ಮಲೇಷ್ಯಾದಲ್ಲಿ ದೋಣಿ ಅಪಘಾತ: ನಟ ವಿಜಯ್ ಆಂಟನಿ ಚಿಕಿತ್ಸೆಗೆ ಸ್ಪಂದನೆ

Public TV
2 Min Read
Vijay Antony 4

ಪಿಚ್ಚೈಕಾರನ್ 2 (Picchaikaran 2) ಸಿನಿಮಾದ ಶೂಟಿಂಗ್ ವೇಳೆ ದೋಣಿ (boat) ಅಪಘಾತದಲ್ಲಿ (accident) ತೀವ್ರ ಗಾಯಗೊಂಡಿದ್ದ ತಮಿಳಿನ ಖ್ಯಾತ ನಟ ವಿಜಯ್ ಆಂಟನಿ (Vijay Antony) ಸ್ಥಿತಿ ಗಂಭೀರ ಎಂದು ಹೇಳಲಾಗಿತ್ತು. ಅವರನ್ನು ಮಲೇಷ್ಯಾದಿಂದ ಚೆನ್ನೈಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ವಿಜಯ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದೂ ಹೇಳಿದ್ದಾರೆ.

Vijay Antony 2

‘ಪಿಚ್ಚೈಕಾರನ್ 2’ ಸಿನಿಮಾದ ಶೂಟಿಂಗ್ ದೋಣಿಯೊಂದರಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ದೃಶ್ಯದಲ್ಲಿ ದೋಣಿ ಅಪಘಾತಕ್ಕೀಡಾಗಿತ್ತು. ಕೂಡಲೇ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿತ್ರೀಕರಣದಲ್ಲಿ ಭಾಗಿಯಾಗಿದ್ದವರ ಹೇಳಿಕೆಯ ಪ್ರಕಾರ, ‘ಸಮುದ್ರ ಮಧ್ಯ ದೋಣಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಒಂದು ದೋಣಿ ಮತ್ತೊಂದು ದೋಣಿಯನ್ನು ಅಟ್ಟಿಸಿಕೊಂಡು ಬರುವ ದೃಶ್ಯ ಅದಾಗಿತ್ತು. ರಭಸವಾಗಿ ದೋಣಿಗಳು ಬರುವ ವೇಳೆಯಲ್ಲಿ ಒಂದು ದೋಣಿ ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ `ಸತ್ಯ’ ಸೀರಿಯಲ್ ಖ್ಯಾತಿಯ ಸಾಗರ್- ಸಿರಿ ರಾಜು

Vijay Antony 1

ಮಲೇಷ್ಯಾದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿತ್ತು. ಅಲ್ಲದೇ, ಅವರನ್ನು ಚೆನ್ನೈಗೆ ಕರೆತರುವ ಕುರಿತು ಪತ್ನಿ ಫಾತಿಮಾ ಹೇಳಿಕೆ ನೀಡಿದ್ದರು. ಅದರಂತೆ ಚೆನ್ನೈಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊದಲು ಸ್ಥಿತಿ ಚಿಂತಾಜನಕವಾಗಿದ್ದರಿಂದ ವಿಜಯ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದರು.

Vijay Antony 3

ಅಪಘಾತದ ರಭಸಕ್ಕೆ ವಿಜಯ್ ಅವರ ಹಲ್ಲು ಮತ್ತು ದವಡೆಗೆ ತೀವ್ರತರಹದ ಪೆಟ್ಟು ಬಿದ್ದಿದೆ. ಮೂಳೆಗಳು ಮುರಿದಿವೆ ಎಂದು ಹೇಳಲಾಗುತ್ತಿದೆ. ಮಲೇಷ್ಯಾದ ಆಸ್ಪತ್ರೆಯಲ್ಲಿ ವಿಜಯ್ ಇರುವಾಗ ಪ್ರಜ್ಞಾಹೀನರಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅವರಿಗೆ ಪ್ರಜ್ಞೆ ಕೂಡ ಬಂದಿದೆ. ಪಿಚ್ಚೈಕಾರನ್ 2 ಸಿನಿಮಾವನ್ನು ಬೇಸಿಗೆಯಲ್ಲಿ ಬಿಡುಗಡೆ ಮಾಡುವುದಾಗಿ ಮೊನ್ನೆಯಷ್ಟೇ ಘೋಷಿಸಿ ಅವರು ಚಿತ್ರೀಕರಣದಲ್ಲಿ ತೊಡಗಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *