ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾರ್ಢ್ಯ ಪಟು (Body Builder) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೆ ಆರ್ ಪುರಂ (K R Puram) ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಕೈಗೆ ಗಾಜು ಚುಚ್ಚಿ ನರ ಕಟ್- ಸರ್ಜರಿ ಬಳಿಕ ಯುವಕ ಸಾವು, ಆರೋಪ
ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.
ಇದೀಗ ಶ್ರೀನಾಥ್ ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆ (Avalahalli Police Station) ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಕೃತ್ಯಕ್ಕೆ ಹಿಜಬ್ ಲಿಂಕ್ – ಸಹೋದರಿಗೆ ಕಾಟ ಕೊಟ್ಟಿದ್ದಕ್ಕೆ ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k