Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್

Bollywood

600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್

Public TV
Last updated: April 29, 2020 4:34 pm
Public TV
Share
2 Min Read
Irrfan Khan Cricket
SHARE

ಮುಂಬೈ: ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅತ್ಯುತ್ತಮ ನಟರಲ್ಲಿ ಒಬ್ಬರಾದ ಇರ್ಫಾನ್ ಖಾನ್ ಅವರು ತಮ್ಮ 53ನೇ ವಯಸ್ಸಿನಲ್ಲಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ನೆನೆದು ಅಭಿಮಾನಿಗಳು ಕಣ್ಣೀರಾಗಿದ್ದಾರೆ.

ಇರ್ಫಾನ್ ಖಾನ್ ಬಾಲಿವುಡ್‍ನಲ್ಲಿ ಮಹತ್ತರ ಕಾರ್ಯ ಮಾಡಿದ್ದರೂ ಅವರೊಳಗೆ ಒಬ್ಬ ಕ್ರಿಕೆಟಿಗನಿದ್ದ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಇರ್ಫಾನ್ ಖಾನ್ 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಜಗತ್ತಿನಿಂದ ಹೊರ ಬಂದಿದ್ದ ಕಥೆ ನಿಮಗೆ ಗೊತ್ತಾ?

Irrfan Khan Cricket A

ಹೌದು.. ಇರ್ಫಾನ್ 20ನೇ ವಯಸ್ಸಿನಲ್ಲಿ ಕ್ರಿಕೆಟಿಗನಾಗಬೇಕೆಂಬ ಕನಸು ಕಟ್ಟಿಕೊಂಡಿದ್ದರು. ಅದಕ್ಕೆ ತಕ್ಕಂತೆ ಅಭ್ಯಾಸ ನಡೆಸಿದ್ದ ಅವರು ಸಿಕೆ ನಾಯ್ಡು ಟ್ರೋಫಿಯಲ್ಲಿ ಆಡಲು ಆಯ್ಕೆಯಾಗಿದ್ದರು. ಆದರೆ ಹಣದ ಕೊರತೆಯಿಂದಾಗಿ ಕ್ರಿಕೆಟ್ ಕನಸಿನ ಮನೆಯಿಂದ ಹೊರ ನಡೆದು ಬಂದು ಬಿಟ್ಟರು.

ಈ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಇರ್ಫಾನ್ ಖಾನ್, “ನಾನು ಕ್ರಿಕೆಟ್ ಆಡಿದ್ದೇನೆ, ಕ್ರಿಕೆಟಿಗನಾಗಲು ಬಯಸಿದ್ದೆ. ಜೈಪುರ ತಂಡದಲ್ಲಿ ಕಿರಿಯ ಆಟಗಾರನಾಗಿದ್ದ ನಾನು ಆಲ್‍ರೌಂಡರ್ ಜವಾಬ್ದಾರಿ ನಿರ್ವಹಿಸಿದ್ದೆ. ಕ್ರಿಕೆಟ್‍ನಲ್ಲಿಯೇ ವೃತ್ತಿಜೀವನ ಆರಂಭಿಸಲು ಬಯಸಿದ್ದೆ. ಆದರೆ ಸಿ.ಕೆ.ನಾಯ್ಡು ಟೂರ್ನಿಗೆ ಆಯ್ಕೆಯಾದಾಗ 600 ರೂ. ಶುಲ್ಕ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ. ಆಗ ಯಾರನ್ನ ಕೇಳಬೇಕೆಂದು ತಿಳಿದಿರಲಿಲ್ಲ. ಅಂದಿನಿಂದ ಕ್ರಿಕೆಟ್ ಮನೆಯಿಂದ ಹೊರ ಬಂದುಬಿಟ್ಟೆ” ಎಂದು ಹೇಳಿದ್ದರು.

Irrfan Khan Cricket B

ನಂತರದ ದಿನಗಳಲ್ಲಿ ಇರ್ಫಾನ್ ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (ಎನ್‍ಎಸ್‍ಡಿ)ದಲ್ಲಿ ಪ್ರವೇಶ ಪಡೆದರು. ಅದಕ್ಕಾಗಿ ಅವರಿಗೆ 300 ರೂ. ಅಗತ್ಯವಿತ್ತು. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಸಹೋದರಿಯೇ ಹಣದ ವ್ಯವಸ್ಥೆ ಮಾಡಿದ್ದರು. 1994-98ರವರೆಗೆ ‘ಚಂದ್ರಕಾಂತ’ ಹಾಗೂ ‘ಬನೇಗಿ ಅಪ್ನಿ ಬಾತ್’ ನಂತಹ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದ ಇರ್ಫಾನ್ ಖಾನ್, 1988ರಲ್ಲಿ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ ಆಗಿರುವಾಗಲೇ ‘ಸಲಾಮ್ ಬಾಂಬೆ’ ಚಿತ್ರದಲ್ಲಿ ನಟನೆಯ ಆಹ್ವಾನ ಪಡೆದುಕೊಂಡಿದ್ರು. ಅಂದಿನಿಂದ ಕ್ರಿಕೆಟ್ ವೃತ್ತಿ ಬದುಕಿನ ಕಡೆಗೆ ಅವರು ತಿರುಗಿ ನೋಡಲಿಲ್ಲ.

irrfan khan

“ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಕ್ಕೆ ನನಗೆ 300 ರೂ. ಬೇಕಿತ್ತು. ಅಷ್ಟು ಹಣವನ್ನು ಹೊಂದಿಸುವುದು ನನಗೆ ಕಷ್ಟಕರವಾಗಿತ್ತು. ನನ್ನ ತಂಗಿ ಅಂತಿಮವಾಗಿ ಹಣವನ್ನು ಹೊಂದಿಸಿ ಕೊಟ್ಟಿದ್ದಳು” ಎಂದು ಇರ್ಫಾನ್ ಖಾನ್ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದರು.

“ಕ್ರಿಕೆಟ್ ಬಿಟ್ಟುಕೊಡುವುದು ಪ್ರಜ್ಞಾಪೂರ್ವಕ ನಿರ್ಧಾರ. ಇಡೀ ದೇಶದಲ್ಲಿ ಕೇವಲ 11 ಆಟಗಾರರಿದ್ದಾರೆ. ನಟರ ವಿಚಾರಕ್ಕೆ ಬಂದ್ರೆ ಮಿತಿ ಎನ್ನುವುದೇ ಇಲ್ಲ. ನಟನೆಯಲ್ಲಿ ಯಾವುದೇ ವಯಸ್ಸಿನ ಮಿತಿಯಿಲ್ಲ? ಸಿನಿಮಾ ರಂಗದಲ್ಲಿ ನೀವೇ ನಿಮ್ಮ ಸ್ವಂತ ಆಯುಧ” ಎಂದು ತಮ್ಮ ಸಿನಿಮಾ ಬದುಕಿನ ಆಯ್ಕೆಯನ್ನು ಖಾನ್ ಸಮರ್ಥಿಸಿಕೊಂಡಿದ್ದರು.

irrfan khan 2

ಟಿ20 ಕ್ರಿಕೆಟ್‍ನ ಆಗಮನವು ಆಟವನ್ನು ಹಾಳು ಮಾಡಿದೆ ಎಂದು ಇರ್ಫಾನ್ ಖಾನ್ ವಿಮರ್ಶಾತ್ಮಕ ಹೇಳಿಕೆ ನೀಡಿದ್ದರು. ಅವರು ಸಾಂಪ್ರದಾಯಿಕ ಮಾದರಿ ಟೆಸ್ಟ್ ಪಂದ್ಯದ ದೊಡ್ಡ ಅಭಿಮಾನಿಯಾಗಿದ್ದರು.

”ಕ್ರಿಕೆಟ್ ಕಾ ಡೌನ್ ಹೋನಾ ಭೀ ಚಾಹಿಯೆ! ಕ್ರಿಕೆಟ್ ಸಮಯ ವ್ಯರ್ಥದ ಆಟವಾಗಿ ಪರಿಣಮಿಸಿದೆ. ಟೆಸ್ಟ್ ಪಂದ್ಯದ ಮೋಡಿ, ಆಟಕ್ಕೆ ಹೋಲಿಸಿದರೆ ಈ ಟಿ20 ಅಷ್ಟು ಅದ್ಬುತವಾಗಿಲ್ಲ. ಟಿ20 ಕ್ರಿಕೆಟ್ ಅತ್ಯಾಚಾರದಂತೆ ಕಾಣುತ್ತದೆ. ಎಲ್ಲಾ ರೀತಿಯ ಕೃತ್ಯಗಳು ಅಲ್ಲಿ ನಡೆಯುತ್ತಿವೆ” ಎಂದು ಹೇಳಿದ್ದರು.

TAGGED:actorbollywoodCK nayudu trophycricketirrfan khanPublic TVಇರ್ಫಾನ್ ಖಾನ್ಕ್ರಿಕೆಟ್ಪಬ್ಲಿಕ್ ಟಿವಿಬಾಲಿವುಡ್ಸಿ.ಕೆ.ನಾಯ್ಡು ಟೂರ್ನಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
7 minutes ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
24 minutes ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
34 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
1 hour ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
2 hours ago
Ishan Kishan
Cricket

ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?