Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೋರ್ಡ್ ಪರೀಕ್ಷೆ ಗೊಂದಲ; ಶಿಕ್ಷಣ ತಜ್ಞರ ಸಭೆ ಕರೆಯಲು ಎನ್.ರವಿಕುಮಾರ್ ಆಗ್ರಹ

Public TV
Last updated: March 10, 2024 5:01 pm
Public TV
Share
3 Min Read
N. Ravikumar
SHARE

ಬೆಂಗಳೂರು: ಗರಿಷ್ಠ ಸಂಖ್ಯೆಯ ಪರೀಕ್ಷೆಗಳು, ಸ್ಪಷ್ಟ ನೀತಿ ಇಲ್ಲದೆ ಇರುವುದನ್ನು ಚರ್ಚೆ ಮಾಡಲು ಶಿಕ್ಷಣ ತಜ್ಞರ ಸಭೆ ಕರೆಯಬೇಕೆಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ (N. Ravikumar) ಆಗ್ರಹಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಉತ್ತರಪತ್ರಿಕೆ ಕೊಡಲಾಗದಷ್ಟು ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆಯೇ ಎಂದು ರಾಜ್ಯ ಶಿಕ್ಷಣ ಸಚಿವರಿಗೆ ಪ್ರಶ್ನಿಸಿದ್ದಾರೆ. 8ರಿಂದ 8.5 ಲಕ್ಷ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನೀವು ಪ್ರಿಪರೇಟರಿ ಪರೀಕ್ಷೆ ನಡೆಸಲು 50 ರೂ. ಸಂಗ್ರಹಿಸಿ ಪ್ರಶ್ನೆಪತ್ರಿಕೆ ನೀಡುವುದಾದರೆ, ಉತ್ತರ ಪತ್ರಿಕೆ ನೀವೇ ತರಬೇಕು ಎನ್ನುವುದಾದರೆ ಸರ್ಕಾರ ಯಾವ ಅಧೋಗತಿಗೆ ತಲುಪಿದೆ? ಇದು ಬಹಳ ನೋವಿನ ವಿಚಾರ. ಶಿಕ್ಷಣದ ಕುರಿತ ಕಳಕಳಿಯಿಂದ ಇದನ್ನು ಬಿಜೆಪಿ ಪ್ರಶ್ನಿಸುತ್ತಿದೆ ಎಂದಿದ್ದಾರೆ.

11 ಮತ್ತು 12ನೇ ತರಗತಿಗೆ ಎರಡೆರಡು ಸಪ್ಲಿಮೆಂಟರಿ ಪರೀಕ್ಷೆ ನಡೆಸಲು ಸರ್ಕಾರ ಅಸ್ತು ಎಂದಿದೆ. ಎಸ್‍ಎಸ್‍ಎಲ್‍ಸಿ (SSLC) ಪ್ರಿಪರೇಟರಿ ಪರೀಕ್ಷೆ ನಡೆಸಲು ಸರ್ಕಾರ ಹಣ ಕೊಡುತ್ತಿಲ್ಲ. ವಿದ್ಯಾರ್ಥಿಗಳ ಬಳಿ ಹಣ ಸಂಗ್ರಹಿಸಿ, ಕೇವಲ ಪ್ರಶ್ನೆಪತ್ರಿಕೆ ಕೊಡುವುದಾಗಿ ಹೇಳುತ್ತಾರೆ. ಉತ್ತರ ಪತ್ರಿಕೆ ನೀಡುವುದಿಲ್ಲ ಎಂದಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿ 2 ವರ್ಷದಲ್ಲಿ ಪೂರ್ಣ – ಜೋಶಿ ವಿಶ್ವಾಸ

ಹಳ್ಳಿಯಿಂದ ಸಣ್ಣಪುಟ್ಟ ಪಟ್ಟಣಕ್ಕೆ ಬರಲು 90% ಶಿಕ್ಷಕವರ್ಗ ಬಸ್ಸನ್ನೇ ಆಶ್ರಯಿಸಿದೆ. ಉಚಿತ ಬಸ್‍ಗಳಿಂದಾಗಿ ಬಸ್‍ಗಳು ಲಭ್ಯವಿಲ್ಲ. ಬಸ್ಸುಗಳು ಕಡಿಮೆಯಾಗಿವೆ. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳೂ ತಡವಾಗಿ ಬರುವಂತಾಗಿದೆ. ಉಚಿತ ಪ್ರಯಾಣದ ನಂತರ ಅರ್ಧಕ್ಕರ್ಧ ಬಸ್ ಕಡಿಮೆಯಾಗಿದೆ. ಬೆಳಿಗ್ಗೆ 10ಕ್ಕೆ ಶಾಲೆ ತೆರೆದರೆ 11, 12 ಗಂಟೆಗೆ ವಿದ್ಯಾರ್ಥಿಗಳು ಬರುವಂತಾಗಿದೆ. ಶಿಕ್ಷಕರೂ ಶಾಲೆಗೆ ಸಕಾಲದಲ್ಲಿ ಬರಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಶಾಲೆಗಳಲ್ಲಿ ಮೂಲಸೌಕರ್ಯವಿಲ್ಲ, ಕುಡಿಯುವ ನೀರಿನ ಸೌಲಭ್ಯ ಇಲ್ಲ. ಶೌಚಾಲಯ ಸೌಕರ್ಯ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾದ ವಿವೇಕ ಕೊಠಡಿಗಳನ್ನು ರದ್ದು ಮಾಡಿದ್ದಾರೆ. 13- 14 ಸಾವಿರ ಕೊಠಡಿ ನಿರ್ಮಾಣಕ್ಕೆ ಬೊಮ್ಮಾಯಿಯವರ ಕಾಲದಲ್ಲಿ ಬಿಜೆಪಿ ಸರ್ಕಾರ ನಿರ್ಣಯಿಸಿತ್ತು. ಅದನ್ನು ರದ್ದು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜಕಾರಣದ ಕಾಳಜಿ ವಹಿಸುವ ಮಧು ಬಂಗಾರಪ್ಪ (Madhu Bangarappa) ಅವರು, ಶಿಕ್ಷಣದ ಬಗ್ಗೆ ಕಾಳಜಿ ವಹಿಸದೆ ರಾಜಕಾರಣದಲ್ಲಿ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಸಚಿವರು, ಬೋರ್ಡ್ ಪರೀಕ್ಷೆ, ಗರಿಷ್ಠ ಸಂಖ್ಯೆ ಪರೀಕ್ಷೆ ಬೇಡವೆನ್ನುವ ಸರ್ಕಾರವೇ ಅತಿ ಹೆಚ್ಚು ಪರೀಕ್ಷೆ ನಡೆಸುತ್ತಿರುವುದು. ರಾಜ್ಯ ಪಠ್ಯಕ್ರಮ, ಕೇಂದ್ರೀಯ ಪಠ್ಯಕ್ರಮದ ಸಂಬಂಧ ಅನೇಕ ಶಿಕ್ಷಣ ಸಂಸ್ಥೆಗಳಿಂದ ಗೊಂದಲಮಯ ನಿರ್ಧಾರ ಕುರಿತಂತೆ ಪೋಷಕರು, ಶಿಕ್ಷಣ ತಜ್ಞರ ಸಭೆ ನಡೆಸಬೇಕು. ಸಂಘಟನೆಗಳು, ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರನ್ನೂ ಈ ಸಭೆಗೆ ಆಹ್ವಾನಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 5ನೇ ತರಗತಿಯಿಂದ 11ನೇ ತರಗತಿ ವರೆಗೆ ನಡೆಯುತ್ತಿರುವ ಪರೀಕ್ಷೆ ವಿಚಾರದಲ್ಲಿ ಬಹಳಷ್ಟು ಚರ್ಚೆ ನಡೆಯುತ್ತಿದೆ. ಈ ಗೊಂದಲಕ್ಕೆ ಹೈಕೋರ್ಟ್ (High Court) ತೆರೆ ಎಳೆದಿದೆ. ಏಕಸದಸ್ಯ ಪೀಠವು ಬೋರ್ಡ್ ಪರೀಕ್ಷೆ ಬೇಡ ಎಂದಿದ್ದರೆ, ದ್ವಿಸದಸ್ಯ ಪೀಠವು ಬೋರ್ಡ್ ಪರೀಕ್ಷೆ ನಡೆಸಿ ಎಂದು ತೀರ್ಪು ನೀಡಿದೆ. ಇಂಥ ಸಂದರ್ಭದಲ್ಲಿ ಪೋಷಕರು, ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರ ನಡೆಸುವ ಬೋರ್ಡ್ ಪರೀಕ್ಷೆ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಫೇಲ್ ಆಗುವ ಭಯ ಇದೆ. ಈ ಗೊಂದಲ, ಭಯ ನಿವಾರಿಸುವ ದೃಷ್ಟಿಯಿಂದ ರಾಜ್ಯದ ಶಿಕ್ಷಣ ತಜ್ಞರ ಸಭೆಯನ್ನು ಕೂಡಲೇ ಕರೆಯಬೇಕೆಂದು ಅವರು ಬಿಜೆಪಿ ಪರವಾಗಿ ಆಗ್ರಹಿಸಿದ್ದಾರೆ.

ಎಳೆಯ ಮಕ್ಕಳ ಮನಸ್ಸಿನಲ್ಲಿ ಅನುತ್ತೀರ್ಣರಾದರೆ, ನಪಾಸ್ ಆದರೆ, ನಾನು ಇನ್ನು ಶಾಲೆಗೆ ಹೋಗುವಂತಿಲ್ಲ. ನಾನು ಅಸಮರ್ಥ ಎಂಬ ಭಾವನೆ ಬರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ 8ನೇ ತರಗತಿವರೆಗೆ ನಪಾಸ್ ಮಾಡಬಾರದೆಂದು ಸರ್ಕಾರ ನಿಯಮ ರೂಪಿಸಿದೆ. ಇದನ್ನು ಸ್ವಾಗತಿಸುತ್ತೇವೆ. ಈಗ 5, 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಲ್ಲಿ ಗೊಂದಲ ಇದೆ. ಶಿಕ್ಷಣ ಎಂದರೆ ಕೇವಲ ಪರೀಕ್ಷೆ ಅಲ್ಲ ಎಂದು ಸರ್ಕಾರ ಒಂದೆಡೆ ಹೇಳುತ್ತದೆ. ಮಾಸಿಕ, ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿ ಪ್ರಿಪರೇಟರಿ ಸೇರಿ ಹಲವು ಪರೀಕ್ಷೆ ನಡೆಸುವುದನ್ನು ಸರ್ಕಾರ ಬೇಡ ಎನ್ನುತ್ತದೆ. ಒಂದು ಕಡೆ ಬಹುಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: Lok Sabha 2024: ಬೀದರ್‌ನಲ್ಲಿ ಬಿಜೆಪಿಗೆ ಮೈತ್ರಿ ಬಲ?- ಕಾಂಗ್ರೆಸ್‌ಗೆ ವರವಾಗುತ್ತಾ ‘ಕಮಲ’ ಟಿಕೆಟ್ ಒಳಜಗಳ?

TAGGED:bjpcongressDepartment Of School Educationhigh courtmadhu bangarappaN.RavikumarSSLCಎನ್.ರವಿಕುಮಾರ್ಕಾಂಗ್ರೆಸ್ಬಿಜೆಪಿಬೋರ್ಡ್ ಪರೀಕ್ಷೆಮಧು ಬಂಗಾರಪ್ಪಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
20 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

UP Dead
Crime

ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವು

Public TV
By Public TV
39 minutes ago
PRIYANK KHARGE
Bengaluru City

ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತೆ: ಪ್ರಿಯಾಂಕ್ ಖರ್ಗೆ

Public TV
By Public TV
2 hours ago
Parameshwara
Bengaluru City

Stampede Case | ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ – ಪರಮೇಶ್ವರ್

Public TV
By Public TV
2 hours ago
DK Shivakumar 2 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

Public TV
By Public TV
2 hours ago
Parameshwar
Bengaluru City

ಕ್ರಿಕೆಟ್ ಇತಿಹಾಸದಲ್ಲೇ ಇಂತಹ ಘಟನೆ ಆಗಿರಲಿಲ್ಲ: ಪರಮೇಶ್ವರ್

Public TV
By Public TV
3 hours ago
Karwar Akshatha copy
Bengaluru City

ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?