Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್

Bollywood

600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಕನಸು ಕೈಚೆಲ್ಲಿಕೊಂಡಿದ್ದ ಇರ್ಫಾನ್ ಖಾನ್

Public TV
Last updated: April 29, 2020 4:34 pm
Public TV
Share
2 Min Read
Irrfan Khan Cricket
SHARE

ಮುಂಬೈ: ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅತ್ಯುತ್ತಮ ನಟರಲ್ಲಿ ಒಬ್ಬರಾದ ಇರ್ಫಾನ್ ಖಾನ್ ಅವರು ತಮ್ಮ 53ನೇ ವಯಸ್ಸಿನಲ್ಲಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರನ್ನು ನೆನೆದು ಅಭಿಮಾನಿಗಳು ಕಣ್ಣೀರಾಗಿದ್ದಾರೆ.

ಇರ್ಫಾನ್ ಖಾನ್ ಬಾಲಿವುಡ್‍ನಲ್ಲಿ ಮಹತ್ತರ ಕಾರ್ಯ ಮಾಡಿದ್ದರೂ ಅವರೊಳಗೆ ಒಬ್ಬ ಕ್ರಿಕೆಟಿಗನಿದ್ದ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಇರ್ಫಾನ್ ಖಾನ್ 600 ರೂ. ಇಲ್ಲದ್ದಕ್ಕೆ ಕ್ರಿಕೆಟ್ ಜಗತ್ತಿನಿಂದ ಹೊರ ಬಂದಿದ್ದ ಕಥೆ ನಿಮಗೆ ಗೊತ್ತಾ?

Irrfan Khan Cricket A

ಹೌದು.. ಇರ್ಫಾನ್ 20ನೇ ವಯಸ್ಸಿನಲ್ಲಿ ಕ್ರಿಕೆಟಿಗನಾಗಬೇಕೆಂಬ ಕನಸು ಕಟ್ಟಿಕೊಂಡಿದ್ದರು. ಅದಕ್ಕೆ ತಕ್ಕಂತೆ ಅಭ್ಯಾಸ ನಡೆಸಿದ್ದ ಅವರು ಸಿಕೆ ನಾಯ್ಡು ಟ್ರೋಫಿಯಲ್ಲಿ ಆಡಲು ಆಯ್ಕೆಯಾಗಿದ್ದರು. ಆದರೆ ಹಣದ ಕೊರತೆಯಿಂದಾಗಿ ಕ್ರಿಕೆಟ್ ಕನಸಿನ ಮನೆಯಿಂದ ಹೊರ ನಡೆದು ಬಂದು ಬಿಟ್ಟರು.

ಈ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಇರ್ಫಾನ್ ಖಾನ್, “ನಾನು ಕ್ರಿಕೆಟ್ ಆಡಿದ್ದೇನೆ, ಕ್ರಿಕೆಟಿಗನಾಗಲು ಬಯಸಿದ್ದೆ. ಜೈಪುರ ತಂಡದಲ್ಲಿ ಕಿರಿಯ ಆಟಗಾರನಾಗಿದ್ದ ನಾನು ಆಲ್‍ರೌಂಡರ್ ಜವಾಬ್ದಾರಿ ನಿರ್ವಹಿಸಿದ್ದೆ. ಕ್ರಿಕೆಟ್‍ನಲ್ಲಿಯೇ ವೃತ್ತಿಜೀವನ ಆರಂಭಿಸಲು ಬಯಸಿದ್ದೆ. ಆದರೆ ಸಿ.ಕೆ.ನಾಯ್ಡು ಟೂರ್ನಿಗೆ ಆಯ್ಕೆಯಾದಾಗ 600 ರೂ. ಶುಲ್ಕ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ. ಆಗ ಯಾರನ್ನ ಕೇಳಬೇಕೆಂದು ತಿಳಿದಿರಲಿಲ್ಲ. ಅಂದಿನಿಂದ ಕ್ರಿಕೆಟ್ ಮನೆಯಿಂದ ಹೊರ ಬಂದುಬಿಟ್ಟೆ” ಎಂದು ಹೇಳಿದ್ದರು.

Irrfan Khan Cricket B

ನಂತರದ ದಿನಗಳಲ್ಲಿ ಇರ್ಫಾನ್ ಪ್ರತಿಷ್ಠಿತ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (ಎನ್‍ಎಸ್‍ಡಿ)ದಲ್ಲಿ ಪ್ರವೇಶ ಪಡೆದರು. ಅದಕ್ಕಾಗಿ ಅವರಿಗೆ 300 ರೂ. ಅಗತ್ಯವಿತ್ತು. ಅವರ ಬಳಿ ಅಷ್ಟು ಹಣವಿಲ್ಲದಿದ್ದಾಗ ಸಹೋದರಿಯೇ ಹಣದ ವ್ಯವಸ್ಥೆ ಮಾಡಿದ್ದರು. 1994-98ರವರೆಗೆ ‘ಚಂದ್ರಕಾಂತ’ ಹಾಗೂ ‘ಬನೇಗಿ ಅಪ್ನಿ ಬಾತ್’ ನಂತಹ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದ ಇರ್ಫಾನ್ ಖಾನ್, 1988ರಲ್ಲಿ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ ಆಗಿರುವಾಗಲೇ ‘ಸಲಾಮ್ ಬಾಂಬೆ’ ಚಿತ್ರದಲ್ಲಿ ನಟನೆಯ ಆಹ್ವಾನ ಪಡೆದುಕೊಂಡಿದ್ರು. ಅಂದಿನಿಂದ ಕ್ರಿಕೆಟ್ ವೃತ್ತಿ ಬದುಕಿನ ಕಡೆಗೆ ಅವರು ತಿರುಗಿ ನೋಡಲಿಲ್ಲ.

irrfan khan

“ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಕ್ಕೆ ನನಗೆ 300 ರೂ. ಬೇಕಿತ್ತು. ಅಷ್ಟು ಹಣವನ್ನು ಹೊಂದಿಸುವುದು ನನಗೆ ಕಷ್ಟಕರವಾಗಿತ್ತು. ನನ್ನ ತಂಗಿ ಅಂತಿಮವಾಗಿ ಹಣವನ್ನು ಹೊಂದಿಸಿ ಕೊಟ್ಟಿದ್ದಳು” ಎಂದು ಇರ್ಫಾನ್ ಖಾನ್ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದರು.

“ಕ್ರಿಕೆಟ್ ಬಿಟ್ಟುಕೊಡುವುದು ಪ್ರಜ್ಞಾಪೂರ್ವಕ ನಿರ್ಧಾರ. ಇಡೀ ದೇಶದಲ್ಲಿ ಕೇವಲ 11 ಆಟಗಾರರಿದ್ದಾರೆ. ನಟರ ವಿಚಾರಕ್ಕೆ ಬಂದ್ರೆ ಮಿತಿ ಎನ್ನುವುದೇ ಇಲ್ಲ. ನಟನೆಯಲ್ಲಿ ಯಾವುದೇ ವಯಸ್ಸಿನ ಮಿತಿಯಿಲ್ಲ? ಸಿನಿಮಾ ರಂಗದಲ್ಲಿ ನೀವೇ ನಿಮ್ಮ ಸ್ವಂತ ಆಯುಧ” ಎಂದು ತಮ್ಮ ಸಿನಿಮಾ ಬದುಕಿನ ಆಯ್ಕೆಯನ್ನು ಖಾನ್ ಸಮರ್ಥಿಸಿಕೊಂಡಿದ್ದರು.

irrfan khan 2

ಟಿ20 ಕ್ರಿಕೆಟ್‍ನ ಆಗಮನವು ಆಟವನ್ನು ಹಾಳು ಮಾಡಿದೆ ಎಂದು ಇರ್ಫಾನ್ ಖಾನ್ ವಿಮರ್ಶಾತ್ಮಕ ಹೇಳಿಕೆ ನೀಡಿದ್ದರು. ಅವರು ಸಾಂಪ್ರದಾಯಿಕ ಮಾದರಿ ಟೆಸ್ಟ್ ಪಂದ್ಯದ ದೊಡ್ಡ ಅಭಿಮಾನಿಯಾಗಿದ್ದರು.

”ಕ್ರಿಕೆಟ್ ಕಾ ಡೌನ್ ಹೋನಾ ಭೀ ಚಾಹಿಯೆ! ಕ್ರಿಕೆಟ್ ಸಮಯ ವ್ಯರ್ಥದ ಆಟವಾಗಿ ಪರಿಣಮಿಸಿದೆ. ಟೆಸ್ಟ್ ಪಂದ್ಯದ ಮೋಡಿ, ಆಟಕ್ಕೆ ಹೋಲಿಸಿದರೆ ಈ ಟಿ20 ಅಷ್ಟು ಅದ್ಬುತವಾಗಿಲ್ಲ. ಟಿ20 ಕ್ರಿಕೆಟ್ ಅತ್ಯಾಚಾರದಂತೆ ಕಾಣುತ್ತದೆ. ಎಲ್ಲಾ ರೀತಿಯ ಕೃತ್ಯಗಳು ಅಲ್ಲಿ ನಡೆಯುತ್ತಿವೆ” ಎಂದು ಹೇಳಿದ್ದರು.

TAGGED:actorbollywoodCK nayudu trophycricketirrfan khanPublic TVಇರ್ಫಾನ್ ಖಾನ್ಕ್ರಿಕೆಟ್ಪಬ್ಲಿಕ್ ಟಿವಿಬಾಲಿವುಡ್ಸಿ.ಕೆ.ನಾಯ್ಡು ಟೂರ್ನಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
5 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
6 minutes ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
34 minutes ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
39 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?