ಕಾರವಾರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊರ್ವನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಅಮದಳ್ಳಿ ಗ್ರಾಮದ 35 ವರ್ಷದ ಸಂತೋಷ್ ಮೃತಪಟ್ಟ ದುರ್ದೈವಿ. ಕಾರವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅಮದಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ಈ ಅಪಘಾತ ನಡೆದಿದ್ದು, ಅಪಘಾತದ ದೃಶ್ಯಗಳೆಲ್ಲವೂ ಗ್ರಾಮದ ವೀರಗಣಪತಿ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಹೆದ್ದಾರಿ ದಾಟಿ ದೇವಸ್ಥಾನದ ಕಡೆಗೆ ಬರುತ್ತಿದ್ದ ವೇಳೆ ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.
- Advertisement 2
ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ದಾಟುತ್ತಿದ್ದ ಸಂತೋಷ್ ಹಾರಿ ಬಿದ್ದಿದ್ದಾರೆ. ಕೂಡಲೇ ಕಾರವಾರದ ಜಿಲ್ಲಾಸ್ಪತ್ರೆಗೆ ಸಂತೋಷ್ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಂತೋಷ್ ಇಂದು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement 3
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv