ಬೆಳಗಾವಿ: ಆಯತಪ್ಪಿ ಬೈಕ್ ಮೇಲಿಂದ ಬಿದ್ದು ಇಬ್ಬರು ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳನ್ನು ಎಸ್ಡಿಆರ್ಎಫ್ (SDRF) ತಂಡದ ಸಿಬ್ಬಂದಿ ಹೊರತೆಗೆದಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನ ಅವರಾದಿ ಗ್ರಾಮದ ಬಳಿಯ ಘಟಪ್ರಭಾ ನದಿ ಸೇತುವೆ ದಾಟುವ ಸಂದರ್ಭ ಆಯತಪ್ಪಿ ಇಬ್ಬರು ಸವಾರರು ನದಿಗೆ ಬಿದ್ದಿದ್ದರು. ಚನ್ನಪ್ಪ ಹರಿಜನ (38), ದುರ್ಗಾಣಿ ಹರಿಜನ (35) ಮೃತ ದುರ್ದೈವಿಗಳಾಗಿದ್ದು, ನದಿಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ
ಕೆಲಸದ ನಿಮಿತ್ತ ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ (Mahalingapura) ತೆರಳುತ್ತಿದ್ದಾಗ ಘಟನೆ ನಡೆದಿತ್ತು. ನಿರಂತರ ಕಾರ್ಯಾಚರಣೆ ನಡೆಸಿ ಮಂಗಳವಾರ ಚನ್ನಪ್ಪ ಹರಿಜನ ಮೃತದೇಹ ಎಸ್ಡಿಆರ್ಎಫ್ ತಂಡದ ಸಿಬ್ಬಂದಿ ಹೊರತೆಗೆದಿದ್ದರು. ಇಂದು ಮುಂಜಾನೆಯೇ ನದಿಗಿಳಿದು ಕಾರ್ಯಾಚರಣೆ ನಡೆಸಿ ದುರ್ಗಾಣಿ ಅವರ ಮೃತದೇಹವನ್ನೂ ಹೊರತೆಗೆದಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಡಬಲ್ ಮರ್ಡರ್!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]