Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

Bengaluru City

ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

Public TV
Last updated: December 26, 2024 6:04 pm
Public TV
Share
2 Min Read
BLR Hubba 2024
SHARE

ಬೆಂಗಳೂರು: ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ (Bengaluru) ಪರಂಪರೆಯನ್ನು ಸಾರುವ ‘ಬಿಎಲ್‌ಆರ್‌ ಹಬ್ಬ’ (BLR Hubba 2024) ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆ ಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್‌ಆರ್‌ ಹಬ್ಬ 16 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಸಾರುವ ಹಾಗೂ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಿತು.

BLR Hubba Celebration

ಈ 16 ದಿನಗಳ ಬಿಎಲ್‌ಆರ್‌ ಹಬ್ಬದಲ್ಲಿ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ವಿಶೇಷ. ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯಲ್ಲಿರುವ ಸಭಾ ಮತ್ತು ಎನ್‌ಜಿಎಂಎ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದರಲ್ಲಿ ಹೆಸರಾಂತ ಕಲಾವಿದರ ಸಂಗೀತ ಕಚೇರಿಗಳು, ನಾಟಕ ಪ್ರದರ್ಶನ, ಜಾನಪದ ಕಲೆ ಪ್ರದರ್ಶನ, ಸಾಹಿತ್ಯ ಕಾರ್ಯಕ್ರಮಗಳು, ಕುವೆಂಪು ಅವರ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಗಲ-ಗಲ-ಗದ್ದಲ ಸೇರಿದಂತೆ 500ಕ್ಕೂ ಅಧಿಕ ಕಾರ್ಯಕ್ರಮಗಳು ಈ ಅವಧಿಯಲ್ಲಿ ಯಶಸ್ವಿಯಾಗಿ ನಡೆದಿವೆ. ಅಷ್ಟೆ ಅಲ್ಲದೆ, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ “ಬೆಂಗಳೂರು ಚಾಲೆಂಜ್‌” ಸ್ಪರ್ಧೆಯು ಹೆಚ್ಚು ಆಕರ್ಷಣೀಯವಾಗಿತ್ತು. ಜೊತೆಗೆ, ‘ಬಿಎಲ್‌ಆರ್‌ ಗೋಡೆ’ ಉಪಕ್ರಮದ ಮೂಲಕ ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ ಮೂಡಿಸುವ ಸರಣಿ ನಡೆಯಿತು. ಹೆಚ್ಚುವರಿಯಾಗಿ, ನಿಮ್ಮ ಉದ್ಯಾನವನದಲ್ಲಿ ಹಬ್ಬ, ರಿಚ್ಮಂಡ್ ರೋಡ್ ಮತ್ತು ಇತರವುಗಳನ್ನು ಒಳಗೊಂಡಂತೆ ಐದು ಪ್ರಮುಖ ಸ್ಥಳಗಳಲ್ಲಿ ಹಬ್ಬಗಳನ್ನು ವಿಭಿನ್ನವಾಗಿ ಆಚರಿಸಲಾಯಿತು. ಇದನ್ನೂ ಓದಿ: ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ಹಾಲು – 5 ರೂ. ದರ ಹೆಚ್ಚಳ ಆಗುತ್ತಾ?

BLR Hubba

ಬಿಎಲ್‌ಆರ್ ಹಬ್ಬ -2024 ಯಶಸ್ವಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಬಿಎಲ್‌ಆರ್ ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ಹೇಳಿದರು. ಈ ಹಬ್ಬವು ಬೆಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಹಾಗೂ ಎಲ್ಲಾ ಸಮುದಾಯವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಿದ್ದು ಸಂತಸ ತಂದಿದೆ. ಸ್ವಯಂ ಸೇವಕರ ಸಹಕಾರದಿಂದ ಯಾವುದೇ ಅಡೆತಡೆ ಇಲ್ಲದೇ ಬಿಎಲ್‌ಆರ್‌ ಹಬ್ಬ ಯಶಸ್ವಿಯಾಗಿ ನಡೆದಿದ್ದು, ಬೆಂಗಳೂರಿನ ನೈಜ ಪರಂಪರೆಯನ್ನು ಜಾಗತಿಕವಾಗಿಯೂ ಪ್ರಚೂರ ಪಡಿಸಿದೆ. ಈ ಹಬ್ಬವನ್ನು ಇನ್ನಷ್ಟು ಪ್ರಭಾವಶಾಲಿಯಾಗಿಸಲು ಎಲ್ಲಾ ರೀತಿಯ ಕಲಾವಿದರ ಸಹಕಾರ ಪ್ರಶಂಸನೀಯ. ಇನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೂ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು. ಒಟ್ಟಾರೆ ಬಿಎಲ್‌ಆರ್‌ ಹಬ್ಬ ಎರಡನೇ ಆವೃತ್ತಿಯೂ ತೆರೆ ಕಂಡಿದ್ದು, ಇದರ ಭಾಗವಾದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು.

BLR Hubba Art

ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಫೌಂಡೇಶನ್‌ನ ಸಹ-ಸಂಸ್ಥಾಪಕಿ ಮಾಲಿನಿ ಗೋಯಲ್ ಮಾತನಾಡಿ, ಬಿಎಲ್‌ಆರ್‌ ಹಬ್ಬ ಬೆಂಗಳೂರಿನ ಶ್ರೀಮಂತ ವೈವಿಧ್ಯತೆ, ಸೃಜನಶೀಲತೆ, ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿಯುತ್ತದೆ. ನಮ್ಮ ದೃಷ್ಟಿ ನಗರದ ಸಾಂಪ್ರದಾಯಿಕ ಪರಂಪರೆಯನ್ನು ಅದರ ಆಧುನಿಕ ಗುರುತಿನೊಂದಿಗೆ ಸುಂದರವಾಗಿ ಜೋಡಿಸುವ ಈ ಹಬ್ಬವು ನಮ್ಮೆಲ್ಲರನ್ನೂ ಮನಸೂರೆಗೊಳಿಸಿತು. ಪ್ರತಿಯೊಬ್ಬರೂ ಬಿಎಲ್‌ಆರ್‌ ಹಬ್ಬದಲ್ಲಿ ಪಾಲ್ಗೊಂಡು ನಮ್ಮ ಸಾಂಸ್ಕೃತಿಕ ಅನುಭವವನ್ನು ಪಡೆದುಕೊಂಡಿರುವುದು ಸಂತಸ. ನಗರದ ವಿಶಿಷ್ಟ ಚೈತನ್ಯವನ್ನು ಆಚರಿಸಲು ಒಗ್ಗೂಡಿದ ಬೆಂಗಳೂರಿನ ಜನರಿಗೆ ಅಭಿನಂದನೆಗಳು ಎಂದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

ಬಿಎಲ್‌ಆರ್‌ ಹಬ್ಬದ ಮೂಲಕ ಬೆಂಗಳೂರನ್ನು ದಕ್ಷಿಣ ಏಷ್ಯಾದಲ್ಲಿಯೇ ಸಾಂಸ್ಕೃತಿಕ ಕೇಂದ್ರವನ್ನಾಗಿ ಗುರುತಿಸಿ ಪ್ರವಾಸಿಗರನ್ನು ಇತ್ತ ಆಕರ್ಷಿಸುವುದು ಹಾಗೂ ಸ್ಥಳೀಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದು ನಮ್ಮ ಆದ್ಯತೆ. ಜೊತೆಗೆ, ಬೆಂಗಳೂರನ್ನು ಜಾಗತಿಕ ನಕ್ಷೆಯಲ್ಲಿ ಸಾಂಸ್ಕೃತಿಕ ಕೇಂದ್ರಬಿಂದುವಾಗಿ ಗುರುತಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

TAGGED:bengaluruBLR Hubba 2024ಬಿಎಲ್‌ಆರ್‌ ಹಬ್ಬಬೆಂಗಳೂರು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
18 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
25 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
1 hour ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?