ಕಾರವಾರ: ಸಮುದ್ರದಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ದೋಣಿಯೊಂದು ಅಲೆಗಳ ರಭಸಕ್ಕೆ ದಡಕ್ಕೆ ಬಂದು ಅಪ್ಪಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ನಗರದ ಬೈತಖೋಲ ಬಂದರು ಪ್ರದೇಶದ ಅಲಿಗದ್ದಾ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ವಾಸ್ಕೋ ಮೂಲದ ಬೋಟ್ ಹಗ್ಗ ತುಂಡಾದ ಪರಿಣಾಮ ದೋಣಿ ದಡಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಬೋಟಿನಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ತಡರಾತ್ರಿ ಗಾಳಿಯ ರಭಸ ಹೆಚ್ಚಿದ್ದಿದ್ದರಿಂದಲೇ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ತೂಫಾನ್ ಉಂಟಾಗಿದ್ದು, ಕಾರವಾರ ಬಂದರು ಪ್ರದೇಶದಲ್ಲಿ ಮಂಗಳೂರು, ಉಡುಪಿ, ಗೋವಾ ಹಾಗೂ ತಮಿಳುನಾಡು ಭಾಗದ ಮೀನುಗಾರಿಕಾ ದೋಣಿಗಳು ಲಂಗರು ಹಾಕಿ ನಿಂತಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv