Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಯಾ-ಸುನ್ನಿಗಳ ನಡುವೆ ಮತ್ತೆ ರಕ್ತಪಾತ – ದಿನ ದಿನಕ್ಕೂ ಏರುತ್ತಿದೆ ಸಾವಿನ ಸಂಖ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಿಯಾ-ಸುನ್ನಿಗಳ ನಡುವೆ ಮತ್ತೆ ರಕ್ತಪಾತ – ದಿನ ದಿನಕ್ಕೂ ಏರುತ್ತಿದೆ ಸಾವಿನ ಸಂಖ್ಯೆ!

Latest

ಶಿಯಾ-ಸುನ್ನಿಗಳ ನಡುವೆ ಮತ್ತೆ ರಕ್ತಪಾತ – ದಿನ ದಿನಕ್ಕೂ ಏರುತ್ತಿದೆ ಸಾವಿನ ಸಂಖ್ಯೆ!

Public TV
Last updated: December 2, 2024 8:32 pm
Public TV
Share
6 Min Read
Pakistan
SHARE

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ (Khyber Pakhtunkhwa) ಜಿಲ್ಲೆಯೊಂದರಲ್ಲಿ ಕೋಮುಗಲಭೆ ಭುಗಿಲೆದ್ದಿದೆ. ಮುಸ್ಲಿಂ ಧರ್ಮದ ಎರಡು ದೊಡ್ಡ ಪಂಗಡಗಳಾದ ಶಿಯಾ ಮತ್ತು ಸುನ್ನಿಗಳ ನಡುವಿನ ಸಂಘರ್ಷ ಸಂಘರ್ಷಗಳು ನಿರಂತರವಾಗಿ ಶಾಂತಿ ಕದಡುತ್ತಿವೆ. ಪಾಕ್‌ನ ಆಫ್ಘನ್ ಗಡಿಯ ಕುರ್ರಂ ಜಿಲ್ಲೆಯ ಖೈಬ‌ರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಎರಡು ಪಂಗಡಗಳು ಪರಸ್ಪರ ಕಾದಾಟಕ್ಕಿಳಿದಿದ್ದು, ಕಂಡಕಂಡಲ್ಲಿ ದಾಳಿಗಳು ನಡೆಯುತ್ತಿವೆ. ಈ ಸಂಘರ್ಷ ಕೇವಲ ಪಾಕಿಸ್ತಾನ ಮಾತ್ರವಲ್ಲದೇ ವಿಶ್ವದ ಇತರ ಮುಸ್ಲಿಂ ರಾಷ್ಟ್ರಗಳಲ್ಲೂ (Muslims Nation) ಕಂಪನ ಸೃಷ್ಟಿಸಿವೆ.

Contents
  • ಸಂಘರ್ಷಕ್ಕೆ ಕಾರಣವೇನು?
  • ಸಂಘರ್ಷ ಶುರುವಾಗಿದ್ದು ಎಲ್ಲಿಂದ?
  • ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
  • ಸಮುದಾಯಗಳ ಬಲಾ-ಬಲ ಹೇಗಿದೆ?
  • ಇತರ ಪಂಗಡಗಳಿಗೂ ನೆಮ್ಮದಿ ಇಲ್ಲ!
  • ಅಹಮದೀಯರಿಗೇಕೆ ನೆಲೆ ಇಲ್ಲ?
  • WTC ದಾಳಿಯೂ ಸಂಘರ್ಷಕ್ಕೆ ಕಾರಣವಾಗಿದ್ದು ಹೇಗೆ?

ಕಳೆದ 6 ತಿಂಗಳಿನಿಂದ ಮತ್ತೆ ಶಿಯಾ – ಸುನ್ನಿ ಪಂಗಡಗಳ ನಡುವಿನ ಸಂಘರ್ಷ (Shia Sunni Clash) ತಾರಕಕ್ಕೇರಿದ್ದು, ಈ ಅವಧಿಯಲ್ಲಿ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ. ಸದ್ಯ ಒಂದು ವಾರ ಕದನವಿರಾಮ ಘೋಷಣೆಯಾಗಿದ್ದರೂ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತಲೇ ಇದೆ. ಇದರಿಂದ 1 ವಾರದಲ್ಲಿ 87 ಇದ್ದ ಸಾವಿನ ಸಂಖ್ಯೆ ಕಳೆದ 3 ದಿನಗಳಿಂದ 133ಕ್ಕೆ ಏರಿಕೆಯಾಗಿದೆ. ಇದರೊಂದಿಗೆ 300ಕ್ಕೂ ಅಧಿಕ ಕುಟುಂಬಗಳು ವಲಸೆ ಹೋಗಿವೆ. ಈ ಸಂಘರ್ಷ ನಿಯಂತ್ರಣಕ್ಕೆ ಅಲ್ಲಿನ ಜಿಲ್ಲಾಡಳಿತ ಹಾಗೂ ಭದ್ರತಾ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಅದಕ್ಕಾಗಿ ಭದ್ರತಾ ಪಡೆಗಳು ಸ್ಥಳದಲ್ಲೇ ಬೀಡುಬಿಟ್ಟಿವೆ. ಕುರ್ರಂನ ಪ್ರಮುಖ ನಗರಗಳಾದ ಪರಾಚಿಬಾರ್‌, ಪೇಶಾಬವರ್‌ ಅನ್ನು ಸಂಪರ್ಕಿಸುವ ಮುಖ್ಯರಸ್ತೆಯನ್ನು ಬಂದ್‌ ಮಾಡಲಾಗಿದೆ.

Pakistan 2

ಸಂಘರ್ಷಕ್ಕೆ ಕಾರಣವೇನು?

ಇಸ್ಲಾಮಿನ ಅಂತಿಮ ಪ್ರವಾದಿ ಮೊಹಮ್ಮದ್‌ರ ನಂತರದ ಉತ್ತರಾಧಿಕಾರ ವಿಚಾರದಲ್ಲಿ ಹುಟ್ಟಿಕೊಂಡ ವಿವಾದ ಇಂದಿಗೂ ಮುಂದುವರಿದಿದೆ. ಪಾಕ್‌ನಲ್ಲಿ ಬಹುಸಂಖ್ಯಾತರಾಗಿರುವ ಸುನ್ನಿ ಸಮುದಾಯದವರು ರಾಜಕೀಯ ಸಹಿತ ಎಲ್ಲ ಅಧಿಕಾರವೂ ತಮ್ಮ ಬಳಿಯೇ ಇರಬೇಕೆಂದು ಬಯಸುತ್ತಿದ್ದು, ಹಾಗಾಗಿ ಅವರು ಶಿಯಾಗಳ (Shia) ನೆರಳನ್ನೂ ಕಾಣಲು ತಯಾರಿಲ್ಲ. ಈ ವಿಚಾರದಲ್ಲಿ ಎರಡೂ ಪಂಗಡಗಳ ನಡುವೆ ಘರ್ಷಣೆ ಸದಾ ಇದ್ದಿದ್ದೇ.

Pakistan 3

ಸಂಘರ್ಷ ಶುರುವಾಗಿದ್ದು ಎಲ್ಲಿಂದ?

ಪಾಕಿಸ್ತಾನದ ಪಖ್ತುಂಖ್ವಾ ಪ್ರಾಂತ್ಯ ಅನ್ನೋದು ಅಫ್ಘಾನಿಸ್ತಾನದ (Afghanistan) ಗಡಿಯಲ್ಲಿರುವ ಒಂದು ಸಣ್ಣ ಜಿಲ್ಲೆ. ಇಂದು ಅಲ್ಲಿ ಈ ಪರಿಯಾಗಿ ಸಂಘರ್ಷ ಶುರುವಾಗಲು ಕಾರಣ ಏನು ಎಂದು ಹುಡುಕುತ್ತಾ ಹೋದರೆ ಅಫ್ಘಾನಿಸ್ತಾನದ ಸಂಘರ್ಷ ಹಾಗೂ 70ರ ದಶಕದಲ್ಲಿ ಪಾಕಿಸ್ತಾನದ ಮಿಲಿಟರಿ ಅಧಿ ಕಾರಿಯಾಗಿದ್ದ ಜಿಯಾ ಉಲ್ ಹಕ್ ಎಂಬ ಸೇನಾ ನಾಯಕನ ಪಾತ್ರ ಕಾಣಿಸುತ್ತದೆ.

ವಿಶ್ವದ 2ನೇ ಮಹಾಯುದ್ಧದ ಬಳಿಕ 2 ಬಲಾಡ್ಯ ರಾಷ್ಟ್ರಗಳ ನಡುವೆ ಉಂಟಾದ ʻಶೀತಲ ಸಮರ’ದ ಕಾಲದಲ್ಲಿ ಅಫ್ಘಾನಿಸ್ತಾನದಲ್ಲಿ ರಷ್ಯಾದ ಪಡೆಗಳು ಬೀಡುಬಿಟ್ಟಿದ್ದವು. ಇತ್ತ ಪಾಕಿಸ್ತಾನವು ಅಮೆರಿಕ ಪರ ನಿಂತುಕೊಂಡಿತ್ತು. ಆಗ ಅಫ್ಘಾನಿಸ್ತಾನದ ನಿರಾಶ್ರಿತರನ್ನು ಕರೆತಂದಿರುವ ಜಿಯಾ ಉಲ್ ಹಕ್ ಇದೇ ಪ್ರಾಂತ್ಯದಲ್ಲಿ ಆಶ್ರಯ ನೀಡುತ್ತಾ ಬಂದ. ಅವರಿಗಾಗಿಯೇ ಮದರಸಾಗಳನ್ನ ತೆರೆಯಲಾಯಿತು. ಇವರೆಲ್ಲರೂ ಶಿಯಾ ಸಮುದಾಯದವರಾಗಿದ್ದು, ಇವರನ್ನು ಅಫ್ಘಾನ್‌ನಲ್ಲಿದ್ದ ರಷ್ಯಾ ಪಡೆಗಳ ವಿರುದ್ಧ ಹಾಗೂ ಕಾಶ್ಮೀರದಲ್ಲಿ ಗೆರಿಲ್ಲಾ ಮಾದರಿಯ ಯುದ್ಧದಲ್ಲಿ ಬಳಸಲು ಯೋಜನೆ ರೂಪಿಸಿ ಅವರಿಗೆ ಹಣಕಾಸಿನ ನೆರವನ್ನೂ ನೀಡಲಾಯಿತು. ವರ್ಷಗಳು ಉರುಳಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶಿಯಾಗಳ ಸಂಖ್ಯೆ ಕಡಿಮೆಯಾಗಿ ಸುನ್ನಿಗಳ ಸಂಖ್ಯೆ ಹೆಚ್ಚಾಗುತ್ತಾ ಹೋಯಿತು. ಇದರಿಂದ ನಿಧಾನವಾಗಿ ಎರಡು ಪಂಗಡಗಳ ನಡುವೆ ಸಂಘರ್ಷದ ಕಿಡಿ ಹೊತ್ತಿಕೊಂಡಿತ್ತು.

Pakistan 4

ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?

ಈ ಸಮುದಾಯಗಳ ಸಂಘರ್ಷಕ್ಕೆ ಇನ್ನೂ ಒಂದು ಮುಖ್ಯ ಕಾರಣವಿದೆ. ಕುರ್ರಂ ಜಿಲ್ಲೆಯು ಬುಡಕಟ್ಟು ಪ್ರದೇಶವಾಗಿದ್ದು, 7.84 ಲಕ್ಷದಷ್ಟು ಜನಸಂಖ್ಯೆಯನ್ನು ಹೊಂದಿದೆ. ಈ ಪೈಕಿ ಶೇ.99 ರಷ್ಟು ತುರಿ, ಬಂಗಾಶ್‌, ಜೈಮುಷ್ಟ್‌, ಮಂಗಲ್‌, ಮುಕ್ಬಾಲ್‌ ಮತ್ತು ಮುಸುಜೈ ಮತ್ತು ಪರ್ಷಮ್ಕಾನಿ, ಬಂಗಾಶ್‌ ಶಿಯಾ ಸಮುದಾಗಳಿವೆ. ಉಳಿದವರು ಸುನ್ನಿಗಳಿದ್ದಾರೆ. 2001ರಲ್ಲಿ ಅಮೆರಿಕವು ಪಾಕಿಸ್ತಾನದ ಮೇಲೆ ದಾಳಿ ಮಾಡಿದಾಗ ಲಕ್ಷಾಂತರ ಸುನ್ನಿಗಳು ಪಾಕಿಸ್ತಾನಕ್ಕೆ ಪಲಾಯನ ಮಾಡಿದರು. ಅಫ್ಘಾನಿಸ್ತಾನದಲ್ಲಿದ್ದ ಸುನ್ನಿಗಳು ಪಾಕ್‌ನ ಹಲವು ಪ್ರದೇಶಗಳಲ್ಲಿ ನೆಲೆದರು. ಆದ್ರೆ ಕುರ್ರಂ ಜಿಲ್ಲೆಯಲ್ಲಿದ್ದ ಶಿಯಾಗಳು ಇಲ್ಲಿನ ಸುನ್ನಿಗಳಿಗೆ ನೆಲೆಯೂರಲು ವಿರೋಧ ವ್ಯಕ್ತಪಡಿಸಿತ್ತು. ಆದ್ರೆ ಅಂದಿನ ಜನರಲ್‌ ಜಿಯಾ ಉಲ್‌ ಹಕ್‌ನಿಂದಾಗಿ ಸುನ್ನಿಗಳಿಗೆ ಈ ಪ್ರದೇಶದಲ್ಲಿ ನೆಲೆಸುವ ಅವಕಾಶ ಸಿಕ್ಕಿತು. 2007ರಲ್ಲಿ ಶಿಯಾ – ಸುನ್ನಿಗಳ ನಡುವೆ ರಕ್ತಸಿಕ್ತ ಘರ್ಷಣೆ ನಡೆಯಿತು. ಈ ನಡುವೆ 2008 ರಲ್ಲಿ, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಹೆಸರಿನ ಶಿಯಾ ವಿರೋಧಿ ಭಯೋತ್ಪಾದಕ ಸಂಘಟನೆ ರಚಿಸಲಾಯಿತು. ಇದು ಹಿಂಸಾಚಾರವನ್ನು ಮತ್ತಷ್ಟು ಹೆಚ್ಚಿಸಿತು. ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಯುದ್ಧದಲ್ಲಿ ಸಾವಿರಾರು ಜನ ಸತ್ತರು. ಅಂತಿಮವಾಗಿ 2011ರಲ್ಲಿ ಶಾಂತಿ ಒಪ್ಪಂದಕ್ಕೆ ಬರಲಾಯಿತು. 2021ರಲ್ಲಿ ತಾಲಿಬಾನ್‌ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಾಗ ಮತ್ತೆ ಇಲ್ಲಿ ಹಿಂಸಾಚಾರ ಭುಗಿಲೆದ್ದಿತು.

Pakistan 5

ಸಮುದಾಯಗಳ ಬಲಾ-ಬಲ ಹೇಗಿದೆ?

ಪಾಕಿಸ್ತಾನದಲ್ಲಿ ಒಟ್ಟು 24.5 ಕೋಟಿ ಜನಸಂಖ್ಯೆಯಲ್ಲಿ ಸುಮಾರು 96% ರಷ್ಟು ಮುಸ್ಲಿಮರೇ ಇದ್ದಾರೆ. ಮುಸ್ಲಿಮರಲ್ಲಿ 80% ರಷ್ಟು ಸುನ್ನಿಗಳಿದ್ದಾರೆ. ಸುಮಾರು 12% ರಷ್ಟು ಶಿಯಾಗಳು ವಾಸವಾಗಿದ್ದಾರೆ. ಈ ಎರಡು ಪಂಗಡಗಳಲ್ಲದೇ ಸುಮಾರು 45 ಲಕ್ಷ ಅಹಮದೀಯರು ಈ ದೇಶದಲ್ಲಿದ್ದಾರೆ. ಧರ್ಮಾಚರಣೆ ಸಹಿತ ಅನೇಕ ವಿಚಾರಗಳಲ್ಲಿ ಈ ಪಂಗಡಗಳ ನಡುವೆ ಭಿನ್ನತೆ ಇದೆ.

ಹಲವು ಬುಡಕಟ್ಟು ಸಮುದಾಯಗಳ ನೆಲೆಯಾಗಿರುವ ಕುರ್ರಂನಲ್ಲಿ ರಕ್ತಪಾತವಾಗಲು ಸ್ಥಳೀಯರು ಮಾತ್ರ ಕಾರಣವಲ್ಲ, ವಾಸ್ತವವಾಗಿ ಸೌದಿ ಅರೇಬಿಯಾ, ಇರಾನ್‌ ಸಹ ಇಲ್ಲಿನ ಹಿಂಸಾಚಾರಕ್ಕೆ ಕಾರಣ ಅನುಮಾನಗಳು ವ್ಯಕ್ತವಾಗಿವೆ. ಇರಾನ್‌ ಶಿಯಾಗಳನ್ನು ಹೆಚ್ಚಾಗಿ ಹೊಂದಿರುವ ದೇಶವಾಗಿದ್ದು, ಸೌದಿ ಅರೇಬಿಯಾ ಸುನ್ನಿಗಳ ಬಹುಸಂಖ್ಯಾತ ರಾಷ್ಟ್ರವಾಗಿದೆ. ಪಾಕಿಸ್ತಾನದ ಸೆಂಟರ್ ಫಾರ್ ಸ್ಟ್ರಾಟೆಜಿಕ್ ಅಂಡ್ ಕಾಂಟೆಂಪರರಿ ರಿಸರ್ಚ್ ವರದಿಯು ಸೌದಿ ಅರೇಬಿಯಾ ಕುರ್ರಂನಲ್ಲಿ ಸುನ್ನಿ ಉಗ್ರಗಾಮಿ ಸಂಘಟನೆಗಳನ್ನು ಹಾಗೂ ಇರಾನ್‌ ಶಿಯಾ ಸಂಘಟನೆಗಳನ್ನು ಬೆಂಬಲಿಸುತ್ತಿದೆ. ತಾಲಿಬಾನ್ ಬೆಂಬಲಿತ ಸಂಘಟನೆಗಳ ವಿರುದ್ಧ ಹೋರಾಡಲು ಜೈನ್ಬಿಯುನ್ ಬ್ರಿಗೇಡ್ ಎಂಬ ಹೆಸರಿನ ಸಂಘಟನೆಯನ್ನು ಇರಾನ್ ಇಲ್ಲಿ ಸ್ಥಾಪಿಸಿದೆ. ಪಾಕಿಸ್ತಾನ ಸರ್ಕಾರ ಜೈನ್ಬಿಯುನ್ ಬ್ರಿಗೇಡ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಅಂಕಿ ಅಂಶಗಳ ಪ್ರಕಾರ 2007 ಮತ್ತು 2011ರ ನಡುವೆ ಕುರ್ರಂನಲ್ಲಿ ನಡೆದ ಶಿಯಾ-ಸುನ್ನಿಗಳ ನಡುವಿನ ದಂಗೆಗಳಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 5 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡರು, 10 ಸಾವಿರಕ್ಕೂ ಹೆಚ್ಚು ಮಂದಿ ಆ ಪ್ರದೇಶದಿಂದಲೇ ಕಾಲ್ಕಿತ್ತರು ಎಂದು ಹೇಳಲಾಗಿದೆ.

Pakistan 6

ಇತರ ಪಂಗಡಗಳಿಗೂ ನೆಮ್ಮದಿ ಇಲ್ಲ!

ಪಾಕಿಸ್ತಾನದಲ್ಲಿ ಶಿಯಾ- ಸುನ್ನಿಗಳ ಹೊರತಾಗಿ ಅಹಮದೀಯರು, ಇಸ್ಮಾಯಿಲಿ, ಬಹುರಾ, ಜೈದಿ, ಸೂಫಿ ಪಂಥ ಸಹಿತ ಇನ್ನಿತರ ಪಂಗಡಗಳು ಇವೆ. ಆದರೆ, ಇವರೆಲ್ಲ ತೀರಾ ಚಿಕ್ಕ ಸಮುದಾಯ ಆಗಿರುವ ಕಾರಣ ಇವರ ಏಳಿಗೆಯನ್ನು ಅಲ್ಲಿನ ಬಹುಸಂಖ್ಯಾತರು ಸಹಿಸುತ್ತಿಲ್ಲ. ಬಹುತೇಕ ಈ ಚಿಕ್ಕ ಸಮುದಾಯವನ್ನು ಗುರಿಯಾಗಿಸಿಯೇ ಭಯೋತ್ಪಾದನಾ ದಾಳಿಗಳು ನಡೆಯುತ್ತಿದ್ದು, ರಕ್ತಸಿಕ್ತ ಅಧ್ಯಾಯದಿಂದ ಈ ಪಂಗಡಗಳು ನಲುಗಿ ಹೋಗಿವೆ.

pakistan air pollution 1

ಅಹಮದೀಯರಿಗೇಕೆ ನೆಲೆ ಇಲ್ಲ?

ಪಾಕಿಸ್ತಾನದಲ್ಲಿ ಸುನ್ನಿ ಮತ್ತು ಶಿಯಾಗಳ ನಡುವೆ ಇನ್ನೊಂದು ಮುಸ್ಲಿಂ ಪಂಗಡ ವಾಸಿಸುತ್ತಿದೆ. ಅದುವೇ ಅಹಮ್ಮದೀಯ ಸಮುದಾಯ. ಆದರೆ, ಪಾಕಿಸ್ತಾನದಲ್ಲಿ ಸದ್ಯ ಅವರಿಗೆ ನೆಲೆಯೇ ಇಲ್ಲದ ಸ್ಥಿತಿ ಇದೆ. ಅಹಮದೀಯ ಪಂಥದವರು ತಮ್ಮನ್ನು ತಾವು ಮುಸ್ಲಿಂ ಎಂದು ಕರೆದುಕೊಳ್ಳುತ್ತಾರೆ. ಆದರೆ, ಅವರನ್ನು ಪಾಕಿಸ್ತಾನದ ಸಂವಿಧಾನದ ಅಡಿಯಲ್ಲಿ 1974ರಲ್ಲಿ ʻಮುಸ್ಲಿಮೇತರರು’ ಎಂದು ಘೋಷಿಸಲಾಯಿತು. ಪಂಜಾಬ್ ಪ್ರಾಂತ್ಯದಲ್ಲಿ ಇವರ ಸಂಖ್ಯೆ ಹೆಚ್ಚಾಗಿದೆ. ಧಾರ್ಮಿಕ ವಿಚಾರವಾಗಿ ಇವರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ಅವರಿಗೆ ಸೇರಿದ ಧಾರ್ಮಿಕ ಸ್ಥಳಗಳು ಮತ್ತು ಖಬರಸ್ಥಾನಗಳನ್ನು (ಸ್ಮಶಾನ) ನಾಶ ಮಾಡಲಾಗಿದೆ. ಪಾಕಿಸ್ತಾನದಲ್ಲಿ 1985ರಲ್ಲಿ ವಿವಿಧ ಧಾರ್ಮಿಕ ಗುಂಪುಗಳಿಗೆ ಪ್ರತ್ಯೇಕ ಮತದಾರರ ಪಟ್ಟಿಯನ್ನು ಪರಿಚಯಿಸಲಾಯಿತು. ಇದರಲ್ಲಿ ಅಹಮ್ಮದೀಯರನ್ನೂ ಸೇರಿಸಲಾಯಿತು. ಇದು ಅಹಮ್ಮದೀಯರನ್ನು ಕೆರಳಿಸಿದ್ದು, ಇಂದಿಗೂ ಅವರು ಪೂರ್ಣ ಪ್ರಮಾಣದಲ್ಲಿ ಅಲ್ಲಿನ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸದೆ ದೂರವೇ ಉಳಿದಿದ್ದಾರೆ ಎನ್ನುತ್ತವೆ ವರದಿಗಳು.

Pakistan 7

WTC ದಾಳಿಯೂ ಸಂಘರ್ಷಕ್ಕೆ ಕಾರಣವಾಗಿದ್ದು ಹೇಗೆ?

ಅಮೆರಿಕದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ 2001ರ ಸೆ.11ರಂದು ತಾಲಿಬಾನಿಗಳು ದಾಳಿ ನಡೆಸಿದ ಬಳಿಕ ಅಮೆರಿಕದಿಂದ ಲಕ್ಷಾಂತರ ಮಂದಿ ಸುನ್ನಿ ಸಮುದಾಯದವರನ್ನು ಓಡಿಸಲಾಯಿತು. ಅವರು ನೆಲೆ ಇಲ್ಲದೇ ಬೇರೆ-ಬೇರೆ ದೇಶಗಳಿಗೆ ಹೋಗಿ ಆಶ್ರಯ ಪಡೆದರು. ಪಾಕಿಸ್ತಾನಕ್ಕೂ ಲಕ್ಷಾಂತರ ಸುನ್ನಿಗಳು ವಲಸೆ ಹೋದರು. ಅವರಿಗೆ ಪುನರ್ವಸತಿ ಕಲ್ಪಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿತ್ತು. ಈ ಹಂತದಲ್ಲಿ ಪಾಕಿಸ್ತಾನದ ಅಂದಿನ ಸರ್ಕಾರ ಖೈಬ‌ರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆಶ್ರಯ ಕಲ್ಪಿಸಲು ಮುಂದಾಗಿತ್ತು. ಆದ್ರೆ, ಆ ಪ್ರಾಂತ್ಯದಲ್ಲಿ ಬಹುಸಂಖ್ಯಾತರಾಗಿದ್ದ ಶಿಯಾ ಸಮುದಾಯ ಸುನ್ನಿಗಳಿಗೆ ಆಶ್ರಯ ನೀಡುವುದನ್ನು ವಿರೋಧಿಸಿತು. ಇಲ್ಲಿಂದ ಸಂಘರ್ಷ ತಾರಕಕ್ಕೇರಿತು.

TAGGED:afghanistanKhyber PakhtunkhwapakistaShia Sunni DisputeUSAviolenceಖೈಬರ್‌ ಪಖ್ತುಂಖ್ವಾಪಾಕಿಸ್ತಾನಮುಸ್ಲಿಮರುಶಿಯಾಸುನ್ನಿ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Andhra Pradesh Man Kills Daughter For Marrying Lover Cop Suspended For Hiding Murder
Crime

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ –  ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

Public TV
By Public TV
5 minutes ago
HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
17 minutes ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
1 hour ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
2 hours ago
Tumakuru Sira KSRTC Private Bus Accident
Crime

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Public TV
By Public TV
2 hours ago
Ballri Municipal CorporationEngineer Veeresh
Bellary

ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?