಿ ಹೋದರು ಮರ್ಯಾದೆ ಕಳೆಯುವಂಥ ಕೆಲಸ ಮಾಡ್ಬೋದಾ ಅಂತಿದ್ದಾರೆ ಜನರು. ಗೋವಾಗೆ ಹೋದವರೇ ಹೇಳ್ತಿರೋ ಪ್ರಕಾರ.. ಇವರೆಲ್ಲ ಹೋಗಿದ್ದು ಜಾಲಿಟ್ರಿಪ್‌ಗೆ ಅಲ್ಲವಂತೆ. ಸಿನಿಮಾ ರಂಗಕ್ಕೆ 90 ವರ್ಷ ತುಂಬಿರೋ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗ್ತಿದೆ. ಈ ಕಾರ್ಯಕ್ರಮದ ರೂಪರೇಷೆ ಚರ್ಚೆ ಮಾಡೋಕೆ ಗೋವಾಗೆ ಹೋಗಿದ್ದರಂತೆ. ಇದರ ಜೊತೆಗೆ ಫಿಲ್ಮ್ ಚೇಂಬರ್‌ನ ಕಾರ್ಯಕಾರಿಣಿ ಸಭೆ ಕೂಡ ಪ್ಲ್ಯಾನ್ ಆಗಿತ್ತಂತೆ. ಇಷ್ಟೊಂದು ಮಹತ್ವದ ಕೆಲಸ ಇಟ್ಕೊಂಡು ಹೋದವರು ಬಡಿದಾಡಿಕೊಂಡಿದ್ದು ಯಾಕೆ?.. ಉಳಿದುಕೊಂಡ ಹೋಟೆಲ್‌ನಲ್ಲಿ ನೆತ್ತರು ಹರಿಸಿದ್ದು ಯಾಕೆ?.. ಅಷ್ಟಕ್ಕೂ ಇವರೇನು ಸಣ್ಣ ಮಕ್ಕಳಾ? ಫಿಲ್ಮ್ ಚೇಂಬರ್ ಸದಸ್ಯರಾಗಿದ್ದವರಿಗೆ ಕಾಮನ್‌ಸೆನ್ಸ್ ಬೇಡವಾ?.

Ganesh

ಫಿಲ್ಮ್ ಚೇಂಬರ್‌ನಲ್ಲಿ ಈ ರೀತಿ ಗಲಾಟೆ ಆಗೋದು ಹೊಸದೇನೂ ಅಲ್ಲ. ಚುನಾವಣೆ ಟೈಮ್‌ನಲ್ಲಿ ಒಬ್ಬರಿಗೊಬ್ಬರು ತೊಡೆ ತಟ್ಟಿದ್ದಾರೆ.. ಕೂಗಾಡಿದ್ದಾರೆ.. ಕೈಕೈ ಮಿಲಾಯಿಸೋ ಹಂತಕ್ಕೂ ಹೋಗಿದ್ದಾರೆ. ಆದರೆ, ಈ ಪ್ರಮಾಣದಲ್ಲಿ ಯಾವತ್ತೂ ಜಗಳ ಆಗಿರಲಿಲ್ಲ. ಹಾಗಂತ ಈಗ ಯಾವ ಚುನಾವಣೆನೂ ನಡೆದಿಲ್ಲ. ಗೋವಾದಲ್ಲಿ ನಡೆದಿರೋ ಮಾರಣಾಂತಿಕ ಹಲ್ಲೇಲಿ ನಿರ್ಮಾಪಕ ಎ.ಗಣೇಶ್ ಹಣೆಯಿಂದ ರಕ್ತ ಚಿಮ್ಮಿದೆ. ದೇಹದ ತುಂಬಾ ಗಾಯಗಳಾಗಿವೆ. ಮತ್ತೋರ್ವ ನಿರ್ಮಾಪಕ ರಥಾವರ ಚಂದ್ರು ಕೂಡ ಗಂಭೀರ ಗಾಯದಿಂದ ನೆರಳ್ತಾ ಇದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ. ಸೂಕ್ತ ಸಮಯದಲ್ಲಿ ಅಂಬುಲೆನ್ಸ್ ಬಾರದೇ ಇದ್ದರೆ, ಅನಾಹುತಾನೇ ಆಗಿರೋದು ಅಂತಿದ್ದಾರೆ ನಿರ್ಮಾಪಕ ಗಣೇಶ್.

 

ಅಂಬುಲೆನ್ಸ್ ತಡವಾಗಿದ್ದರೆ ಅನಾಹುತನೇ ಆಗಿರೋದು ಅಂತಿದ್ದಾರೆ ಅಂದ್ಮೇಲೆ.. ಹಲ್ಲೆ ಯಾವ ಪ್ರಮಾಣದಲ್ಲಿ ಆಗಿರೋದು ಅಂತ ನೀವೇ ಅಂದಾಜಿಸಿಕೊಳ್ಳಿ.. ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ಯಾಕೆ? ವೈಯಕ್ತಿಕ ಕಾರಣ ಏನಾದ್ರೂ ಇತ್ತಾ? ದ್ವೇಷ ತುಂಬಿಕೊಂಡೆ ಇವರು ಗೋವಾಗೆ ಹೋಗಿದ್ದಾರೆ? ದ್ವೇಷದಲ್ಲಿ ಹಲ್ಲು ಮಸೀತಾ ಇದ್ದೋರ್‌ನ ಗೋವಾಗೆ ಕರ‍್ಕೊಂಡು ಹೋಗಿದ್ದು ಯಾರು? ಸತೀಶ್ ಅನ್ನೋರು ಫೋರ್ಕ್ ಸ್ಪೂನ್‌ನಿಂದ ಹಲ್ಲೆ ಮಾಡಿದ್ದು ಯಾಕೆ? ಅಲ್ಲಿದ್ದವರಿಗೆ ಈ ಕಾಳಗವನ್ನು ತಪ್ಪಿಸೋಕೆ ಆಗ್‌ಲಿಲ್ಲವಾ? ಅಬ್ಬಬ್ಬಾ.. ಎಷ್ಟೊಂದು ಪ್ರಶ್ನೆಗಳು.. ಇದಕ್ಕೆ ಉತ್ತರಿಸೋರು ಯಾರು? ನಿರ್ಮಾಪಕ ಗಣೇಶ್ ಅವರೇ ಹೇಳಿದಂತೆ ಹಲ್ಲೆ ಮಾಡಿದ ವ್ಯಕ್ತಿ ಕಂಠಪೂರ್ತಿ ಕುಡಿದಿದ್ನಂತೆ.. ಅದು ಬರೀ ಕುಡಿತದ ಹಾರಾಟ ಮಾತ್ರ ಆಗಿರಲಿಲ್ಲವಂತೆ.. `ಬೇರೆ ಇನ್ನೇನಾದ್ರೂ ತಗೊಂಡಿದ್ನಾ?.’ ಅಂತ ಅನುಮಾನ ಹೊರ ಹಾಕಿದ್ದಾರೆ. `ಬೇರೆದು ಅಂದ್ರೇನು..?’ ಈ ಮಾತು ನಾನಾ ಅನುಮಾನಕ್ಕೆ ಕಾರಣವಾಗಿದೆ. `ಬೇರೆದು ಅಂದ್ರೇನು..?’ ಅಂತ ಗಣೇಶ್ ಅವರೇ ಬಿಡಿಸಿ ಹೇಳಬೇಕಿದೆ. ಒಟ್ನಲ್ಲಿ.. ಗೋವಾ ಟ್ರಿಪ್ ಸುಖಾಂತ್ಯ ಕಾಣದೆ.. ಹೊಡೆದಾಟದಲ್ಲಿ ಕೊನೆಗೊಂಡಿದೆ. ಹೋದ ಕೆಲ್ಸ ಆಯ್ತಾ ಅಂತ ಚೇಂಬರ್ ಅಧ್ಯಕ್ಷರೇ ಹೇಳ್ಬೇಕಿದೆ. ಅಂದಹಾಗೆ ಈ ಘಟನೆಯಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ ತುಟಿಗೂ ಗಾಯ ಆಗಿದೆ ಅನ್ನೋದು ವಿಪರ್ಯಾಸ.

TAGGED:Film ChamberGalateganeshgoaN.M. Sureshಎನ್.ಎಂ. ಸುರೇಶ್ಗಣೇಶ್ಗಲಾಟೆಗೋವಾಫಿಲ್ಮ್ ಚೇಂಬರ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
25 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
41 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
55 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
1 hour ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
1 hour ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?