ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರು ತಮ್ಮ ಮಕ್ಕಳೊಂದಿಗೆ ಜಲಕ್ರೀಡೆಯಲ್ಲಿ ಭಾಗಿಯಾಗಿದ್ದಾಗ ಬೋಟ್ ನಿಂದ ಬಿದ್ದು ಸಮುದ್ರದಲ್ಲಿ ಸಿಲುಕಿದ್ದ ನಾಲ್ಕು ಜನ ಮಕ್ಕಳು ಸೇರಿ ಆರು ಜನ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಕುಟುಂಬ ಸಮೇತರಾಗಿ ಬಂದಿದ್ದ ಪ್ರವಾಸಿಗರು ಕಾರವಾರ ಕಡಲತೀರದಲ್ಲಿ ಡ್ರೈವಿನ್ ಜಲಸಾಹಸ ಕ್ರೀಡೆಯ ಬೋಟ್ ಹತ್ತಿದ್ದರು. ಈ ವೇಳೆ ಸಮುದ್ರದಲ್ಲಿ ಬೋಟ್ ಮಗುಚಿ ಮಕ್ಕಳ ಸಮೇತ ಸಮುದ್ರಕ್ಕೆ ಬಿದ್ದಿದ್ದಾರೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್
ಅಲ್ಲಿದ್ದ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ನಾಲ್ಕು ಜನ ಮಕ್ಕಳು ಸೇರಿ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮಹಿಳೆ ಮೇಲೆ ಆಟೋ ಚಾಲಕ ಸೇರಿದಂತೆ ಮೂವರಿಂದ ಸಾಮೂಹಿಕ ಅತ್ಯಾಚಾರ